AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಿಯಾಳದಲ್ಲಿ ಜಿಂಕೆ ಭೇಟೆ; ಇಬ್ಬರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ(Haliyala)  ತಾಲೂಕಿನ ರಾಮಾಪುರದ ಮೊದಲಗೇರಾದಲ್ಲಿ ಜಿಂಕೆ ಭೇಟೆಯಾಡಿ ಮಾಂಸವನ್ನು ಹಂಚಿಕೊಳ್ಳುತ್ತಿದ್ದ ವೇಳೆ ಪೋಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಮೊದಲಗೇರಾ ನಿವಾಸಿಗಳಾದ ಪರಶುರಾಮ ಶಿವಾಜಿ ಕೊಡಗೇಕರ (37 ), ಸುನೀಲ ಮಾವಳು ತುಫಾರಿ (31) ಬಂಧಿತ ಆರೋಪಿಗಳು.

ಹಳಿಯಾಳದಲ್ಲಿ ಜಿಂಕೆ ಭೇಟೆ; ಇಬ್ಬರ ಬಂಧನ
ಹಳಿಯಾಳದಲ್ಲಿ ಜಿಂಕೆ ಬೇಟೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Mar 16, 2024 | 10:14 PM

Share

ಉತ್ತರ ಕನ್ನಡ, ಮಾ.16: ವನ್ಯ ಪ್ರಾಣಿಗಳ ಸಂತತಿ ನಶಿಸಿ ಹೋಗುತ್ತಿದ್ದು, ಇದರ ಮಧ್ಯೆ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಅದರಂತೆ ಇದೀಗ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ(Haliyala)  ತಾಲೂಕಿನ ರಾಮಾಪುರದ ಮೊದಲಗೇರಾದಲ್ಲಿ ಜಿಂಕೆ ಭೇಟೆಯಾಡಿ ಮಾಂಸವನ್ನು ಹಂಚಿಕೊಳ್ಳುತ್ತಿದ್ದ ವೇಳೆ ಪೋಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಮೊದಲಗೇರಾ ನಿವಾಸಿಗಳಾದ ಪರಶುರಾಮ ಶಿವಾಜಿ ಕೊಡಗೇಕರ (37 ), ಸುನೀಲ ಮಾವಳು ತುಫಾರಿ (31) ಬಂಧಿತ ಆರೋಪಿಗಳು.

ಅಕ್ರಮವಾಗಿ ನಾಡಬಂದೂಕನ್ನು ಹೊಂದಿದ್ದ ಆರೋಪಿಗಳು

ಇನ್ನು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ, ಬಂಧಿತರಿಂದ ಒಂಟಿ ನಳಿಕೆಯ ನಾಡ ಬಂದೂಕು, ಕಟ್ಟಿಗೆಯ ಹಿಡಿಕೆ ಇರುವ ಕಬ್ಬಿಣದ ಸಣ್ಣ ಕೈ ಕೊಡ, ದೊಡ್ಡ ಗಾತ್ರದ ಕಬ್ಬಿಣದ ಕೊಡಲಿ ಜೊತೆಗೆ 7.940ಕೆ.ಜಿ. ಮಾಂಸಗಳಿರುವ ಮೂರು ಪ್ಲಾಸ್ಟಿಕ್ ಬ್ಯಾಗ್‌ಗಳು ಹಾಗೂ ಜಿಂಕೆಯ ತಲೆಬುರುಡೆಯನ್ನ ವಶಕ್ಕೆ ಪಡೆಯಲಾಗಿದೆ. ಇವರು ಯಾವುದೇ ಪರವಾನಗಿ ಪಡೆಯದೇ ಅಕ್ರಮವಾಗಿ ನಾಡಬಂದೂಕನ್ನು ಹೊಂದಿದ್ದರು.

ಇದನ್ನೂ ಓದಿ:ಕರಡಿಯನ್ನು ಬೇಟೆಯಾಡಿ ಕೊಂದು ತಿಂದ ಹುಲಿ! ಸಿಕ್ಕಾಪಟ್ಟೆ ವೈರಲ್ ಆಯ್ತು ವಿಡಿಯೋ

ವನ್ಯ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಣೆ

ಜಿಂಕೆಯನ್ನು ಬೇಟೆಯಾಡಿ ತಲೆಯ ಭಾಗವನ್ನು ಸುಟ್ಟು, ಇನ್ನುಳಿದ ಮಾಂಸವನ್ನು ಸಮವಾಗಿ ಹಂಚಿಕೊಳ್ಳಲು ಕತ್ತರಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಸಂರಕ್ಷಣಾ ಕಾಯ್ದೆ 1972 ಹಾಗೂ ಭಾರತೀಯ ಆಯುಧ ಕಾಯ್ದೆ 1959ರ ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ. ಅರಣ್ಯ ಸಂಚಾರಿ ದಳದ ಪಿಎಸ್ಐ ಕಿರಣ್​ ಪಾಟೀಲ್​ ಅವರು ಪ್ರಕರಣ ದಾಖಲಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಪೋಲೀಸ ಸಿಬ್ಬಂದಿ ಮುಲ್ಲಾ, ಚಂದ್ರಶೇಖರ್​, ಪ್ರಶಾಂತ, ಭಾನು ಕಾಂತ, ಗಜಾನನ , ಮಂಜುನಾಥ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?