ಮದುವೆಯಾಗುವುದಾಗಿ ನಂಬಿಸಿ ಮೋಸ; ಪೊಲೀಸ್ ಕಾನ್‍ಸ್ಟೆಬಲ್ ವಿರುದ್ಧ ಹಾಸನ ಯುವತಿ ದೂರು

ಹಾಸನ ಜಿಲ್ಲಾ ಚೆನ್ನರಾಯಪಟ್ಟಣ ಮೂಲದ ಸುಚಿತ್ರಾ ಎಂಬ ಯುವತಿಗೆ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಯುವತಿಯಿಂದ ಕಾನ್‍ಸ್ಟೆಬಲ್ ಗಿರೀಶ್ 20 ಲಕ್ಷ ಪಡೆದಿದ್ದ. ಹಣ ಪಡೆದು ಮೋಸ ಮಾಡಿದ್ದು ಸದ್ಯ ಯುವತಿ ಈ ಸಂಬಂಧ 420 ಕೇಸ್ ದಾಖಲಿಸಿದ್ದಾರೆ. ನಿನ್ನೆ ರಾತ್ರಿ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮದುವೆಯಾಗುವುದಾಗಿ ನಂಬಿಸಿ ಮೋಸ; ಪೊಲೀಸ್ ಕಾನ್‍ಸ್ಟೆಬಲ್ ವಿರುದ್ಧ ಹಾಸನ ಯುವತಿ ದೂರು
ಪೊಲೀಸ್ ಕಾನ್‍ಸ್ಟೆಬಲ್ ಗಿರೀಶ್
Follow us
| Updated By: ಆಯೇಷಾ ಬಾನು

Updated on:Jun 24, 2024 | 11:31 AM

ಕಾರವಾರ, ಜೂನ್.24: ಹಾಸನ ಮೂಲದ ಯುವತಿಯೊಬ್ಬರು ಪೊಲೀಸ್ ಕಾನ್‍ಸ್ಟೆಬಲ್ ಮೇಲೆ 420 ಕೇಸ್ (420 Case) ದಾಖಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ಪೊಲೀಸ್ ಠಾಣೆಯಲ್ಲಿ (Mundgod Police Station) ಮುಂಡಗೊಡ ಪೊಲೀಸ್ ಠಾಣೆ ಕಾನ್‍ಸ್ಟೆಬಲ್ ಗಿರೀಶ್ ಎಸ್ ಎಮ್ ವಿರುದ್ಧ ಸುಚಿತ್ರಾ ಎಂಬ ಯುವತಿ ಕೇಸ್ ದಾಖಲಿಸಿದ್ದಾರೆ.

ಹಾಸನ ಜಿಲ್ಲಾ ಚೆನ್ನರಾಯಪಟ್ಟಣ ಮೂಲದ ಸುಚಿತ್ರಾ ಎಂಬ ಯುವತಿಗೆ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಯುವತಿಯಿಂದ ಕಾನ್‍ಸ್ಟೆಬಲ್ ಗಿರೀಶ್ 20 ಲಕ್ಷ ಪಡೆದಿದ್ದ. ಹಣ ಪಡೆದ ಬಳಿಕ ಮದುವೆ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಮೋಸ ಮಾಡಿದ್ದ. ಸುಚಿತ್ರಾಳಿಂದ ಪಡೆದ ಹಣ ಕೂಡ ಹಿಂತಿರುಗಿಸಲು ನಿರಾಕರಿಸಿದ್ದ. ಈ ವಿಚಾರವಾಗಿ ಕೆಲ ತಿಂಗಳ ಹಿಂದೆ ಉತ್ತರ ಕನ್ನಡ ಎಸ್ ಪಿ ಗೆ ದೂರು ನೀಡಿದ್ದಳು. ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಹಣ ಹಿಂತಿರುಗಿಸುವುದಾಗಿ ಗಿರೀಶ್ ಒಪ್ಪಿದ್ದ. ಆದರೆ ಇದುವರೆಗೂ ಯುವತಿಗೆ ಹಣ ಹಿಂತಿರುಗಿಸಿಲ್ಲ. ಹೀಗಾಗಿ ನಿನ್ನೆ ರಾತ್ರಿ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಎಣ್ಣೆ ಹೊಡಿಯುವ ವಿಚಾರಕ್ಕಾಗಿ ನಡೆಯಿತಿ ಆಕಾಶ್​ ಮಠಪತಿ ಕೊಲೆ!

ವಿದ್ಯುತ್ ಸ್ಪರ್ಶಿಸಿ ಮತ್ತೊಂದು ಕಾಡಾನೆ ಸಾವು

ವಿದ್ಯುತ್ ಸ್ಪರ್ಶಿಸಿ ಮತ್ತೊಂದು ಕಾಡಾನೆ ಮೃತಪಟ್ಟಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರುವತ್ತೊಕ್ಕಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಈಶ್ವರ ರಾವ್ ತೋಟದಲ್ಲಿ ಆನೆ ಕಳೇಬರ ಪತ್ತೆಯಾಗಿದೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶದಿಂದ ಕಾಡಾನೆ ಮೃತಪಟ್ಟಿದೆ ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು. ಜಿಲ್ಲೆಯಲ್ಲಿ ವಾರದಲ್ಲಿ 3 ಕಾಡಾನೆಗಳು ಮೃತಪಟ್ಟಿವೆ.

ಸೆರೆಸಿಕ್ಕ ಚಿರತೆ ಜತೆ ಸೆಲ್ಫಿ ತೆಗೆದುಕೊಳ್ಳುವಾಗ ದಾಳಿ

ಸೆರೆಸಿಕ್ಕ ಚಿರತೆ ಜತೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಅವಾಂತರ ಮಾಡಿಕೊಂಡಿದ್ದಾನೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಯಲಹಳ್ಳಿಯಲ್ಲಿ ಘಟನೆ ನಡೆದಿದ್ದು, ಗ್ರಾಮಕ್ಕೆ ಎಂಟ್ರಿಕೊಟ್ಟಿದ್ದ ಚಿರತೆಯನ್ನ ಸೆರೆಹಿಡಿಯಲಾಗಿತ್ತು. ಆಗ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕ ಜಯಶಂಕರ್​ನನ್ನು ಚಿರತೆ ಪರಚಿದೆ. ಗಾಯಾಳು ಜಯಶಂಕರ್​ಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:27 am, Mon, 24 June 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ