AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ ಜಿಲ್ಲೆಯ ಜನರ ಹೋರಾಟಕ್ಕೆ ಬೆಂಬಲ ಘೋಷಿಸಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

ಕೊವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುತ್ತೇವೆಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೊರೊನಾ ಸಂಖ್ಯೆ ಇಳಿದ ಮೇಲೆ ತಣ್ಣಗಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಜನರ ಹೋರಾಟಕ್ಕೆ ಬೆಂಬಲ ಘೋಷಿಸಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Jul 25, 2022 | 11:52 AM

Share

ಬೆಂಗಳೂರು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ (Super Speciality hospital) ಉತ್ತರ ಕನ್ನಡ ಜಿಲ್ಲೆಯ ಜನರು ಹೋರಾಟ ನಡೆಸುತ್ತಿರುವ ವಿಚಾರಕ್ಕೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಜನರ ಹೋರಾಟಕ್ಕೆ ಬೆಂಬಲ ಘೋಷಿಸಿದ್ದಾರೆ. ವರ್ಷಗಳ ಕಾಲದ ನ್ಯಾಯಯುತವಾದ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಬೇಕು. ಸಿಎಂ, ಆರೋಗ್ಯ ಸಚಿವರೇ ಖುದ್ದು ಕ್ರಮ ವಹಿಸಬೇಕು. ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಗೆ ಹೋಗಬೇಕು. ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದು ಹೆಚ್​ಡಿಕೆ ಹೇಳಿದ್ದಾರೆ.

ಕೊವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುತ್ತೇವೆಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೊರೊನಾ ಸಂಖ್ಯೆ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟಿಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ ಎಂದು ಕುಮಾರಸ್ವಾಮಿ  ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಇನ್ನೆಷ್ಟು ಆ್ಯಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಸರ್ಕಾರ ಕಣ್ಣು ತೆರೆಯಬೇಕು ಎಂದಿದ್ದಾರೆ.

ಇದನ್ನೂ ಓದಿ
Image
Monkeypox Case: ಕಾಮರೆಡ್ಡಿಯಲ್ಲಿ ತೆಲಂಗಾಣದ ಮೊದಲ ಮಂಕಿಪಾಕ್ಸ್​​ ಪ್ರಕರಣ ಪತ್ತೆ
Image
ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಗಾದಿಗೆ ಕಿತ್ತಾಟ: ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ ಬಿ.ವೈ.ವಿಜಯೇಂದ್ರ
Image
ಪೋಷಕರೊಂದಿಗೆ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಮಕ್ಕಳು ಹಿಂಜರಿಯುತ್ತಾರೆ ಏಕೆ?
Image
IND vs WI: ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಏಕದಿನ ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಗಾದಿಗೆ ಕಿತ್ತಾಟ: ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ ಬಿ.ವೈ.ವಿಜಯೇಂದ್ರ

Published On - 11:50 am, Mon, 25 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ