AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ ಜಿಲ್ಲಾಯಾದ್ಯಂತ ಭಾರಿ ಮಳೆ; ಜಲಪಾತಗಳಿಗೆ ಜೀವ ಕಳೆ, ಜನರ ಸೆಳೆಯುತ್ತಿರುವ ಪ್ರವಾಸಿ ತಾಣಗಳು

ಕಳೆದ ಒಂದು ವಾರದಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಜಲಪಾತಗಳಿಗೆ ಜೀವ ಕಳೆ ಬಂದಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ಮತ್ತೊಂದೆಡೆ, ಸಮುದ್ರದಲ್ಲಿ ಅಲೆಗಳ ಅಬ್ಬರ ಹಚ್ಚಾಗಿದ್ದು, ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲಾಯಾದ್ಯಂತ ಭಾರಿ ಮಳೆ; ಜಲಪಾತಗಳಿಗೆ ಜೀವ ಕಳೆ, ಜನರ ಸೆಳೆಯುತ್ತಿರುವ ಪ್ರವಾಸಿ ತಾಣಗಳು
ಉತ್ತರ ಕನ್ನಡ ಜಿಲ್ಲಾಯಾದ್ಯಂತ ಭಾರಿ ಮಳೆ; ಜಲಪಾತಗಳಿಗೆ ಜೀವ ಕಳೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jun 08, 2024 | 11:03 AM

Share

ಕಾರವಾರ, ಜೂನ್ 8: ಉತ್ತರ ಕನ್ನಡ (Uttara Kannada) ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಶುಕ್ರವಾರ ಬೆಳಿಗ್ಗೆಯಿಂದ ಸುರಿದ ಭಾರಿ ಮಳೆಯಿಂದಾಗಿ (Heavy Rains) ವಾಹನ ಸವಾರರು ಪರದಾಡುವಂತಾಯಿತು. ಬತ್ತಿ ಹೋಗಿದ್ದ ಜಿಲ್ಲೆಯ ಜಲಪಾತಗಳಿಗೆ ಮಳೆಯ ಸಿಂಚನದಿಂದ ಜೀವಕಳೆ ಬಂದಿದ್ದು, ಸಮುದ್ರದಲ್ಲಿ ಅಲೆಯ ಅಬ್ಬರ ಹೆಚ್ಚಾದ ಕಾರಣ ಜಿಲ್ಲಾಡಳಿತ ಸಾರ್ವಜನಿಕರಿಗೆ ಕಡಲ ತೀರಕ್ಕೆ ನಿರ್ಬಂಧ ಹೇರಿದೆ.

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬಿಸಿಲಿನ ಬೇಗೆಯಿಂದ ಒಣಗಿ ಬರಡಾಗಿದ್ದ ಜಿಲ್ಲೆಯಲ್ಲಿನ ಪಶ್ಚಿಮ ಘಟ್ಟಗಳು ಮಳೆಯಿಂದ ಹಚ್ಚ ಹಸಿರಾಗಿದ್ದರೆ, ಇನ್ನೊಂದೆಡೆ ಅಲ್ಲಲ್ಲಿ ಬೆಟ್ಟ ಗುಡ್ಡಗಳನ್ನು ಸೀಳಿ ಧರೆಗಿಳಿಯುತ್ತಿರುವ ಜಲಪಾತಗಳ ದೃಶ್ಯ ನೋಡಗರನ್ನು ಮಂತ್ರ ಮುಗ್ಧರನ್ನಾಗಿಸುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಹತ್ತು ಹಲವು ಜಲಪಾತಗಳಿವೆ. ಆದರೆ, ಬೆಸಿಗೆಯಲ್ಲಿ ಬಹುತೇಕ ಜಲಪಾತಗಳು ಬತ್ತಿಹೋಗಿದ್ದವು. ಕಳೆದ ಒಂದು ವಾರದಿಂದ ಅಲ್ಲಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಪಾತಗಳಿಗೆ ಜೀವ ಕಳೆ ಬಂದಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

ಸದ್ಯ ಜಲಪಾತಗಳಲ್ಲಿ ನೀರಿನ ಮಟ್ಟ ಕಡಿಮೆ ಇರುವುದರಿಂದ ಯಾವುದೇ ಅಪಾಯ ಇಲ್ಲ. ಹಾಗಾಗಿ ಹಚ್ಚ ಹಸಿರು ಬೆಟ್ಟ ಗುಡ್ಡಗಳ ಮಧ್ಯದ ಜಲಪಾತಗಳಲ್ಲಿ ಯುವಕ ಯುವತಿಯರು ಎಂಜಾಯ್ ಮಾಡುತ್ತಿರುವ ದೃಶ್ಯ ಜಿಲ್ಲೆಯ ಕೆಲವು ಜಲಪಾತಗಳಲ್ಲಿ ಕಾಣಸಿಗುತ್ತಿತ್ತು.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಭಾರೀ ಮಳೆ: ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ನುಗ್ಗಿದ ನೀರು; ಆತ್ಮಲಿಂಗ ಜಲಾವೃತ

ಮಳೆಯ ಅಬ್ಬರದ ಮಧ್ಯೆ ಸಮುದ್ರದ ಅಲೆಗಳ ಅಬ್ಬರವೂ ಸಹಜವಾಗಿ ಹೆಚ್ಚಾಗುತ್ತಿರುವ ಕಾರಣ, ಮೀನುಗಾರರು ಹಾಗೂ ಪ್ರವಾಸಿಗರು ಯಾರೂ ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಜಿಲ್ಲಾಡಳಿಯ ಖಡಕ್ ಸೂಚನೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರಕ್ಕೆ ಯಾರೂ ಕೂಡ ಇಳಿಯದಂತೆ ನಿರ್ಬಂಧ ಹೇರಿ ಬೊರ್ಡ್​​​ಗಳನ್ನು ಹಾಕಲಾಗಿದೆ. ಪ್ರತಿ ಬೀಚ್ ಗಳಲ್ಲೂ ಗಾರ್ಡ್​​ಗಳನ್ನು ನೇಮಕ ಮಾಡಿ ನಿಗಾ ಇಡುವ ಕೆಲಸ ಮಾಡಿದೆ. ಮುಂಡಗೋಡ, ಯಲ್ಲಾಪೂರ ಹಾಗೂ ಶಿರಸಿ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳಿಗೆ ಮುಂಗಾರು ಮಳೆ ಚುರುಕುಮುಟ್ಟಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ