AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಮಳೆಗೆ ಮನೆ ಕುಸಿತ; ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ

ನಾವು ಹೊರಗಡೆ ಇದಿದ್ದಕ್ಕೆ ಬಚಾವ್ ಆಗಿದ್ದೇವೆ. ಈಗ ಅಳಿದುಳಿದ ಸಾಮಗ್ರಿ ತೆಗೆದುಕೊಂಡು ಹೊಗಲು ಬಂದಿದ್ದಿವೆ. ಊಟ ಮಾಡುವುದಕ್ಕೆ ಅಕ್ಕಿಯೂ ಇಲ್ಲ, ಗಂಜಿ ಕೇಂದ್ರಕ್ಕೆ ಹೋಗಬೇಕು ಎಂದು ಕುಸಿದ ಮನೆ ಕಂಡು ದಂಪತಿ ಭಾವುಕರಾಗಿದ್ದಾರೆ.

ಕಾರವಾರ: ಮಳೆಗೆ ಮನೆ ಕುಸಿತ; ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ
ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ
TV9 Web
| Edited By: |

Updated on:Jul 25, 2021 | 2:08 PM

Share

ಉತ್ತರ ಕನ್ನಡ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅದೆಷ್ಟೋ ಜನರು ಸಂಕಷ್ಟ ಎದುರಿಸುವಂತಾಗಿದೆ. ಬೆಳಗಾವಿ, ರಾಯಚೂರು, ಗದಗ ಮತ್ತು ಉತ್ತರ ಕನ್ನಡದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಅನೇಕರು ತಮ್ಮ ಸೂರು ಕಳೆದುಕೊಂಡು ಪ್ರಾಣಭಯದಿಂದ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯುವಂತಾಗಿದೆ. ಅದರಲ್ಲೂ ಉತ್ತರ ಕನ್ನಡದಲ್ಲಿ ಕಳೆದ 3 ದಿನಗಳಿಂದ ಭಾರೀ ಮಳೆಯಾಗಿದೆ. ಇದರಿಂದ ಗುಡ್ಡಗಳು ಕುಸಿದಿದ್ದು, ಅನೇಕ ಮನೆಗಳು ನೆಲಸಮವಾಗಿದೆ. ಹೀಗೆ ಮನೆ ಕಳೆದುಕೊಂಡವರಲ್ಲಿ ಅಂಕೋಲ ತಾಲೂಕಿನ ಹೊನ್ನಳ್ಳಿ ಗ್ರಾಮದ ಮಂಜುಳಾ ವಿಷ್ಣು ದಂಪತಿ ಕೂಡ ಒಬ್ಬರು.

ಮನೆ ಬಿಳುವಾಗ ನಮ್ಮ ಜೀವ ಉಳಿದಿದ್ದೆ ಹೆಚ್ಚು. ಮಳೆ ಹಾಗೂ ನೆರೆ ರಭಸಕ್ಕೆ ನಮ್ಮ ಕಣ್ಣೇದುರೇ ಮನೆ ನೆಲಸಮವಾಯಿತು. ನಾವು ಹೊರಗಡೆ ಇದಿದ್ದಕ್ಕೆ ಬಚಾವ್ ಆಗಿದ್ದೇವೆ. ಈಗ ಅಳಿದುಳಿದ ಸಾಮಗ್ರಿ ತೆಗೆದುಕೊಂಡು ಹೊಗಲು ಬಂದಿದ್ದಿವೆ. ಊಟ ಮಾಡುವುದಕ್ಕೆ ಅಕ್ಕಿಯೂ ಇಲ್ಲ, ಗಂಜಿ ಕೇಂದ್ರಕ್ಕೆ ಹೋಗಬೇಕು ಎಂದು ಕುಸಿದ ಮನೆ ಕಂಡು ದಂಪತಿ ಭಾವುಕರಾಗಿದ್ದಾರೆ.

ಆಧಾರ್ ಕಾಡ್೯ ಹಿಡಿದು ಎಲ್ಲಾ ದಾಖಲೆ ಪತ್ರ ಮನೆಯ ಜತೆಯೇ ಹೋಯಿತು. ಏನು ಮಾಡುವುದು ಎಂದು ತಿಳಿಯುತ್ತಿಲ್ಲ.ಊಟಕ್ಕೆ ಕಾಳಜಿ ಕೇಂದ್ರವೇ ಗತಿಯಾಗಿದೆ‌. ಮನೆಯಲ್ಲಿ ಒಂದು ಕಾಳು ಅಕ್ಕಿ ಉಳಿದಿಲ್ಲ ಎಂದು ಟಿವಿ9 ಡಿಜಿಟಲ್​ ಜತೆ ದಂಪತಿ ಅಳಲು ತೋಡಿಕೊಂಡಿದ್ದಾರೆ.

ಗುಳ್ಳಾಪುರ-ಹಳವಳ್ಳಿ ಸಂಪರ್ಕ ಸೇತುವೆ ನೀರುಪಾಲು ಗುಳ್ಳಾಪುರ-ಹಳವಳ್ಳಿ ಸಂಪರ್ಕ ಸೇತುವೆ ಕೊಚ್ಚಿಹೋದ ಹಿನ್ನೆಲೆ, ಸೇತುವೆ ಕೊಚ್ಚಿಹೋಗಿ 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ ಆಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಳವಳ್ಳಿ, ಹೆಗ್ಗಾರ, ಕಲ್ಲೇಶ್ವರ, ಶೇವ್ಕಾರ, ಕೊನಾಳ ಸೇರಿ 10ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ಗಂಗಾವಳಿ ನದಿ ಉಕ್ಕಿ ಹರಿದ ಪರಿಣಾಮ ಸೇತುವೆ‌ ಕೊಚ್ಚಿಹೋಗಿದೆ. 10ಕ್ಕೂ ಹೆಚ್ಚು ಗ್ರಾಮಗಳ ಸ್ಥಿತಿ ಈಗ ಅಕ್ಷರಶಃ ನಡುಗಡ್ಡೆಯಂತಗಿದೆ.

2019ರ ಪ್ರವಾಹದಲ್ಲಿ ಗ್ರಾಮಗಳ ಸಂಪರ್ಕಕ್ಕೆ ನಿರ್ಮಿಸಿದ್ದ 2 ತೂಗುಸೇತುವೆ ಕೊಚ್ಚಿಹೋಗಿದ್ದವು. ಇದೀಗ ಇದ್ದ ಒಂದು ಸಂಪರ್ಕ ಸೇತುವೆಯೂ ನೀರುಪಾಲಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಆನ್ಲೆ ಬಳಿ ಪ್ರವಾಹಕ್ಕೆ ಮನೆ ಕುಸಿದುಬಿದ್ದಿದೆ. ಮನೆ ಕುಸಿದುಬಿದ್ದ ಹಿನ್ನೆಲೆ ಮನೆಯ 6 ಜನರು ಬೀದಿಗೆ ಬಿದ್ದಂತಾಗಿದೆ. ಇದ್ದ ಮನೆ ಕಳೆದುಕೊಂಡು 6 ಜನ ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ:

ಭಾರಿ ಮಳೆಯಿಂದ ರಾಜ್ಯದ ಹಲವೆಡೆ ಮನೆ ಕುಸಿತ, ಚಿಕ್ಕಮಗಳೂರಿನಲ್ಲಿ ವೃದ್ಧರೊಬ್ಬರ ಸಾವು; ಸೇತುವೆಗಳು ಜಲಾವೃತ, ಸಂಪರ್ಕ ಕಡಿತ

Uttara Kannada: ಮನೆ, ಗುಡ್ಡ ಕುಸಿತ, ರಸ್ತೆ, ಸೇತುವೆ ನೀರುಪಾಲು, ಸಂಪರ್ಕ ಕಡಿತ; ಉತ್ತರ ಕನ್ನಡವಲ್ಲ ಇದು ತತ್ತರ ಕನ್ನಡ ಎಂದ ಜನ

Published On - 2:05 pm, Sun, 25 July 21

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ