AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಮಳೆಗೆ ಮನೆ ಕುಸಿತ; ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ

ನಾವು ಹೊರಗಡೆ ಇದಿದ್ದಕ್ಕೆ ಬಚಾವ್ ಆಗಿದ್ದೇವೆ. ಈಗ ಅಳಿದುಳಿದ ಸಾಮಗ್ರಿ ತೆಗೆದುಕೊಂಡು ಹೊಗಲು ಬಂದಿದ್ದಿವೆ. ಊಟ ಮಾಡುವುದಕ್ಕೆ ಅಕ್ಕಿಯೂ ಇಲ್ಲ, ಗಂಜಿ ಕೇಂದ್ರಕ್ಕೆ ಹೋಗಬೇಕು ಎಂದು ಕುಸಿದ ಮನೆ ಕಂಡು ದಂಪತಿ ಭಾವುಕರಾಗಿದ್ದಾರೆ.

ಕಾರವಾರ: ಮಳೆಗೆ ಮನೆ ಕುಸಿತ; ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ
ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ
TV9 Web
| Updated By: preethi shettigar|

Updated on:Jul 25, 2021 | 2:08 PM

Share

ಉತ್ತರ ಕನ್ನಡ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅದೆಷ್ಟೋ ಜನರು ಸಂಕಷ್ಟ ಎದುರಿಸುವಂತಾಗಿದೆ. ಬೆಳಗಾವಿ, ರಾಯಚೂರು, ಗದಗ ಮತ್ತು ಉತ್ತರ ಕನ್ನಡದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಅನೇಕರು ತಮ್ಮ ಸೂರು ಕಳೆದುಕೊಂಡು ಪ್ರಾಣಭಯದಿಂದ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯುವಂತಾಗಿದೆ. ಅದರಲ್ಲೂ ಉತ್ತರ ಕನ್ನಡದಲ್ಲಿ ಕಳೆದ 3 ದಿನಗಳಿಂದ ಭಾರೀ ಮಳೆಯಾಗಿದೆ. ಇದರಿಂದ ಗುಡ್ಡಗಳು ಕುಸಿದಿದ್ದು, ಅನೇಕ ಮನೆಗಳು ನೆಲಸಮವಾಗಿದೆ. ಹೀಗೆ ಮನೆ ಕಳೆದುಕೊಂಡವರಲ್ಲಿ ಅಂಕೋಲ ತಾಲೂಕಿನ ಹೊನ್ನಳ್ಳಿ ಗ್ರಾಮದ ಮಂಜುಳಾ ವಿಷ್ಣು ದಂಪತಿ ಕೂಡ ಒಬ್ಬರು.

ಮನೆ ಬಿಳುವಾಗ ನಮ್ಮ ಜೀವ ಉಳಿದಿದ್ದೆ ಹೆಚ್ಚು. ಮಳೆ ಹಾಗೂ ನೆರೆ ರಭಸಕ್ಕೆ ನಮ್ಮ ಕಣ್ಣೇದುರೇ ಮನೆ ನೆಲಸಮವಾಯಿತು. ನಾವು ಹೊರಗಡೆ ಇದಿದ್ದಕ್ಕೆ ಬಚಾವ್ ಆಗಿದ್ದೇವೆ. ಈಗ ಅಳಿದುಳಿದ ಸಾಮಗ್ರಿ ತೆಗೆದುಕೊಂಡು ಹೊಗಲು ಬಂದಿದ್ದಿವೆ. ಊಟ ಮಾಡುವುದಕ್ಕೆ ಅಕ್ಕಿಯೂ ಇಲ್ಲ, ಗಂಜಿ ಕೇಂದ್ರಕ್ಕೆ ಹೋಗಬೇಕು ಎಂದು ಕುಸಿದ ಮನೆ ಕಂಡು ದಂಪತಿ ಭಾವುಕರಾಗಿದ್ದಾರೆ.

ಆಧಾರ್ ಕಾಡ್೯ ಹಿಡಿದು ಎಲ್ಲಾ ದಾಖಲೆ ಪತ್ರ ಮನೆಯ ಜತೆಯೇ ಹೋಯಿತು. ಏನು ಮಾಡುವುದು ಎಂದು ತಿಳಿಯುತ್ತಿಲ್ಲ.ಊಟಕ್ಕೆ ಕಾಳಜಿ ಕೇಂದ್ರವೇ ಗತಿಯಾಗಿದೆ‌. ಮನೆಯಲ್ಲಿ ಒಂದು ಕಾಳು ಅಕ್ಕಿ ಉಳಿದಿಲ್ಲ ಎಂದು ಟಿವಿ9 ಡಿಜಿಟಲ್​ ಜತೆ ದಂಪತಿ ಅಳಲು ತೋಡಿಕೊಂಡಿದ್ದಾರೆ.

ಗುಳ್ಳಾಪುರ-ಹಳವಳ್ಳಿ ಸಂಪರ್ಕ ಸೇತುವೆ ನೀರುಪಾಲು ಗುಳ್ಳಾಪುರ-ಹಳವಳ್ಳಿ ಸಂಪರ್ಕ ಸೇತುವೆ ಕೊಚ್ಚಿಹೋದ ಹಿನ್ನೆಲೆ, ಸೇತುವೆ ಕೊಚ್ಚಿಹೋಗಿ 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ ಆಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಳವಳ್ಳಿ, ಹೆಗ್ಗಾರ, ಕಲ್ಲೇಶ್ವರ, ಶೇವ್ಕಾರ, ಕೊನಾಳ ಸೇರಿ 10ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ಗಂಗಾವಳಿ ನದಿ ಉಕ್ಕಿ ಹರಿದ ಪರಿಣಾಮ ಸೇತುವೆ‌ ಕೊಚ್ಚಿಹೋಗಿದೆ. 10ಕ್ಕೂ ಹೆಚ್ಚು ಗ್ರಾಮಗಳ ಸ್ಥಿತಿ ಈಗ ಅಕ್ಷರಶಃ ನಡುಗಡ್ಡೆಯಂತಗಿದೆ.

2019ರ ಪ್ರವಾಹದಲ್ಲಿ ಗ್ರಾಮಗಳ ಸಂಪರ್ಕಕ್ಕೆ ನಿರ್ಮಿಸಿದ್ದ 2 ತೂಗುಸೇತುವೆ ಕೊಚ್ಚಿಹೋಗಿದ್ದವು. ಇದೀಗ ಇದ್ದ ಒಂದು ಸಂಪರ್ಕ ಸೇತುವೆಯೂ ನೀರುಪಾಲಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಆನ್ಲೆ ಬಳಿ ಪ್ರವಾಹಕ್ಕೆ ಮನೆ ಕುಸಿದುಬಿದ್ದಿದೆ. ಮನೆ ಕುಸಿದುಬಿದ್ದ ಹಿನ್ನೆಲೆ ಮನೆಯ 6 ಜನರು ಬೀದಿಗೆ ಬಿದ್ದಂತಾಗಿದೆ. ಇದ್ದ ಮನೆ ಕಳೆದುಕೊಂಡು 6 ಜನ ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ:

ಭಾರಿ ಮಳೆಯಿಂದ ರಾಜ್ಯದ ಹಲವೆಡೆ ಮನೆ ಕುಸಿತ, ಚಿಕ್ಕಮಗಳೂರಿನಲ್ಲಿ ವೃದ್ಧರೊಬ್ಬರ ಸಾವು; ಸೇತುವೆಗಳು ಜಲಾವೃತ, ಸಂಪರ್ಕ ಕಡಿತ

Uttara Kannada: ಮನೆ, ಗುಡ್ಡ ಕುಸಿತ, ರಸ್ತೆ, ಸೇತುವೆ ನೀರುಪಾಲು, ಸಂಪರ್ಕ ಕಡಿತ; ಉತ್ತರ ಕನ್ನಡವಲ್ಲ ಇದು ತತ್ತರ ಕನ್ನಡ ಎಂದ ಜನ

Published On - 2:05 pm, Sun, 25 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ