AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಜಿಲ್ಲೆಯಲ್ಲಿ 6 ಕಾಳಜಿ ಕೇಂದ್ರ ಓಪನ್, NDRF ದೌಡು

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಈ ಕುರಿತು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ, ‘ಈವರೆಗೆ 6 ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ. ಜೊತೆಗೆ ತಲಾ 35 ಜನರ ಎರಡು NDRF ತಂಡವನ್ನು ಕರೆಯಿಸಲಾಗಿದೆ ಎಂದರು.

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಜಿಲ್ಲೆಯಲ್ಲಿ 6 ಕಾಳಜಿ ಕೇಂದ್ರ ಓಪನ್, NDRF ದೌಡು
ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಸೂರಜ್​, ಮಹಾವೀರ್​ ಉತ್ತರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 04, 2024 | 10:42 PM

Share

ಉತ್ತರ ಕನ್ನಡ, ಜು.04: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಈವರೆಗೆ 6 ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ(Gangubai Manakar) ಹೇಳಿದರು. ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಕುರಿತ ಮಾತನಾಡಿದ ಅವರು, ‘ಈವರೆಗೆ ಹೊನ್ನಾವರದಲ್ಲಿ 4, ಅಂಕೋಲಾ, ಕುಮಟಾದಲ್ಲಿ ತಲಾ‌ ಒಂದು ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ. ಅಲ್ಲಿನವರಿಗೆ ಜಿಲ್ಲಾಡಳಿತದಿಂದಲೇ ಊಟ, ವಸತಿ, ಬಟ್ಟೆ ವ್ಯವಸ್ಥೆ ಮಾಡಿದ್ದೇವೆ ಎಂದರು.

ಮುಂಜಾಗ್ರತಾ ಕ್ರಮವಾಗಿ ಎನ್​ಡಿಆರ್​ಎಫ್​​ ಆಗಮನ

‘ಒಂದು ತಿಂಗಳಿನಿಂದ ಸುರಿದ ಮಳೆಗೆ ಸಾಕಷ್ಟು ಹಾನಿ ಆಗಿದೆ. ಓರ್ವ ಮಹಿಳೆ, ಜಾನುವಾರು ಸಾವನ್ನಪ್ಪಿದ್ದಾರೆ. ಜೊತೆಗೆ 92 ಮನೆಗಳಿಗೆ ಹಾನಿಯಾಗಿದೆ. ಮುಂದಿನ 3 ರಿಂದ 4 ದಿನಗಳ ಕಾಲ ಮಳೆ ಅಬ್ಬರ ಹೆಚ್ಚಾಗಲಿದೆ. ಹೀಗಾಗಿ ತಲಾ 35 ಜನರ ಎರಡು NDRF ತಂಡ ಜಿಲ್ಲೆಗೆ ಆಗಮಿಸುತ್ತಿದೆ. ಇಂದು ಬೆಂಗಳೂರಿನಿಂದ ಎನ್​ಡಿಆರ್​ಎಫ್​ ಸಿಬ್ಬಂದಿ ತೆರಳಿದ್ದು, ನಾಳೆ ಕಾರವಾರ, ಕುಮಟಾ, ಅಂಕೋಲಾಗೆ ಆಗಮಿಸಿ ಹೆಚ್ಚು ಮಳೆ ಬೀಳುವ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈಗಾಗಲೇ ಜೊಯಿಡಾದ ಕನ್ನೇರಿ ಹಾಗೂ ಕದ್ರಾದ ಡ್ಯಾಂ ಮಟ್ಟ ಹೆಚ್ಚಾಗುತ್ತಿದೆ. ಅಲ್ಲಿನ ಜನರ ರಕ್ಷಣೆಗೆ ಈ ತಂಡ ಕಾರ್ಯಾಚರಣೆ ಮಾಡಲಿದೆ ಎಂದು ಹೇಳಿದರು.

ಇದನ್ನೂ ಓದಿ:ಭಾರಿ ಮಳೆ; ಉಡುಪಿ, ಉತ್ತರ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಮಳೆಯಿಂದ ಸಮಸ್ಯೆಗೆ ಸಹಾಯವಾಣಿ

ಇನ್ನು ಜಿಲ್ಲೆಯಲ್ಲಿ 439 ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಾಧ್ಯತೆಯ ಬಗ್ಗೆ ಗುರುತು ಮಾಡಲಾಗಿತ್ತು. ಭಟ್ಕಳ, ಹೊನ್ನಾವರ ಹಾಗೂ ಕಾರವಾರ ವ್ಯಾಪ್ತಿಯಲ್ಲಿ ಗುಡ್ಡ ಕುಸಿತದ ಭೀತಿ ಹಿನ್ನೆಲೆ ಈಗಾಗಲೇ ಸರಕಾರದಲ್ಲಿ 6.75ಕೋಟಿ ರೂ. ಬೇಡಿಕೆ ಇರಿಸಲಾಗಿದೆ. ಪ್ರವಾಹವನ್ನು ಎದುರಿಸಲು ಕಂದಾಯ ಇಲಾಖೆಯ ತಂಡ ತಯಾರಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ಕೂಡ ತೆರೆಯಲಾಗಿದೆ. ಮಳೆಯ ಸಮಸ್ಯೆ ಸಂಭವಿಸಿದಾಗ 1950ಸಂಖ್ಯೆಗೆ ಜನರು ಸಂಪರ್ಕಿಸಬಹುದು ಎಂದು  ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ