AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಜಿಲ್ಲೆಯಲ್ಲಿ 6 ಕಾಳಜಿ ಕೇಂದ್ರ ಓಪನ್, NDRF ದೌಡು

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಈ ಕುರಿತು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾತನಾಡಿ, ‘ಈವರೆಗೆ 6 ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ. ಜೊತೆಗೆ ತಲಾ 35 ಜನರ ಎರಡು NDRF ತಂಡವನ್ನು ಕರೆಯಿಸಲಾಗಿದೆ ಎಂದರು.

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಜಿಲ್ಲೆಯಲ್ಲಿ 6 ಕಾಳಜಿ ಕೇಂದ್ರ ಓಪನ್, NDRF ದೌಡು
ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 04, 2024 | 10:42 PM

Share

ಉತ್ತರ ಕನ್ನಡ, ಜು.04: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಈವರೆಗೆ 6 ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ(Gangubai Manakar) ಹೇಳಿದರು. ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಕುರಿತ ಮಾತನಾಡಿದ ಅವರು, ‘ಈವರೆಗೆ ಹೊನ್ನಾವರದಲ್ಲಿ 4, ಅಂಕೋಲಾ, ಕುಮಟಾದಲ್ಲಿ ತಲಾ‌ ಒಂದು ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ. ಅಲ್ಲಿನವರಿಗೆ ಜಿಲ್ಲಾಡಳಿತದಿಂದಲೇ ಊಟ, ವಸತಿ, ಬಟ್ಟೆ ವ್ಯವಸ್ಥೆ ಮಾಡಿದ್ದೇವೆ ಎಂದರು.

ಮುಂಜಾಗ್ರತಾ ಕ್ರಮವಾಗಿ ಎನ್​ಡಿಆರ್​ಎಫ್​​ ಆಗಮನ

‘ಒಂದು ತಿಂಗಳಿನಿಂದ ಸುರಿದ ಮಳೆಗೆ ಸಾಕಷ್ಟು ಹಾನಿ ಆಗಿದೆ. ಓರ್ವ ಮಹಿಳೆ, ಜಾನುವಾರು ಸಾವನ್ನಪ್ಪಿದ್ದಾರೆ. ಜೊತೆಗೆ 92 ಮನೆಗಳಿಗೆ ಹಾನಿಯಾಗಿದೆ. ಮುಂದಿನ 3 ರಿಂದ 4 ದಿನಗಳ ಕಾಲ ಮಳೆ ಅಬ್ಬರ ಹೆಚ್ಚಾಗಲಿದೆ. ಹೀಗಾಗಿ ತಲಾ 35 ಜನರ ಎರಡು NDRF ತಂಡ ಜಿಲ್ಲೆಗೆ ಆಗಮಿಸುತ್ತಿದೆ. ಇಂದು ಬೆಂಗಳೂರಿನಿಂದ ಎನ್​ಡಿಆರ್​ಎಫ್​ ಸಿಬ್ಬಂದಿ ತೆರಳಿದ್ದು, ನಾಳೆ ಕಾರವಾರ, ಕುಮಟಾ, ಅಂಕೋಲಾಗೆ ಆಗಮಿಸಿ ಹೆಚ್ಚು ಮಳೆ ಬೀಳುವ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈಗಾಗಲೇ ಜೊಯಿಡಾದ ಕನ್ನೇರಿ ಹಾಗೂ ಕದ್ರಾದ ಡ್ಯಾಂ ಮಟ್ಟ ಹೆಚ್ಚಾಗುತ್ತಿದೆ. ಅಲ್ಲಿನ ಜನರ ರಕ್ಷಣೆಗೆ ಈ ತಂಡ ಕಾರ್ಯಾಚರಣೆ ಮಾಡಲಿದೆ ಎಂದು ಹೇಳಿದರು.

ಇದನ್ನೂ ಓದಿ:ಭಾರಿ ಮಳೆ; ಉಡುಪಿ, ಉತ್ತರ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಮಳೆಯಿಂದ ಸಮಸ್ಯೆಗೆ ಸಹಾಯವಾಣಿ

ಇನ್ನು ಜಿಲ್ಲೆಯಲ್ಲಿ 439 ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಾಧ್ಯತೆಯ ಬಗ್ಗೆ ಗುರುತು ಮಾಡಲಾಗಿತ್ತು. ಭಟ್ಕಳ, ಹೊನ್ನಾವರ ಹಾಗೂ ಕಾರವಾರ ವ್ಯಾಪ್ತಿಯಲ್ಲಿ ಗುಡ್ಡ ಕುಸಿತದ ಭೀತಿ ಹಿನ್ನೆಲೆ ಈಗಾಗಲೇ ಸರಕಾರದಲ್ಲಿ 6.75ಕೋಟಿ ರೂ. ಬೇಡಿಕೆ ಇರಿಸಲಾಗಿದೆ. ಪ್ರವಾಹವನ್ನು ಎದುರಿಸಲು ಕಂದಾಯ ಇಲಾಖೆಯ ತಂಡ ತಯಾರಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ಕೂಡ ತೆರೆಯಲಾಗಿದೆ. ಮಳೆಯ ಸಮಸ್ಯೆ ಸಂಭವಿಸಿದಾಗ 1950ಸಂಖ್ಯೆಗೆ ಜನರು ಸಂಪರ್ಕಿಸಬಹುದು ಎಂದು  ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!