AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡಕ್ಕೆ ರೆಡ್​ ಅಲರ್ಟ್​: ಮೀನುಗಾರಿಕೆ, ಟ್ರೆಕ್ಕಿಂಗ್ ನಿಷೇಧ, ಡಿಸಿ ಖಡಕ್​ ಸೂಚನೆ

ಪೂರ್ವ ಮುಂಗಾರು ಮಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಅನಾಹುತ ಸೃಷ್ಟಿಸುತ್ತಿದೆ. ಕೇವಲ ಎರಡು ಗಂಟೆಯ ಮಳೆಗೆ ಹೆದ್ದಾರಿಗಳು ಕೆರೆಯಂತಾಗಿವೆ. ಅತ್ತ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿ ಮೀನುಗಾರಿಕೆ ನಿಂತಿದೆ. ಬೋಟ್​ಗಳು ಬಂದರುನಲ್ಲಿ ಲಂಗರು ಹಾಕುತ್ತಿವೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡಕ್ಕೆ ರೆಡ್​ ಅಲರ್ಟ್​: ಮೀನುಗಾರಿಕೆ, ಟ್ರೆಕ್ಕಿಂಗ್ ನಿಷೇಧ, ಡಿಸಿ ಖಡಕ್​ ಸೂಚನೆ
ಸಾಂದರ್ಭಿಕ ಚಿತ್ರ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:May 20, 2025 | 9:34 PM

Share

ಉತ್ತರ ಕನ್ನಡ, ಮೇ 20: ಕಳೆದ ಒಂದು ವಾರದಿಂದ ರಾಜ್ಯದ ಕೆಲವು ಕಡೆ ಅಬ್ಬರಿಸಿ ಅವಾಂತರ ಸೃಷ್ಟಿಸುತ್ತಿದ್ದ ವರುಣ (Rain) ಮಂಗಳವಾರ (ಮೇ.20) ಕರಾವಳಿಗೆ ಎಂಟ್ರಿ ಕೊಟ್ಟಿದ್ದಾನೆ. ಪ್ರತಿ ವರ್ಷ ಜೂನ್ ಅಂತ್ಯ ಮತ್ತು ಜುಲೈ ತಿಂಗಳಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ (Uttar Kannada) ಮಳೆಯ ಅಬ್ಬರ ಹೆಚ್ಚಾಗುತಿತ್ತು. ಆದರೆ, ಈ ವರ್ಷ ಮೇ ಮೂರನೇ ವಾರದಲ್ಲೇ ಮಳೆ ಆರಂಭ ಆಗಿದ್ದರಿಂದ ಸಹಜವಾಗಿ ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಾಗಿ ಅಲೆಗಳ ಅಬ್ಬರ ಹೆಚ್ಚಾಗಿದೆ.

ಹೀಗಾಗಿ, ಮೀನುಗಾರಿಕೆ ನಿರ್ಬಂಧಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ, ಮೀನುಗಾರಿಕೆಗಾಗಿ ಸಮುದ್ರದಾಳಕ್ಕೆ ಹೊದವರನ್ನು ಹಿಂತಿರುಗುವಂತೆ ಸೂಚಿಸಿದೆ. ಅಲ್ಲದೆ, ಮೇ 22 ರ ವರೆಗೆ ದಿನ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸಮುದ್ರಕ್ಕೆ ಯಾವುದೇ ಬೋಟ್​ಗಳು ಇಳಿಯದಂತೆ ಖಡಕ್ ಸೂಚನೆ ನೀಡಲಾಗಿದೆ. ಹಾಗೇ, ಜಿಲ್ಲಾಡಳಿತ ಅಂಗನವಾಡಿ ಕೇಂದ್ರಗಳಿಗೆ ಬುಧವಾರ ರಜೆ ಘೋಷಿಸಿದೆ.

ಫಾಲ್ಸ್ ಹಾಗೂ ಟ್ರಕ್ಕಿಂಗ್ ಸ್ಥಳಗಳಿಗೆ ನಿರ್ಬಂಧ

ಈ ಸಂಬಂಧ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮಾತನಾಡಿ, ಮೇ. 22ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಹೊರಗಡೆ ಹೊದಾಗ ಮುನ್ನೆಚ್ಚರಿಕೆ ವಹಿಸಬೇಕು. ತಾಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಕಂಟ್ರೋಲ್ ರೂಂ ಪ್ರಾರಂಭ ಮಾಡಲಾಗಿದೆ. 24X7 ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತಿದ್ದು ಅವಘಡ ಸಂಭವಿಸಿದಾಗ ಸಂಪರ್ಕಿಸಬಹುದು. ಜಿಲ್ಲೆಯಲ್ಲಿನ 439 ಭೂ ಕುಸಿತ ಸ್ಥಳಕ್ಕೆ ಸ್ಪಾಟರ್ಸ್ ನೇಮಕ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ
Image
ಗೋಕರ್ಣ ಮಹಾಬಲೇಶ್ವರನ ದರ್ಶನಕ್ಕೆ ಮೂಗು ಮುಚ್ಚಿಕೊಂಡೇ ಹೋಗಬೇಕಾದ ಸ್ಥಿತಿ!
Image
ಹೊನ್ನಾವರದ ವೀಳ್ಯದೆಲೆಗೆ ಪಾಕ್ ದೊಡ್ಡ ಮಾರುಕಟ್ಟೆ! ಆದರೂ ಕಳ್ಸಲ್ಲ ರೈತರು
Image
ಗೋಕರ್ಣದಲ್ಲಿ ಡೇಂಜರಸ್ ಸ್ಪಾಟ್​ಗಳ ಬಗ್ಗೆ ಅಲರ್ಟ್ ಮಾಡಲಿದೆ ಮಾಹಿತಿ ಕೇಂದ್ರ
Image
ಸರಕು ಹಡಗಿನಲ್ಲಿ ಕಾರವಾರಕ್ಕೆ ಬಂದ ಪಾಕಿಸ್ತಾನ ಪ್ರಜೆ: ಮುಂದೇನಾಯ್ತು?

ಜೂನ್ ತಿಂಗಳಿನಿಂದ ಸ್ಪಾಟರ್ಸ್ ನಿಗದಿತ ಸ್ಥಳದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಕಳೆದ ಬಾರಿ ಮರ ಬಿದ್ದು ಕೆಲವು ಕಡೆ ಸಾವು ಆಗಿದ್ದರಿಂದ, ಅಪಾಯದ ಮರಗಳನ್ನು ತೆರವು ಮಾಡುವ ಕೆಲಸ ಅರಣ್ಯ ಇಲಾಖೆ ಮಾಡುತ್ತಿದೆ. ಜಲ ಸಾಹಸ ಕ್ರಿಡೆಗಳನ್ನು ಮಾನ್ಸೂನ ಮುಗಿಯೊವರೆಗೂ ನಿರ್ಬಂಧಿಸಲಾಗಿದೆ. ಮಾನ್ಸೂನ್ ಮುಗಿಯೊವರೆಗೂ ಫಾಲ್ಸ್ ಹಾಗೂ ಟ್ರೆಕ್ಕಿಂಗ್ ಸ್ಥಳಗಳಿಗೆ ನಿರ್ಬಂಧ ವಿಧಿಸಲಾಗುವುದು. ಅರಣ್ಯ ಇಲಾಖೆಯಿಂದ ಸಿಬ್ಬಂಧಿಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮೀನುಗಾರಿಕೆ ನಿಂತಿದ್ದರಿಂದ ಕಾರವಾರದ ಬೈಥಕೊಲ್ ಬಂದರು ಮೀನು ಮಾರುಕಟ್ಟೆ ಸಂಪೂರ್ಣವಾಗಿ ಖಾಲಿ ಖಾಲಿ ಹೊಡೆಯುತ್ತಿದ್ದು, ಮೀನುಗಾರರು ಕೈ ಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಇದರ ಜೊತೆಗೆ ಸ್ಕೂಬ್ ಡೈವಿಂಗ್ ಸೇರಿದಂತೆ ಎಲ್ಲ ಜಲಸಾಹಸ ಕ್ರಿಡೆಗಳನ್ನೂ ಕೂಡ ಇಂದಿನಿಂದಲೇ ನಿಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆ ಸೂಚಿಸಿದೆ.

ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆವರೆಗೆ ಜೋರಾಗಿ ಸುರಿದ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ – ಸಿದ್ಧಾಪುರದ ಹೆದ್ದಾರಿ ಜಲಾವೃತವಾಗಿ ವಾಹನ ಸವಾರರು ಪರದಾಡುವಂತಾಯಿತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ವರ್ಷ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿದು ಸಾವು-ನೋವು ಸಂಭವಿಸಿತ್ತು. ಅಬ್ಬರದ ಮಳೆಯಲ್ಲೇ ಜಿಲ್ಲೆಗೆ ಭೇಟಿ ನೀಡಿದ್ದ ಸಿಎಂ ಸಿದ್ಧರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಭೈರೆಗೌಡ ಅವರು ಮುಂದಿನ ವರ್ಷ ಈ ಸಮಸ್ಯೆ ಮರುಕಳಿಸದಂತೆ ಹೆಚ್ಚಿನ ಕಾಳಜಿ ವಹಿಸುವ ಭರವಸೆ ನೀಡಿದ್ದರು. ಆದರೆ, ಈ ವರ್ಷಾರಂಭದಲ್ಲಿ ಕೇವಲ ಎರಡು ಗಂಟೆ ಸುರಿದ ಅಬ್ಬರದ ಮಳೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.

ಇದನ್ನೂ ಓದಿ: ಮಳೆ ಆರಂಭ ಆಗುತ್ತಿದ್ದಂತೆ ಉತ್ತರ ಕನ್ನಡದಲ್ಲಿ ಹೆಚ್ಚಿದ ಆತಂಕ: ಭರವಸೆ ಈಡೆರಿಸದ ಸಿಎಂ

ಒಟ್ಟಾರೆಯಾಗಿ ಮುಂಗಾರು ಆರಂಭದಲ್ಲೇ ಕೇವಲ ಎರಡು ಗಂಟೆ ಸುರಿದ ಮಳೆಗೆ ಇಷ್ಟೊಂದು ಅನಾಹುತ ಸಂಭವಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಏನೆಲ್ಲ ಅನಾಹುತ ಆಗಬಹುದು ಎಂಬ ಆತಂಕ ಉತ್ತರ ಕನ್ನಡ ಜಿಲ್ಲೆಯ ಜನರನ್ನು ಕಾಡುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 pm, Tue, 20 May 25

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?