AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಕೆಎಸ್‌ಆರ್‌ಟಿಸಿ ಬಸ್ಸಿನಡಿ ಸಿಲುಕಿ ತಾಯಿ- ಮಗಳು ದಾರುಣ ಸಾವು

ಅಪಘಾತದ ಕುರಿತು ಎಷ್ಟೇ ಜಾಗೃತಿ ಮೂಡಿಸಿದರು, ಚಾಲಕರ ಅಜಾಗರೂಕತೆಯಿಂದ ದುರ್ಘಟನೆಗಳು ಸಂಭವಿಸುತ್ತಲೇ ಇರುತ್ತದೆ. ಅದರಂತೆ ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ(Honnavar) ಮಂಕಿಯಲ್ಲಿ ಕೆಎಸ್‌ಆರ್‌ಟಿಸಿ(KSRTC) ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವನ್ನಪ್ಪಿದ್ದ ದಾರುಣ ಘಟನೆ ನಡೆದಿದೆ.

ಉತ್ತರ ಕನ್ನಡ: ಕೆಎಸ್‌ಆರ್‌ಟಿಸಿ ಬಸ್ಸಿನಡಿ ಸಿಲುಕಿ ತಾಯಿ- ಮಗಳು ದಾರುಣ ಸಾವು
ಕೆಎಸ್‌ಆರ್‌ಟಿಸಿ ಬಸ್ಸಿನಡಿ ಸಿಲುಕಿ ತಾಯಿ- ಮಗಳು ದಾರುಣ ಸಾವು
ಸೂರಜ್​, ಮಹಾವೀರ್​ ಉತ್ತರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 29, 2024 | 3:50 PM

Share

ಉತ್ತರ ಕನ್ನಡ, ಫೆ.29: ಕೆಎಸ್‌ಆರ್‌ಟಿಸಿ(KSRTC) ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವನ್ನಪ್ಪಿದ್ದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ(Honnavar) ಮಂಕಿಯಲ್ಲಿ ನಡೆದಿದೆ. ಸವಿತಾ ರಾಜು ಆಚಾರಿ (40) ಹಾಗೂ ಅಂಕಿತಾ ರಾಜು ಆಚಾರಿ (17) ಮೃತ ರ್ದುದೈವಿಗಳು. ಮಂಕಿ ಜಾತ್ರೆ ಪೇಟೆಗೆ ತೆರಳಿ ವಾಪಾಸ್ಸಾಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಳಗಾವಿಯತ್ತ ತೆರಳುತ್ತಿದ್ದ ಬಸ್, ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಕೂಡಲೇ ಭಟ್ಕಳದ ಸರಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೇ ತಾಯಿ-ಮಗಳು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಹೊನ್ನಾವರ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಬಸ್​ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಟೋಲ್ ಗೇಟ್ ಬಳಿ ಬಸ್​ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ನಡೆದಿದೆ. ಹೈದರಾಬಾದ್​​ನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಬೊಲೆರೊ ವಾಹನಕ್ಕೆ ಡಿಕ್ಕಿಯಾಗುವುದನ್ನ ತಪ್ಪಿಸಲು ಹೋಗಿ ಬಸ್​ ಪಲ್ಟಿಯಾಗಿದೆ. ಕೂಡಲೇ ಗಾಯಾಳುಗಳಿಗೆ ಗಂಗಾವತಿ ಮತ್ತು ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಕಾಸ್‌ಗಂಜ್‌ನಲ್ಲಿ ಭೀಕರ ಅಪಘಾತ: ಮಾಘ ಹುಣ್ಣಿಮೆಯಂದು ಗಂಗಾ ಸ್ನಾನಕ್ಕೆ ತೆರಳಿದ್ದ 22 ಮಂದಿ ದುರ್ಮರಣ

ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಯಡದಾಳಿನಲ್ಲಿ ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ತಿಕ್(23) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಪರಿಕ್ಷೇಯಲ್ಲಿ ಫೇಲ್​ ಆಗಿದ್ದಕ್ಕೆ ಅದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಇನ್ನು ಮೃತ ಕಾರ್ತಿಕ್​ ಸೇನೆಗೆ ಸೇರಬೇಕೆಂದು 2 ವರ್ಷದಿಂದ ಪ್ರಯತ್ನಿಸುತ್ತಿದ್ದ. ಆದರೆ, ಫೇಲ್​ ಆಗಿದ್ದಕ್ಕೆ ಆತ್ಮಹತ್ಯೆಯ ದಾರಿ ಹಿಡಿದಿದ್ದು ದುರಂತ. ಮಗನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Thu, 29 February 24

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು