AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ: ಹೊನ್ನಾವರ ಠಾಣಾ ಪಿಐ, ಪಿಎಸ್​ಐ ಸೇರಿ ಐವರ ತಲೆದಂಡ

ಹೊನ್ನಾವರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್ ಸಿಬ್ಬಂದಿ ತಲೆದಂಡವಾಗಿದೆ.

ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ: ಹೊನ್ನಾವರ ಠಾಣಾ ಪಿಐ, ಪಿಎಸ್​ಐ ಸೇರಿ ಐವರ ತಲೆದಂಡ
ಹೊನ್ನಾವರ ಪೊಲೀಸ್ ಠಾಣೆ
ರಮೇಶ್ ಬಿ. ಜವಳಗೇರಾ
|

Updated on: Jun 25, 2023 | 10:52 AM

Share

ಮುಖ್ಯಾಂಶಗಳು

  • ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ
  • ಹೊನ್ನಾವರ ಠಾಣೆಯ ಪಿಐ, ಪಿಎಸ್ಐ ಸೇರಿ ಐವರ ಅಮಾನತು
  • ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಠಾಣೆಯ ಪೊಲೀಸ್ ಸಿಬ್ಬಂದಿ

ಉತ್ತರ ಕನ್ನಡ: ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ(prisoner suicide) ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ (Honnavar Police Station) ಪಿಐ, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ. ನಿನ್ನೆ (ಜೂನ್ 24) ಬಿಹಾರ ಮೂಲದ ವ್ಯಕ್ತಿ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈ ಪಿಎಸ್​ಐ ಮಂಜೇಶ್ವರ್ ಚಂದಾವರ, ಪೊಲೀಸ್ ಸಿಬ್ಬಂದಿಗಳಾದ ಮಹಾವೀರ, ರಮೇಶ್, ಸಂತೋಷ್ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: Uttara Kannada: ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ; ಆರೋಪಿ ಬಂಧನ

ಪಾಲೀಷ್ ಮಾಡಿ ಕೊಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಇಬ್ಬರನ್ನು ಹೊನ್ನಾವರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆಂದು ಠಾಣೆಗೆ ಕರೆದುತಂದಿದ್ದರು. ಆ ವೇಳೆ ನೀರು ಕುಡಿಯುತ್ತೇನೆ ಎಂದು ಹೇಳಿ ಬ್ಯಾಗಿನಲ್ಲಿದ್ದ ವಿಷ ಕುಡಿದಿದ್ದ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ, ದುರದೃಷ್ಟವಶಾತ್ ಅಷ್ಟರಾಗಲೇ ಆರೋಪಿ ಮೃತಪಟ್ಟಿದ್ದ.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಹೊನ್ನಾವರ ಠಾಣೆಯ ಪಿಐ, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ಉತ್ತರ ಕನ್ನಡ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!