Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ: ಹೊನ್ನಾವರ ಠಾಣಾ ಪಿಐ, ಪಿಎಸ್​ಐ ಸೇರಿ ಐವರ ತಲೆದಂಡ

ಹೊನ್ನಾವರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್ ಸಿಬ್ಬಂದಿ ತಲೆದಂಡವಾಗಿದೆ.

ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ: ಹೊನ್ನಾವರ ಠಾಣಾ ಪಿಐ, ಪಿಎಸ್​ಐ ಸೇರಿ ಐವರ ತಲೆದಂಡ
ಹೊನ್ನಾವರ ಪೊಲೀಸ್ ಠಾಣೆ
Follow us
ರಮೇಶ್ ಬಿ. ಜವಳಗೇರಾ
|

Updated on: Jun 25, 2023 | 10:52 AM

ಉತ್ತರ ಕನ್ನಡ: ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ(prisoner suicide) ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ (Honnavar Police Station) ಪಿಐ, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ. ನಿನ್ನೆ (ಜೂನ್ 24) ಬಿಹಾರ ಮೂಲದ ವ್ಯಕ್ತಿ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈ ಪಿಎಸ್​ಐ ಮಂಜೇಶ್ವರ್ ಚಂದಾವರ, ಪೊಲೀಸ್ ಸಿಬ್ಬಂದಿಗಳಾದ ಮಹಾವೀರ, ರಮೇಶ್, ಸಂತೋಷ್ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: Uttara Kannada: ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ; ಆರೋಪಿ ಬಂಧನ

ಪಾಲೀಷ್ ಮಾಡಿ ಕೊಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಇಬ್ಬರನ್ನು ಹೊನ್ನಾವರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆಂದು ಠಾಣೆಗೆ ಕರೆದುತಂದಿದ್ದರು. ಆ ವೇಳೆ ನೀರು ಕುಡಿಯುತ್ತೇನೆ ಎಂದು ಹೇಳಿ ಬ್ಯಾಗಿನಲ್ಲಿದ್ದ ವಿಷ ಕುಡಿದಿದ್ದ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ, ದುರದೃಷ್ಟವಶಾತ್ ಅಷ್ಟರಾಗಲೇ ಆರೋಪಿ ಮೃತಪಟ್ಟಿದ್ದ.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಹೊನ್ನಾವರ ಠಾಣೆಯ ಪಿಐ, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ಉತ್ತರ ಕನ್ನಡ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು