AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ: ಹೊನ್ನಾವರ ಠಾಣಾ ಪಿಐ, ಪಿಎಸ್​ಐ ಸೇರಿ ಐವರ ತಲೆದಂಡ

ಹೊನ್ನಾವರ ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್ ಸಿಬ್ಬಂದಿ ತಲೆದಂಡವಾಗಿದೆ.

ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ: ಹೊನ್ನಾವರ ಠಾಣಾ ಪಿಐ, ಪಿಎಸ್​ಐ ಸೇರಿ ಐವರ ತಲೆದಂಡ
ಹೊನ್ನಾವರ ಪೊಲೀಸ್ ಠಾಣೆ
ರಮೇಶ್ ಬಿ. ಜವಳಗೇರಾ
|

Updated on: Jun 25, 2023 | 10:52 AM

Share

ಉತ್ತರ ಕನ್ನಡ: ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ(prisoner suicide) ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ (Honnavar Police Station) ಪಿಐ, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ. ನಿನ್ನೆ (ಜೂನ್ 24) ಬಿಹಾರ ಮೂಲದ ವ್ಯಕ್ತಿ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈ ಪಿಎಸ್​ಐ ಮಂಜೇಶ್ವರ್ ಚಂದಾವರ, ಪೊಲೀಸ್ ಸಿಬ್ಬಂದಿಗಳಾದ ಮಹಾವೀರ, ರಮೇಶ್, ಸಂತೋಷ್ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: Uttara Kannada: ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ; ಆರೋಪಿ ಬಂಧನ

ಪಾಲೀಷ್ ಮಾಡಿ ಕೊಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಇಬ್ಬರನ್ನು ಹೊನ್ನಾವರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆಂದು ಠಾಣೆಗೆ ಕರೆದುತಂದಿದ್ದರು. ಆ ವೇಳೆ ನೀರು ಕುಡಿಯುತ್ತೇನೆ ಎಂದು ಹೇಳಿ ಬ್ಯಾಗಿನಲ್ಲಿದ್ದ ವಿಷ ಕುಡಿದಿದ್ದ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ, ದುರದೃಷ್ಟವಶಾತ್ ಅಷ್ಟರಾಗಲೇ ಆರೋಪಿ ಮೃತಪಟ್ಟಿದ್ದ.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಹೊನ್ನಾವರ ಠಾಣೆಯ ಪಿಐ, ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ಉತ್ತರ ಕನ್ನಡ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!