AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೆಬಾಗಿಲು ಬಳಿ ಮೀನುಗಾರಿಕೆ ಬೋಟ್ ಸಮುದ್ರದಲ್ಲಿ ಮುಳುಗಡೆಗೊಂಡಿದೆ. ಬೋಟ್‌ನ ಹೊರಭಾಗಕ್ಕೆ ಹಾನಿಯಾಗಿದ್ದರಿಂದ ಈ ಘಟನೆ ಸಂಭವಿಸಿದೆ. ಬೋಟ್‌ನಲ್ಲಿದ್ದ 7 ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಈ ಕುರಿತು ಹೊನ್ನಾವರ ಸಿ.ಎಸ್.ಪಿ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!
ಬೋಟ್​ ಮುಳುಗಡೆImage Credit source: tv9 kannada
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:May 31, 2026 | 3:08 PM

Share

ಕಾರವಾರ, ಮೇ 31: ಉತ್ತರ ಕನ್ನಡ (uttara-kannada) ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್‌ವೊಂದು ಮುಳುಗಡೆಯಾಗಿದ್ದು (boat sinking), ಅದರಲ್ಲಿದ್ದ ಏಳು ಜನ ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಇಕ್ಬಾಲ್, ಅಬ್ದುಲ್ ಹಾಗೂ ಗಫೂರ್ ಎಂಬುವರಿಂದ 7 ಜನರ ರಕ್ಷಣೆ ಮಾಡಲಾಗಿದೆ. ಹೊನ್ನಾವರ ಸಿಎಸ್​ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಸಮುದ್ರದಲ್ಲಿ ಮೀನುಗಾರಿಕೆ ಬೋಟ್​ ಮುಳುಗಡೆ
  • ಸ್ಥಳೀಯ ಮೀನುಗಾರಿಕಾ ಬೋಟ್​ನಿಂದ 7 ಮೀನುಗಾರರ ರಕ್ಷಣೆ
  • ಹೊನ್ನಾವರ ಸಿಎಸ್​ಪಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ

ನಡೆದಿದ್ದೇನು?

ಅಂಕೋಲಾದ ಬೆಳಂಬಾರದಿಂದ ಮೀನುಗಾರಿಕೆಗೆ ತೆರಳಿದ್ದ ಮಂಜುನಾಥ್ ಖಾರ್ವಿ ಅವರಿಗೆ ಸೇರಿದ ‘ಶ್ರೀ ನವರತ್ನ’ ಹೆಸರಿನ ಬೋಟ್, ಚಲಿಸುತ್ತಿದ್ದಾಗ ಬೋಟ್‌ನ ಹೊರಭಾಗಕ್ಕೆ ಹಾನಿಯಾದ ಹಿನ್ನೆಲೆ ಸಮುದ್ರದಲ್ಲಿ ಮುಳುಗಲು ಆರಂಭಿಸಿದೆ. ಈ ವೇಳೆ ಬೋಟ್‌ನಲ್ಲಿದ್ದ ವೆಂಕಟೇಶ್ ಖಾರ್ವಿ, ನಾಗಪ್ಪ ಖಾರ್ವಿ, ಸಂದೀಪ್ ಖಾರ್ವಿ, ವಿಕಾಸ್ ಖಾರ್ವಿ, ವಿಘ್ನೇಶ್ ಖಾರ್ವಿ, ರಜತ್ ಬಾಣಾವಳಿಕರ್ ಹಾಗೂ ಲತೇಶ್ ಖಾರ್ವಿ ಎಂಬ ಏಳು ಜನ ಮೀನುಗಾರರು ನೀರುಪಾಲಾಗುವ ಭೀತಿಯಲ್ಲಿದ್ದರು.

ಇದನ್ನೂ ಓದಿ: ಧಾರವಾಡದಲ್ಲಿ ಘೋರ ದುರಂತ: ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ

ಇನ್ನು ಈ ವೇಳೆ ಸ್ಥಳೀಯ ಮೀನುಗಾರರಾದ ಇಕ್ಬಾಲ್, ಅಬ್ದುಲ್ ಹಾಗೂ ಗಫೂರ್ ತಮ್ಮ ಬೋಟ್ ಮೂಲಕ ತಕ್ಷಣವೇ ಸ್ಥಳಕ್ಕೆ ಧಾವಿಸಿ, ನೀರುಪಾಲಾಗುತ್ತಿದ್ದ ಏಳೂ ಜನರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆ ಮೂಲಕ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಘಟನೆಗೆ ಸಂಬಂಧಿಸಿದಂತೆ ಹೊನ್ನಾವರ ಸಿ.ಎಸ್.ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೃಷಿ ಹೊಂಡದಲ್ಲಿ ಬಿದ್ದು ಅಣ್ಣ ತಮ್ಮ ಸಾವು

ಕೃಷಿ ಹೊಂಡದಲ್ಲಿ ಬಿದ್ದು ಅಣ್ಣ ತಮ್ಮ ಸಾವನ್ನಪ್ಪಿದ್ದ ಘಟನೆ ಇತ್ತೀಚೆಗೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಗ್ರಾಮದಲ್ಲಿ ನಡೆದಿದೆ. ದೇವಕಿರಣ್ (12) ಹಾಗೂ ವಿನುತ್ (9) ಮೃತ ಅಣ್ಣ ತಮ್ಮಂದಿರು. ಶಾಲೆಗೆ ಬೇಸಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ತಾತನ ಮನೆಗೆ ಬಂದಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡದ ಬಳಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದರು.

ಇದನ್ನೂ ಓದಿ: ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು

ಕೃಷಿ ಹೊಂಡ ಮಾಡುವ ಉದ್ದೇಶದಿಂದ ಬೃಹತ್ ಹೊಂಡ ತೆಗೆಯಲಾಗಿತ್ತು. ವಸತಿ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ಬೇಸಿಗೆ ರಜೆಗೆಂದು ಅಜ್ಜಿ ತಾತನ ಮನೆಗೆ ಬಂದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:07 pm, Sun, 31 May 26

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ