ವಿಚಿತ್ರ ಘಟನೆ: ಹೆಲ್ಮೆಟ್ ಧರಿಸಿಲ್ಲವೆಂದು ಲಾರಿ ಚಾಲಕನಿಗೆ ದಂಡ ಹಾಕಿದ ಪೊಲೀಸರು!

ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ, ಕಾರಿನಲ್ಲಿ ಪ್ರಯಾಣಿಸುವವರು ಚಾಲಕ ಸೇರಿದಂತೆ ಸೀಟ್ ಬೆಲ್ಟ್ ಧರಿಸಬೇಕು ಎಂಬ ಮುಂತಾದ ಸಂಚಾರಿ ನಿಯಮಗಳು ಸಾಮಾನ್ಯ. ಜೊತೆಗೆ ಈ ನಿಯಮವನ್ನು ಉಲ್ಲಂಘಿಸಿದರೆ ಭಾರೀ ದಂಡ ಕೂಡ ಕಟ್ಟಬೇಕಾಗುತ್ತದೆ. ಆದ್ರೆ, ಟಿಪ್ಪರ್ ಲಾರಿ ಡ್ರೈವರ್​ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ಹಾಕಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ವಿಚಿತ್ರ ಘಟನೆ: ಹೆಲ್ಮೆಟ್ ಧರಿಸಿಲ್ಲವೆಂದು ಲಾರಿ ಚಾಲಕನಿಗೆ ದಂಡ ಹಾಕಿದ ಪೊಲೀಸರು!
Edited By:

Updated on: May 24, 2024 | 9:59 PM

ಕಾರವಾರ, (ಮೇ 24): ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್​ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು (honnavar traffic Police) ವಿಥೌಟ್​ ಹೆಲ್ಮೆಟ್ ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಚಂದ್ರಕಾಂತ್ ಹಳ್ಳೇರ ಎನ್ನುವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು ಕ್ಷಣ ಶಾಕ್ ಆಗಿದ್ದಾರೆ. ಯಾಕಂದ್ರೆ ರಶೀದಿಯಲ್ಲಿ ಹಾಕಿರುವ ದಂಡ ವಿಥೌಟ್​ ಹೆಲ್ಮೆಟ್​ಗೆ. ಈ ಬಗ್ಗೆ ಚಾಲಕ ಚಂದ್ರಕಾಂತ್, ಸರ್ ನಾನು ಬೈಕ್ ಓಡಿಸುತ್ತಿಲ್ಲ. ಟಿಪ್ಪರ್​ ಚಾಲನೆ ಮಾಡುತ್ತೇನೆ ಎಂದು ಪೊಲೀಸರನ್ನ ಪ್ರಶ್ನಿಸಿದ್ದಾರೆ. ಹೇ ಅದೆಲ್ಲಾ ಇರುತ್ತೆ ಎಂದು ಹೇಳಿ ರಶೀದಿ ಕೊಟ್ಟು ಕಳುಹಿಸಿದ್ದಾರೆ.

ಮಾವಿನ ಖುರ್ವದ ವಿನುತಾ ವಿನೋದ್ ನಾಯ್ಕ ಎಂಬುವವರಿಗೆ ಸೇರಿದ ಟಿಪ್ಪರ್ ಲಾರಿಗೆ ಚಂದ್ರಕಾಂತ್ ಹಳ್ಳೇರ ಚಾಲಕರಾಗಿದ್ದು, ಇಂದು ಮರಳು ತುಂಬಿದ ಲಾರಿಯನ್ನು ಚಾಲನೆ ಮಾಡಿಕೊಂಡು ಹೋಗುವಾಗ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅಳ್ಳಂಕಿ ಎಂಬಲ್ಲಿ ಪೊಲೀಸರು ಅಡ್ಡಹಾಕಿದ್ದಾರೆ. ಈ ವೇಳೆ ಸಮವಸ್ತ್ರ ಧರಿಸದಕ್ಕೆ ದಂಡ ಹಾಕುವ ಬದಲು ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ದಂಡದ ರಶೀದಿ ಎಲ್ಲೆಡೆ ವೈರಲ್ ಆಗಿದೆ.

ಇದನ್ನೂ ಓದಿ: ಸೋರುತ್ತಿಲ್ಲದಿದ್ದರೂ ಛತ್ರಿ ಹಿಡಿದು ಬಸ್ ಚಲಾಯಿಸಿದ NWKRTC ಚಾಲಕ ಸಸ್ಪೆಂಡ್

ಲಾರಿ ಡ್ರೈವರ್​ಗೆ ವಿಥೌಟ್ ಹೆಲ್ಮೆಟ್​ ದಂಡ ಹಾಕಿರುವ ರಶೀದಿ ವೈರಲ್ ಆಗಿದ್ದು ಇದಕ್ಕೆ ನೆಟ್ಟಿಗರು ನಾನಾ ರೀತಿಯಾಗಿ ಟ್ರೋಲ್​ ಮಾಡುತ್ತಿದ್ದಾರೆ.  ಹೊನ್ನಾವರ ಸಂಚಾರಿ ಪೊಲೀಸರು ಹೊಸದಾಗಿ ಟಿಪ್ಪರ್ ಚಾಲಕರಿಗೆ ಹೆಲ್ಮೆಟ್​ ಕಡ್ಡಾಯ ಮಾಡಲು ಹೊರಟಿರುವಂತೆ ಕಾಣುತ್ತಿದೆ. ಪೊಲೀಸರೇ ನೀಡಿರುವ ರಶೀದಿ ಪ್ರಕಾರ ಇನ್ಮುಂದೆ ಹೊನ್ನಾವರದಲ್ಲಿ ಟಿಪ್ಪರ್​ ಓಡಿಸುವ ಚಾಲಕರು ಕೂಡ ಕಡ್ಡಾಯವಾಗಿ ಹೆಲ್ಮೆಟ್​ ಧರಿಸದೇ ಇದ್ದರೆ ದಂಡ ಬೀಳುವುದಂತೂ ಗ್ಯಾರಂಟಿ ಆಗುವಂತಿದೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Fri, 24 May 24

Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us