AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾನವೀಯ ಕೃತ್ಯ: ಊಟ ಕೊಡಿ ಎಂದಿದ್ದಕ್ಕೆ ಭಿಕ್ಷುಕ ದಂಪತಿಗೆ ಥಳಿಸಿದ ಹೋಟೆಲ್ ಮಾಲೀಕ

ಉತ್ತರ ಕನ್ನಡದ ಕುಮಟಾದ ಗೋವರ್ಧನ ಹೋಟೆಲ್‌ನಲ್ಲಿ ಅಮಾನವೀಯ ಘಟನೆ ನಡೆದಿದೆ. ಹಸಿವಿನಿಂದ ಊಟ ಕೇಳಿದ ಭಿಕ್ಷುಕ ದಂಪತಿಗೆ ಹೋಟೆಲ್ ಮಾಲೀಕ ಮತ್ತು ವಾಚ್‌ಮನ್ ಹಿಗ್ಗಾಮುಗ್ಗಾ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಸದ್ಯ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಮಾನವೀಯ ಕೃತ್ಯ: ಊಟ ಕೊಡಿ ಎಂದಿದ್ದಕ್ಕೆ ಭಿಕ್ಷುಕ ದಂಪತಿಗೆ ಥಳಿಸಿದ ಹೋಟೆಲ್ ಮಾಲೀಕ
ಪ್ರಾತಿನಿಧಿಕ ಚಿತ್ರImage Credit source: Getty images
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Jun 22, 2026 | 10:21 PM

Share

ಕಾರವಾರ, ಜೂನ್​​ 22: ಹೋಟೆಲ್​ನಲ್ಲಿ ಊಟ ಕೇಳಿದ ಭಿಕ್ಷುಕ (Beggar) ದಂಪತಿಗೆ ಹೋಟೆಲ್​​ ಮಾಲೀಕ ಹಿಗ್ನಾಮುಗ್ಗ ಥಳಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ (uttara kannada) ಕುಮಟಾ ನಗರದಲ್ಲಿರುವ ಗೋವರ್ಧನ ಹೋಟೆಲ್​ನಲ್ಲಿ ನಡೆದಿದೆ. ರಮೇಶ್ ದ್ಯಾಮಣ್ಣ ಅಲೆಮಾರಿ (62) ಮತ್ತು ಅವರ ಪತ್ನಿ ದ್ಯಾಮವ್ವ ರಮೇಶ್ ಅಲೆಮಾರಿ (51) ಹಲ್ಲೆಗೊಳಗಾದವರು. ಸದ್ಯ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಕುಮಟಾದಲ್ಲಿ ಭಿಕ್ಷುಕ ದಂಪತಿ ಮೇಲೆ ಹಲ್ಲೆ
  • ಹೋಟೆಲ್ ಮಾಲೀಕನಿಂದ ದರ್ಪ
  • ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲು

ನಡೆದಿದ್ದೇನು?

ಹಲ್ಲೆಗೊಳಗಾದ ರಮೇಶ್ ದ್ಯಾಮಣ್ಣ ಮತ್ತು ಅವರ ಪತ್ನಿ ದ್ಯಾಮವ್ವ ರಮೇಶ್ ಅವರು ಶಿವಮೊಗ್ಗ ಜಿಲ್ಲೆಯ ಸೊರಬಾ ತಾಲೂಕಿನ ದೇವಿಕೆರೆ ಗ್ರಾಮದ ಅಲೆಮಾರಿ ದಂಪತಿ. ಭಿಕ್ಷಕರೆಂಬ ಕಾರಣಕ್ಕೆ ಊಟ ಕೊಡಲು ಹೋಟೆಲ್ ಮಾಲೀಕ ನಿರಾಕರಿಸಿದ್ದಾರೆ. ಬಹಳ ಹೊಟ್ಟೆ ಹಸಿದಿದೆ, ಊಟ ಕೊಡಿ ಎಂದಿದ್ದಕ್ಕೆ ಹೋಟೆಲ್​​ನಿಂದ ಹೊರಗೆ ತಳ್ಳಿದ್ದಾರೆ.

ಇದನ್ನೂ ಓದಿ: ಗಂಡನ ಮನೆಗಳ್ಳತನಕ್ಕೆ ಪತ್ನಿ ಸಾಥ್​: ಬಂದ ಹಣದಲ್ಲಿ ಗೋವಾದಲ್ಲಿ ಶೋಕಿ; ಸಿಕ್ಕಿಬಿದ್ದ ದಂಪತಿ

ಗೋವರ್ಧನ್ ಹೋಟೆಲ್ ಮಾಲೀಕ ಗಣೇಶ್​ ನಾಯ್ಕ್ ಹಾಗೂ ವಾಚ್‌ಮನ್ ಗಣೇಶ್​ ಗುರಕಾರಿಂದ ಭಿಕ್ಷಕ ದಂಪತಿ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದ ನಡು ರಸ್ತೆಯಲ್ಲೇ ರಕ್ತಸಿಕ್ತವಾಗಿ ಬಿದ್ದಿದ್ದ ದಂಪತಿಯನ್ನ ಪೊಲೀಸರು ಸರ್ಕಾರಿ ಆಸ್ಪತ್ರೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಇತ್ತ ಹೋಟೆಲ್ ಮಾಲೀಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೆಯಲ್ಲಿ ನಾಡಬಾಂಬ್​ ಸ್ಫೋಟ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟಗೊಂಡ ಘಟನೆ ನಡೆದಿದೆ. ವಸಂತ ಕೊರವರ ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ನಾಡಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಮನೆಯಲ್ಲಿದ್ದವರು ಪರಾರಿ ಆಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: ವಿಚಾರಣೆಗೆ ಕರೆದು ಪೊಲೀಸರಿಂದ ಹಲ್ಲೆ ಆರೋಪ: ಠಾಣೆಯಲ್ಲೇ ವೃದ್ಧ ಸಾವು

ಇನ್ನು ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಹಲವು ಮನೆಗಳಿಗೆ ಹಾನಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಹಳಿಯಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!