AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಕುಕ್ಕರ್ ಒಡೆದರೆ ಕೇವಲ ಅದೊಂದು ಕುಟುಂಬ ಒಡೆಯುತ್ತೆ, ಮಂಗಳೂರು ಕುಕ್ಕರ್ ಒಡೆದರೆ ದೇಶವೇ ಸಿಡಿಯುತ್ತೆ -ನಳಿನ್ ಕುಮಾರ್ ಕಟೀಲು ವ್ಯಾಖ್ಯಾನ

ಭ್ರಷ್ಟಾಚಾರಕ್ಕೆ ಅತಿ ಹೆಚ್ಚು ಆದ್ಯತೆ ಕೊಟ್ಟಿದ್ದು ಕಾಂಗ್ರೆಸ್. ಮೋದಿ ಬಂದ ಮೇಲೆ ಭ್ರಷ್ಟಾಚಾರ ಇಲ್ಲವಾಗಿದೆ. ರಾಜ್ಯದ ಕಾಂಗ್ರೆಸ್ ಅಧ್ಯಕ್ಷರೇ ಬೇಲ್ ಮೇಲಿದ್ದಾರೆ. ಸಿಬಿಐ ರೈಡ್ ಆದರೆ ಪ್ರತಿಭಟನೆ ಮಾಡುತ್ತಾರೆ.

ಬೆಳಗಾವಿ ಕುಕ್ಕರ್ ಒಡೆದರೆ ಕೇವಲ ಅದೊಂದು ಕುಟುಂಬ ಒಡೆಯುತ್ತೆ, ಮಂಗಳೂರು ಕುಕ್ಕರ್ ಒಡೆದರೆ ದೇಶವೇ ಸಿಡಿಯುತ್ತೆ -ನಳಿನ್ ಕುಮಾರ್ ಕಟೀಲು ವ್ಯಾಖ್ಯಾನ
ನಳಿನ್ ಕುಮಾರ್ ಕಟೀಲ್
TV9 Web
| Edited By: |

Updated on:Dec 20, 2022 | 1:29 PM

Share

ಭಟ್ಕಳ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(​DK Shivakumar) ವಿರುದ್ಧ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲು​(Nalin Kumar Kateel) ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಕುಕ್ಕರ್, ಮಂಗಳೂರು ಕುಕ್ಕರ್ ಒಂದೇ ಎಂದುಕೊಂಡಿದ್ದಾರೆ. ಬೆಳಗಾವಿ ಕುಕ್ಕರ್ ಒಡೆದರೆ ಕೇವಲ ಕುಟುಂಬ ಒಡೆಯುತ್ತೆ. ಮಂಗಳೂರು ಕುಕ್ಕರ್ ಒಡೆದರೆ ದೇಶ ಒಡೆಯುತ್ತೆ ಅಂತಾ ಗೊತ್ತಿಲ್ಲ. ದೇಶ ವಿರೋಧಿಗಳ ಬೆಂಬಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಿಲ್ಲುತ್ತಾರೆ. ಅದಕ್ಕಾಗಿಯೇ ಕಾಂಗ್ರೆಸ್​ ಭಯೋತ್ಪಾದಕ ಪಾರ್ಟಿಯಾಗಿದೆ ಎಂದು ನಳಿನ್ ಕುಮಾರ್ ಕಟೀಲು ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ‌ ಸಭೆಯಲ್ಲಿ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ. ಉಗ್ರನ ಎನ್ ಕೌಂಟರ್ ಮಾಡಿದಾಗ ಕಾಂಗ್ರೆಸ್ ರಾಷ್ಟ್ರೀಯ ಮುಖಂಡರೊಬ್ಬರು ಕಣ್ಣೀರು ಹಾಕ್ತಾರೆ. ಆದ್ರೆ ಸೈನಿಕರು ಸತ್ತಾಗ ಇವರು ಕಣ್ಣೀರು ಹಾಕುವುದಿಲ್ಲ. ಭ್ರಷ್ಟಾಚಾರಕ್ಕೆ ಅತಿ ಹೆಚ್ಚು ಆದ್ಯತೆ ಕೊಟ್ಟಿದ್ದು ಕಾಂಗ್ರೆಸ್. ಮೋದಿ ಬಂದ ಮೇಲೆ ಭ್ರಷ್ಟಾಚಾರ ಇಲ್ಲವಾಗಿದೆ. ರಾಜ್ಯದ ಕಾಂಗ್ರೆಸ್ ಅಧ್ಯಕ್ಷರೇ ಬೇಲ್ ಮೇಲಿದ್ದಾರೆ. ಸಿಬಿಐ ರೈಡ್ ಆದರೆ ಪ್ರತಿಭಟನೆ ಮಾಡುತ್ತಾರೆ. ನರೇಂದ್ರ ಮೋದಿ, ಅಮಿತ್ ಶಾ ಮೇಲೆ ದೂರು ದಾಖಲಾದಾಗ ಹೋರಾಟ ಮಾಡಲಿಲ್ಲ. ಕಾನೂನಿನ ಮೂಲಕ ಗೆಲುವನ್ನ ಪಡೆದರು. ಆದರೆ ಕಾಂಗ್ರೆಸ್​ಗೆ ಸಂವಿಧಾನದ ಮೇಲೆಯೇ ನಂಬಿಕೆ ಇಲ್ಲವಾಗಿದೆ. ಡಿಕೆ ಶಿವಕುಮಾರ್ ರೌಡಿಸಂ ರಾಜಕಾರಣ ಬಿಟ್ಟು ಭಯೋತ್ಪಾದಕ ರಾಜಕಾರಣ ಪ್ರಾರಂಭಿಸಿದ್ದಾರೆ ಎಂದರು.

ಇದನ್ನೂ ಓದಿ: ರೈಲ್ವೆ ನಿಲ್ದಾಣದಲ್ಲಿ ಈ ಚಳಿಯಲ್ಲೂ ಕಷ್ಟದ ಜೀವನ ನಡೆಸುತ್ತಿರುವ ವಲಸೆ ಕಾರ್ಮಿಕರು

ಕಾಂಗ್ರೆಸ್ ಮತ ಬ್ಯಾಂಕಿನ ಆಸೆಯಲ್ಲಿ ಭೌತಿಕವಾಗಿ ದಿವಾಳಿಯಾಗಿದೆ. ಈ ದೇಶದಲ್ಲಿ ಯಾವ ವಿಷಯಕ್ಕೆ ಬೆಂಬಲವಾಗಿ ಇರಬೇಕು ಯಾವುದಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂಬ ಮಾನಸಿಕತೆಯಿಂದ ಇನ್ನೂ ಹೊರಬಂದಿಲ್ಲ. ಕಾಂಗ್ರೆಸ್ ಕೇವಲ ಸಾವರ್ಕರ್ ವಿಷಯದಲ್ಲಿ ಮಾತ್ರ ವಿರೋಧ ಮಾಡುತ್ತಿಲ್ಲ. ದೇಶದ ನಮ್ಮ ಭದ್ರತೆ ವಿಷಯದಲ್ಲಿ ಪ್ರಶ್ನೆ ಮಾಡುತ್ತೆ ಸೈನಿಕರು, ವಿದೇಶಿ ನೀತಿಗಳ ಬಗ್ಗೆ ಪ್ರಶ್ನೆ ಮಾಡುತ್ತೆ. ಎಲ್ಲವನ್ನೂ ವಿರೋಧ ಮಾಡಿ ಕಾಂಗ್ರೆಸ್ ಭೌತಿಕ ದಿವಾಳಿಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಟೀಲ್ ಕುಡುಗಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:29 pm, Tue, 20 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?