AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಗೆ ಸ್ಪರ್ಧಿಸಲು ಧಮ್ ಇದ್ದರೆ ಮುಂದೆ ಬನ್ನಿ: ಸವಾಲು ಹಾಕಿದ ಅನಂತ್ ಕುಮಾರ್ ಹೆಗಡೆ

ಉತ್ತರ ಕನ್ನಡ ಜಿಲ್ಲೆಯ ಬೆಳಕೆ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ, ಚುನಾವಣೆಗೆ ಸ್ಪರ್ದಿಸಲು ಯಾರಾದರೂ ಯುವಕರು ತುಂಬ ಸಶಕ್ತರಾಗಿದ್ದರೆ ಬನ್ನಿ. ಇಂದೆ ಖುರ್ಚಿ ಮುಂದೆ ಇಟ್ಟು ಹೊಗುತ್ತೇನೆ.‌ ದಮ್ ಇದ್ದರೆ ಮುಂದೆ ಬನ್ನಿ ಎಂದು ಆಹ್ವಾನಿಸಿದರು. ಅಲ್ಲದೆ, ತಾವು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಅನಿವಾರ್ಯವಾಗಿದೆ ಎಂದರು.

ಲೋಕಸಭೆಗೆ ಸ್ಪರ್ಧಿಸಲು ಧಮ್ ಇದ್ದರೆ ಮುಂದೆ ಬನ್ನಿ: ಸವಾಲು ಹಾಕಿದ ಅನಂತ್ ಕುಮಾರ್ ಹೆಗಡೆ
ಲೋಕಸಭೆಗೆ ಸ್ಪರ್ಧಿಸಲು ದಮ್ ಇದ್ದರೆ ಮುಂದೆ ಬನ್ನಿ: ಯುವಕರಿಗೆ ಸವಾಲೆಸೆದ ಅನಂತ್ ಕುಮಾರ್ ಹೆಗಡೆ
ಸೂರಜ್​, ಮಹಾವೀರ್​ ಉತ್ತರೆ
| Updated By: Rakesh Nayak Manchi|

Updated on:Mar 05, 2024 | 5:42 PM

Share

ಕಾರವಾರ, ಮಾ.5: ಲೋಕಸಭೆ ಚುನಾವಣೆಗೆ (Lok Sabha Elections) ಸ್ಪರ್ದಿಸಲು ಯಾರಾದರೂ ಯುವಕರು ತುಂಬ ಸಶಕ್ತರಾಗಿದ್ದರೆ ಬನ್ನಿ. ಇಂದೆ ಖುರ್ಚಿ ಮುಂದೆ ಇಟ್ಟು ಹೊಗುತ್ತೇನೆ.‌ ದಮ್ ಇದ್ದರೆ ಮುಂದೆ ಬನ್ನಿ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegade) ಸವಾಲು ಹಾಕಿದರು. ಕಳೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಸುಮಾರು ನಾಲ್ಕೂವರೆ ವರ್ಷ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಳ್ಳದ ಹೆಗಡೆ, ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಈ ಬಾರಿ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತುಗಳ ನಡುವೆ ಪ್ರತಿ ಗ್ರಾಮಗಳಲ್ಲಿ ಸಭೆ ನಡೆಸುತ್ತಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಕಾರ್ಯಕರ್ತರನ್ನು ಆಕರ್ಷಿಸುತ್ತಿದ್ದಾರೆ.

ಭಟ್ಕಳ್ ತಾಲೂಕಿನ ಬೆಳಕೆ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಸಭೆಯಲ್ಲಿ ಮಾತನಾಡಿದ ಅನಂತ ಕುಮಾರ ಹೆಗಡೆ, ಅನಿವಾರ್ಯವಾಗಿ ನಾನು ಈ ಬಾರಿ ಇಲ್ಲಿ ಚುನಾವಣೆಗೆ ಸ್ಪರ್ದೆ ಮಾಡಬೇಕಿದೆ. ನನಗೆ ರಾಜಕೀಯ ಬೇಡ, ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ ಅಂತಾ ನೇರವಾಗಿ ಹೇಳಿದ್ದೆ. ಆದರೂ ಕೇಲವರು ನನ್ನ ಬಳಿ ಬಂದೂ ಸ್ಪರ್ಧೆ ಮಾಡಲು ಒತ್ತಾಯ ಮಾಡಿದರು. ಹೇಗೋ ಯು ಟರ್ನ್ ಮಾಡಿಕೊಂಡು ಮತ್ತೆ ರಾಜಕೀಯದಲ್ಲಿ ಮುಂದುವರೆಯುತ್ತಿದ್ದೇನೆ ಎಂದು ಹೇಳುವ ಮೂಲಕ ತಾನು ಈ ಬಾರಿ ಟಿಕೆಟ್ ಆಕಾಂಕ್ಷಿ ಎಂದು ಪರೋಕ್ಷವಾಗಿ ಹೇಳಿದರು.s

ಇದನ್ನೂ ಓದಿ: ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್ ಇಟ್ಕೊಂಡು ಓಡ್ತಿದ್ದಾರೆ: ಸ್ವಪಕ್ಷದ ನಾಯಕರಿಗೆ ಹೆಗಡೆ ಟಾಂಗ್

ನಾನು ರಾಜಕಾರಣಿಯಾಗಿ ಹುಟ್ಟಿಲ್ಲ, ನಾನು ರಾಜಕಾರಣಿಯಾಗಿ ಸಾಯುವುದಿಲ್ಲ. ರಾಜಕಾರಣದಲ್ಲಿ ಮುಂದುವರೆಯುವ ಅನಿವಾರ್ಯತೆಯೂ ನಮಗಿಲ್ಲ. ರಾಜಕಾರಣ ಮಾಡುವುದು ಅಷ್ಟು ಸುಲಭದ ಕೆಲಸ ಅಲ್ಲ. ಹಾಗಾಗಿದ್ದರೆ ಎಲ್ಲರೂ ರಾಜಕಾರಣ ಮಾಡುತ್ತಿದ್ದರು. ಯಾರಾದರೂ ಉತ್ತರ ಕುಮಾರರು ಸ್ಪರ್ಧೆಗೆ ರೆಡಿ ಇದ್ದರೆ ಬನ್ನಿ ಎಂದು ಸವಾಲು ಹಾಕಿದರು.

ಅಲ್ಲದೆ, ಈ ಕ್ಷೇತ್ರದ ಅರಿವೇ ಇಲ್ಲದವರು ಪಾರ್ಲಿಮೆಂಟ್ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಎಷ್ಟೊ ಜನರಿಗೆ ಕಿತ್ತೂರು, ಖಾನಾಪೂರ ನಕ್ಷೆಯಲ್ಲಿ ಎಲ್ಲಿ ಬರುತ್ತದೆ ಅನ್ನೊದೆ ಗೊತ್ತಿಲ್ಲ. ಚುನಾವಣೆಗೆ ಸ್ಪರ್ದಿಸಲು ಯಾರಾದರೂ ಯುವಕರು ತುಂಬ ಸಶಕ್ತರಾಗಿದ್ದರೆ ಬನ್ನಿ. ಇಂದೆ ಖುರ್ಚಿ ಮುಂದೆ ಇಟ್ಟು ಹೊಗುತ್ತೇನೆ.‌ ದಮ್ ಇದ್ದರೆ ಮುಂದೆ ಬನ್ನಿ ಎಂದು ಹೇಳಿ ಸಭೆಯಲ್ಲಿ ಟೆಬಲ್ ಮೇಲೆ ಖುರ್ಚಿ ಇಟ್ಟು ಯುವಕರಿಗೆ ಅಹ್ವಾನ ಕೊಟ್ಟರು.

ಭಟ್ಕಳದ ಇವತ್ತಿನ ರಾಜಕೀಯ ಪರಿಸ್ಥಿತಿ ಕಪ್ಪೆ ತುಲಾಭಾರ ಆಗಿದೆ. ಯಾರಾದರೂ ಮುಂದೆ ಹೊರಟರೆ ಕಾಲು ಹಿಡಿದು ಎಳೆಯಲಾಗುತ್ತದೆ. ಆಷಾಡ ಭೂತದಿಂದ ನಾವೇಲ್ಲರೂ ಹೋರಬರಬೇಕಿದೆ. ಚುನಾವಣೆ ಎಂಬುವುದು ಪ್ರಜಾಪ್ರಭುತ್ವದ ಯುದ್ಧ ಇದ್ದ ಹಾಗೆ. ನಾನು ಸೋಲಲು ಒಂದೇ ಒಂದು‌ ಮತ ಸಾಕು. ಅವನ್ಯಾರು ಅವನ ಬಳಿ ಎಷ್ಟು ಮತ ಇದೆ ಅಂತಾ ಮನಸಿನಲ್ಲಿಟ್ಟು ಚುನಾವಣೆ ಮಾಡಿದರೆ ಕಷ್ಟ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Tue, 5 March 24

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?