AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಸಮುದ್ರದಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; 40 ಜನರ ರಕ್ಷಣೆ

ಕುಮಟಾ(Kumta) ತಾಲೂಕಿನ ತದಡಿ ಬಳಿಯ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ ಘಟನೆ ನಡೆದಿದೆ. ಕೂಡಲೇ ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡದಿಂದ 40 ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಅದೃಷ್ಟವಶಾತ್​ ಯಾವುದೇ ಸಾವು ಸಂಭವಿಸಿಲ್ಲ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಕನ್ನಡ: ಸಮುದ್ರದಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; 40 ಜನರ ರಕ್ಷಣೆ
ಸಮುದ್ರದಲ್ಲಿ ಪ್ರವಾಸಿಗರ ಬೋಟ್ ಪಲ್ಟಿ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 19, 2024 | 10:45 PM

Share

ಉತ್ತರ ಕನ್ನಡ, ಮೇ.19: ಜಿಲ್ಲೆಯ ಕುಮಟಾ(Kumta) ತಾಲೂಕಿನ ತದಡಿ ಬಳಿಯ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ ಘಟನೆ ನಡೆದಿದೆ. ಕೂಡಲೇ ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡದಿಂದ 40 ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಈ ಪ್ರವಾಸಿ ಬೋಟ್​ ಗಣೇಶ ಎಂಬುವವರಿಗೆ ಸೇರಿದ್ದು, ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿದ್ದಕ್ಕೆ ಈ ಅವಘಡ ಸಂಭವಿಸಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲು

ಉಡುಪಿ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲು ನಡೆದಿದೆ. ಮುಡ್ಡಾಯಿಗುಡ್ಡೆ ನಿವಾಸಿಗಳಾದ ಹರೀಶ್(48) ಹಾಗೂ ಹೃತೇಶ್(18) ಸಾವನ್ನಪ್ಪಿದ್ದಾರೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ವೇದಾವತಿ ನದಿ ಪ್ರವಾಹದಲ್ಲಿ ಸಿಲುಕಿದ ಅರ್ಚಕ ಕುಟುಂಬ: ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿ

ಸಿಡಿಲು ಬಡಿದು ವ್ಯಕ್ತಿ ಸಾವು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಮೆಳೇಕತ್ತಿಗನೂರು ಗ್ರಾಮದ ಬಳಿ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ನಡೆದಿದೆ. ಕೆಂಪಣ್ಣ(54) ಮೃತ ರ್ದುದೈವಿ. ದನ ಮೇಯಿಸಲು ಹೋಗಿದ್ದಾಗ ಸಿಡಿಲು ಬಡಿದು ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 ವಿದ್ಯುತ್​ ತಂತಿ ತುಳಿದು ವ್ಯಕ್ತಿ ದುರ್ಮರಣ

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ವಿದ್ಯುತ್​ ತಂತಿ ತುಳಿದು ಇರ್ಷಾದ್(56) ಎಂಬಾತ ದುರ್ಮರಣ ಹೊಂದಿದ್ದಾರೆ. ರಾತ್ರಿ ಸುರಿದ ಗಾಳಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದೇ ಇರ್ಷಾದ್ ತುಳಿದು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!