AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಳು ಕೊಂಪೆಯಂತಾದ ಬೇಲೆಕೇರಿ ಬಂದರು: ಸೀಜ್ ಆದ ಕಬ್ಬಿಣ ಅದಿರಿನಲ್ಲಿ ಬೆಳೆಯಿತು ಗಿಡ ಗಂಟಿ

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಇತರರಿಗೆ ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣದ ಅದಿರು ಅಕ್ರಮ ಸಾಗಾಟ ಮಾಡಿದ್ದ ಪ್ರಕರಣದಲ್ಲಿ 7 ವರ್ಷಗಳಿಗೂ ಹೆಚ್ಚು ಜೈಲು ಶಿಕ್ಷೆ ಮತ್ತು 44 ಕೋಟಿಗೂ ಹೆಚ್ಚು ದಂಡ ವಿಧಿಸಿದೆ. ಈ ಪ್ರಕರಣದಿಂದಾಗಿ, ಒಂದು ಕಾಲದಲ್ಲಿ ಚಟುವಟಿಕೆಯ ತಾಣವಾಗಿದ್ದ ಬೇಲೆಕೇರಿ ಬಂದರು ಇಂದು ಅನಾಥವಾಗಿದೆ. ಮುಟ್ಟುಗೋಲು ಹಾಕಿಕೊಂಡಿದ್ದ ಲಕ್ಷಾಂತರ ಟನ್ ಅದಿರು ಸಮುದ್ರಕ್ಕೆ ಸೇರಿ ಹಾಳಾಗುತ್ತಿದೆ.

ಹಾಳು ಕೊಂಪೆಯಂತಾದ ಬೇಲೆಕೇರಿ ಬಂದರು: ಸೀಜ್ ಆದ ಕಬ್ಬಿಣ ಅದಿರಿನಲ್ಲಿ ಬೆಳೆಯಿತು ಗಿಡ ಗಂಟಿ
ಬೇಲೆಕೇರಿ ಬಂದರು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Oct 28, 2024 | 2:25 PM

Share

ಕಾರವಾರ, ಅಕ್ಟೋಬರ್ 28: ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ಸಾಗಾಟ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್​ ಹಾಗೂ ಇತರ ಅಪರಾಧಿಗಳಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯ 7 ವರ್ಷಗಳಿಗೂ ಹೆಚ್ಚು ಜೈಲು ಶಿಕ್ಷೆ ಮತ್ತು 44 ಕೋಟಿ ರೂಪಾಯಿಗೂ ಹೆಚ್ಚು ದಂಡ ವಿಧಿಸಿದೆ. ಮತ್ತೊಂದೆಡೆ, ಪ್ರಕರಣದ ಪ್ರಮುಖ ಕೇಂದ್ರಬಿಂದುವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೆಕೇರಿ ಬಂದರು ಇದೀಗ ಅನಾಥವಾಗಿದೆ. ಒಂದು ಕಾಲದಲ್ಲಿ ಕೊಟ್ಯಂತರ ರೂಪಾಯಿ ವ್ಯವಹಾರ ಮಾಡಿದ್ದ ಬೇಲೆಕೇರಿ ಬಂದರು ಇದೀಗ ಹಾಳು ಕೊಂಪೆಯಂತಾಗಿದೆ.

14 ವರ್ಷಗಳ ಹಿಂದೆ ತನಿಖಾ ಸಂಸ್ಥೆಗಳು ಮುಟ್ಟುಗೋಲು ಹಾಕಿಕೊಂಡಿದ್ದ ಕೊಟ್ಯಂತರ ರೂಪಾಯಿ ಮೌಲ್ಯದ ಕಬ್ಬಿಣದ ಅದಿರು ಸಮುದ್ರ ಪಾಲಾಗುತ್ತಿದೆ. ಬೇಲೆಕೇರಿ ಬಂದಿರಿನಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾದ ಸುಮಾರು 2 ಲಕ್ಷ ಮೇಟ್ರಿಕ್ ಟನ್ ಕಬ್ಬಿಣದ ಅದಿರು ಇದೆ. ಅದಿರಿನ ಗುಡ್ಡೆಯ ಮೇಲೆ ಹಾಕಿದ್ದ ಟಾರ್ಪಲ್ ಬಿಸಿಲಿನ ಶಾಖಕ್ಕೆ ಹರಿದು ಹೋಗಿ ಹಾಳಾಗಿದೆ. ಕಬ್ಬಿಣದ ಅದಿರಿನ ಗುಡ್ಡೆಯಲ್ಲಿ ಈಗ ಗಿಡ ಗಂಟಿಗಳು ಬೆಳೆದು ನಿಂತಿವೆ. ಸಮುದ್ರಕ್ಕೆ ಅಂಟಿಕೊಂಡು ಗುಡ್ಡೆಹಾಕಿರುವ ಅದಿರು ಸಮುದ್ರ ಪಾಲಾಗುತ್ತಿವೆ.

ಇದನ್ನೂ ಓದಿ: ಸತೀಶ್ ಸೈಲ್​ಗೆ ಜೈಲು ಶಿಕ್ಷೆ: ಯಾವ ಪ್ರಕರಣದಲ್ಲಿ ಎಷ್ಟು ಶಿಕ್ಷೆ? ಇಲ್ಲಿದೆ ವಿವರ

ಒಟ್ಟು 8 ಲಕ್ಷ ಮೇಟ್ರಿಕ್ ಟನ್ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಆ ಪೈಕಿ ಸದ್ಯ 2 ಲಕ್ಷ ಮೆಟ್ರಿಕ್ ಟನ್ ಅದಿರು ಬಂದರಿನಲ್ಲಿದೆ ಎನ್ನಲಾಗಿದೆ. ಬಂದರಿನ ಮುಖ್ಯ ದ್ವಾರವನ್ನೂ ಸಹ ಪೂರ್ತಿಯಾಗಿ ಸೀಜ್ ಮಾಡಲಾಗಿದ್ದು, ಸಣ್ಣ ಕಿಂಡಿಯ ಮೂಲಕ ಬಂದರಿನ ಒಳಗೆ ಹೊಗಲು ಮಾತ್ರ ಅವಕಾಶವಿದೆ.

Iron Ore Smuggling Case Verdict: Belekeri port now Abandoned, seized ore goes to sea

ಕಬ್ಬಿಣದ ಅದಿರಿನ ಗುಡ್ಡೆಯಲ್ಲಿ ಗಿಡ ಗಂಟಿಗಳು ಬೆಳೆದು ನಿಂತಿರುವುದು

ಸದ್ಯ ಬೇಲೆಕೇರಿ ಬಂದರು ಹವ್ಯಾಸಿ ಮೀನುಗಾರರು ಹಾಗೂ ಯುವಕ ಯುವತಿಯರ ನೆಚ್ಚಿನ ತಾಣವಾಗಿದೆ.

ಇದನ್ನೂ ಓದಿ: ಬೇಲೆಕೇರಿ ಅದಿರು ಅಕ್ರಮ: ಸತೀಶ್ ಸೈಲ್ ಪಾತ್ರವೇನು? 14 ವರ್ಷ ಹಿಂದಿನ ಪ್ರಕರಣದ ಸಮಗ್ರ ಮಾಹಿತಿ ಇಲ್ಲಿದೆ

ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಆರೋಪ ಸಾಬೀತಾದ್ದರಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ದೋಷಿಗಳು ಎಂದು ಇತ್ತೀಚೆಗೆ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟಿಸಲಾಗಿತ್ತು. ಸತೀಶ್ ಸೈಲ್​ಗೆ ಒಳಸಂಚಿನ ಅಪರಾಧಕ್ಕೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಲಾಗಿತ್ತು. ಒಟ್ಟು ಆರು ಪ್ರಕರಣಗಳಲ್ಲಿ 44 ಕೋಟಿ ರೂಪಾಯಿಗೂ ಹೆಚ್ಚು ದಂಡ ವಿಧಿಸಿತ್ತು. ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ ಅದಿರು ಸಾಗಾಟ ಮಾಡಿದ್ದ ಪ್ರಕರಣ ಇದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?