AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಳು ಕೊಂಪೆಯಂತಾದ ಬೇಲೆಕೇರಿ ಬಂದರು: ಸೀಜ್ ಆದ ಕಬ್ಬಿಣ ಅದಿರಿನಲ್ಲಿ ಬೆಳೆಯಿತು ಗಿಡ ಗಂಟಿ

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಇತರರಿಗೆ ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣದ ಅದಿರು ಅಕ್ರಮ ಸಾಗಾಟ ಮಾಡಿದ್ದ ಪ್ರಕರಣದಲ್ಲಿ 7 ವರ್ಷಗಳಿಗೂ ಹೆಚ್ಚು ಜೈಲು ಶಿಕ್ಷೆ ಮತ್ತು 44 ಕೋಟಿಗೂ ಹೆಚ್ಚು ದಂಡ ವಿಧಿಸಿದೆ. ಈ ಪ್ರಕರಣದಿಂದಾಗಿ, ಒಂದು ಕಾಲದಲ್ಲಿ ಚಟುವಟಿಕೆಯ ತಾಣವಾಗಿದ್ದ ಬೇಲೆಕೇರಿ ಬಂದರು ಇಂದು ಅನಾಥವಾಗಿದೆ. ಮುಟ್ಟುಗೋಲು ಹಾಕಿಕೊಂಡಿದ್ದ ಲಕ್ಷಾಂತರ ಟನ್ ಅದಿರು ಸಮುದ್ರಕ್ಕೆ ಸೇರಿ ಹಾಳಾಗುತ್ತಿದೆ.

ಹಾಳು ಕೊಂಪೆಯಂತಾದ ಬೇಲೆಕೇರಿ ಬಂದರು: ಸೀಜ್ ಆದ ಕಬ್ಬಿಣ ಅದಿರಿನಲ್ಲಿ ಬೆಳೆಯಿತು ಗಿಡ ಗಂಟಿ
ಬೇಲೆಕೇರಿ ಬಂದರು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Oct 28, 2024 | 2:25 PM

Share

ಕಾರವಾರ, ಅಕ್ಟೋಬರ್ 28: ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ಸಾಗಾಟ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್​ ಹಾಗೂ ಇತರ ಅಪರಾಧಿಗಳಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯ 7 ವರ್ಷಗಳಿಗೂ ಹೆಚ್ಚು ಜೈಲು ಶಿಕ್ಷೆ ಮತ್ತು 44 ಕೋಟಿ ರೂಪಾಯಿಗೂ ಹೆಚ್ಚು ದಂಡ ವಿಧಿಸಿದೆ. ಮತ್ತೊಂದೆಡೆ, ಪ್ರಕರಣದ ಪ್ರಮುಖ ಕೇಂದ್ರಬಿಂದುವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೆಕೇರಿ ಬಂದರು ಇದೀಗ ಅನಾಥವಾಗಿದೆ. ಒಂದು ಕಾಲದಲ್ಲಿ ಕೊಟ್ಯಂತರ ರೂಪಾಯಿ ವ್ಯವಹಾರ ಮಾಡಿದ್ದ ಬೇಲೆಕೇರಿ ಬಂದರು ಇದೀಗ ಹಾಳು ಕೊಂಪೆಯಂತಾಗಿದೆ.

14 ವರ್ಷಗಳ ಹಿಂದೆ ತನಿಖಾ ಸಂಸ್ಥೆಗಳು ಮುಟ್ಟುಗೋಲು ಹಾಕಿಕೊಂಡಿದ್ದ ಕೊಟ್ಯಂತರ ರೂಪಾಯಿ ಮೌಲ್ಯದ ಕಬ್ಬಿಣದ ಅದಿರು ಸಮುದ್ರ ಪಾಲಾಗುತ್ತಿದೆ. ಬೇಲೆಕೇರಿ ಬಂದಿರಿನಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾದ ಸುಮಾರು 2 ಲಕ್ಷ ಮೇಟ್ರಿಕ್ ಟನ್ ಕಬ್ಬಿಣದ ಅದಿರು ಇದೆ. ಅದಿರಿನ ಗುಡ್ಡೆಯ ಮೇಲೆ ಹಾಕಿದ್ದ ಟಾರ್ಪಲ್ ಬಿಸಿಲಿನ ಶಾಖಕ್ಕೆ ಹರಿದು ಹೋಗಿ ಹಾಳಾಗಿದೆ. ಕಬ್ಬಿಣದ ಅದಿರಿನ ಗುಡ್ಡೆಯಲ್ಲಿ ಈಗ ಗಿಡ ಗಂಟಿಗಳು ಬೆಳೆದು ನಿಂತಿವೆ. ಸಮುದ್ರಕ್ಕೆ ಅಂಟಿಕೊಂಡು ಗುಡ್ಡೆಹಾಕಿರುವ ಅದಿರು ಸಮುದ್ರ ಪಾಲಾಗುತ್ತಿವೆ.

ಇದನ್ನೂ ಓದಿ: ಸತೀಶ್ ಸೈಲ್​ಗೆ ಜೈಲು ಶಿಕ್ಷೆ: ಯಾವ ಪ್ರಕರಣದಲ್ಲಿ ಎಷ್ಟು ಶಿಕ್ಷೆ? ಇಲ್ಲಿದೆ ವಿವರ

ಒಟ್ಟು 8 ಲಕ್ಷ ಮೇಟ್ರಿಕ್ ಟನ್ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಆ ಪೈಕಿ ಸದ್ಯ 2 ಲಕ್ಷ ಮೆಟ್ರಿಕ್ ಟನ್ ಅದಿರು ಬಂದರಿನಲ್ಲಿದೆ ಎನ್ನಲಾಗಿದೆ. ಬಂದರಿನ ಮುಖ್ಯ ದ್ವಾರವನ್ನೂ ಸಹ ಪೂರ್ತಿಯಾಗಿ ಸೀಜ್ ಮಾಡಲಾಗಿದ್ದು, ಸಣ್ಣ ಕಿಂಡಿಯ ಮೂಲಕ ಬಂದರಿನ ಒಳಗೆ ಹೊಗಲು ಮಾತ್ರ ಅವಕಾಶವಿದೆ.

Iron Ore Smuggling Case Verdict: Belekeri port now Abandoned, seized ore goes to sea

ಕಬ್ಬಿಣದ ಅದಿರಿನ ಗುಡ್ಡೆಯಲ್ಲಿ ಗಿಡ ಗಂಟಿಗಳು ಬೆಳೆದು ನಿಂತಿರುವುದು

ಸದ್ಯ ಬೇಲೆಕೇರಿ ಬಂದರು ಹವ್ಯಾಸಿ ಮೀನುಗಾರರು ಹಾಗೂ ಯುವಕ ಯುವತಿಯರ ನೆಚ್ಚಿನ ತಾಣವಾಗಿದೆ.

ಇದನ್ನೂ ಓದಿ: ಬೇಲೆಕೇರಿ ಅದಿರು ಅಕ್ರಮ: ಸತೀಶ್ ಸೈಲ್ ಪಾತ್ರವೇನು? 14 ವರ್ಷ ಹಿಂದಿನ ಪ್ರಕರಣದ ಸಮಗ್ರ ಮಾಹಿತಿ ಇಲ್ಲಿದೆ

ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಆರೋಪ ಸಾಬೀತಾದ್ದರಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ದೋಷಿಗಳು ಎಂದು ಇತ್ತೀಚೆಗೆ ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟಿಸಲಾಗಿತ್ತು. ಸತೀಶ್ ಸೈಲ್​ಗೆ ಒಳಸಂಚಿನ ಅಪರಾಧಕ್ಕೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಲಾಗಿತ್ತು. ಒಟ್ಟು ಆರು ಪ್ರಕರಣಗಳಲ್ಲಿ 44 ಕೋಟಿ ರೂಪಾಯಿಗೂ ಹೆಚ್ಚು ದಂಡ ವಿಧಿಸಿತ್ತು. ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ ಅದಿರು ಸಾಗಾಟ ಮಾಡಿದ್ದ ಪ್ರಕರಣ ಇದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು