AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಸದಾಶಿವಗಡ ಕೊಟೆಯ ಮೇಲೆ ಜಂಗಲ್ ಲಾಡ್ಜ್ ಕಣ್ಣು: ರೆಸಾರ್ಟ್ ನಿರ್ಮಾಣಕ್ಕೆ ಸ್ಥಳೀಯ ಸಂಘಟನೆಗಳ ವಿರೋಧ

ಗೋವಾ ಕರ್ನಾಟಕ ಗಡಿಯಲ್ಲಿರುವ ಐತಿಹಾಸಿಕ ಸದಾಶಿವಗಡ ಕೊಟೆಯ ಮೇಲೆ ಜಂಗಲ್ ಲಾಡ್ಜ್ ಕಣ್ಣು ಬಿದ್ದಿದೆ. ಕಾಳಿ ನದಿಯಂಚಿನ ಸುಂದರವಾದ ಪರಿಸರದಲ್ಲಿರುವ ಕೋಟೆಯ ಆವರಣದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿ ನಡೆದಿದೆ. ಆದರೆ, ಇದಕ್ಕೆ ಸ್ಥಳೀಯ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಐತಿಹಾಸಿಕ ಕೋಟೆಯನ್ನು ಉಳಿಸಿಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಐತಿಹಾಸಿಕ ಸದಾಶಿವಗಡ ಕೊಟೆಯ ಮೇಲೆ ಜಂಗಲ್ ಲಾಡ್ಜ್ ಕಣ್ಣು: ರೆಸಾರ್ಟ್ ನಿರ್ಮಾಣಕ್ಕೆ ಸ್ಥಳೀಯ ಸಂಘಟನೆಗಳ ವಿರೋಧ
ಸದಾಶಿವಗಡ ಕೊಟೆ
TV9 Web
| Edited By: |

Updated on: Jun 02, 2025 | 7:39 AM

Share

ಕಾರವಾರ, ಜೂನ್ 2: ಅರಬ್ಬೀ ಸಮುದ್ರ ಹಾಗೂ ಕಾಳಿ ನದಿ ಹಿನ್ನಿರಿನ ಪ್ರದೇಶಗಳೆರಡರ ಮಧ್ಯದಲ್ಲಿರುವ ಗುಡ್ಡದ ಮೇಲೆ ಕಾಣಿಸುವ ಸುಂದರವಾದ ಕೊಟೆಯೇ ಸದಾಶಿವಗಡ (Sadashivgad). ಇದು ಉತ್ತರ ಕನ್ನಡ ಜಿಲ್ಲೆಯ ಕಾರವಾರ (Karawar) ಪಟ್ಟಣದ ಬಳಿ ಇದೆ. ಅರಬ್ಬೀ ಸಮುದ್ರಕ್ಕೆ ಕಾಳಿ ನದಿ ಸಂಗಮ ಆಗುವ ಸ್ಥಳ ಅತ್ಯಾಕರ್ಷಣೀಯವಾಗಿದೆ. ಕೇವಲ ನೈಸರ್ಗಿಕ ಸೌಂದರ್ಯಕ್ಕಷ್ಟೇ ಅಲ್ಲದೆ ಐತಿಹಾಸಿಕವಾಗಿಯೂ ಈ ಪ್ರದೇಶ ಪ್ರಸಿದ್ಧಿ ಪಡೆದಿದೆ. ಹಿಂದೆ, ಹಿಂದೂಗಳ ಮೇಲೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಹೋರಾಟ ನಡೆಸಿದ್ದ ಶಿವಾಜಿ ಮಹಾರಾಜ್ ಈ ಗುಡ್ಡದ ಮೇಲಿನ ಸದಾಶಿವಗಡ ಕೊಟೆಯಲ್ಲಿ ಬಂದು ನೆಲೆಸಿದ್ದ ಎಂಬ ಇತಿಹಾಸ ಇದೆ. ಸಮುದ್ರದ ಅಂಚಿನಲ್ಲಿ ಕೊಟೆ ಇರುವುದರಿಂದ, ಮುಂಬೈಯಿಂದ ಗೋವಾ ಹಾಗೂ ಕರ್ನಾಟಕ ನಡುವಿನ ಆಮದು-ರಪ್ತು ವ್ಯವಹಾರಕ್ಕೆ ಈ ಕೋಟೆ ಪ್ರಮುಖ ಪಾತ್ರವಹಿಸಿತ್ತು ಎಂದೂ ಹೇಳಲಾಗಿದೆ. ಇಂತಹ ಐತಿಹಾಸಿಕ ಕೊಟೆಗೆ ಆಧುನಿಕತೆಯ ಸ್ಪರ್ಶ ಕೊಡುವುದರ ಬದಲು, ಅದರ ಗೋಡೆ ಕೆಡವಿ ಹೊಸ ರೆಸಾರ್ಟ್ ನಿರ್ಮಾಣ ಮಾಡಲು ರಾಜ್ಯದ ಜಂಗಲ್ ಲಾಡ್ಜ್ ಹಾಗೂ ರೆಸಾರ್ಟ್​ನವರು ಮುಂದಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸದಾಶಿವಗಡ ಹೆಸರು ಬಂದಿದ್ಹೇಗೆ?

ಸುಮಾರು 4 ಶತಮಾನಗಳ ಇತಿಹಾಸವುಳ್ಳ ಸುಂದರವಾದ ಕೊಟೆಯ ಜೊತೆ ಸ್ಥಳೀಯರು ಅವಿನಾಭವ ಸಂಬಂಧ ಹೊಂದಿದ್ದಾರೆ. ಸದಾಶಿವರಾಯ ಎಂಬ ರಾಜ ಈ ಕೊಟೆ ಕಟ್ಟಿದ್ದರಿಂದ ಕಾಳಿ ನದಿಯಂಚಿನ ಈ ಗ್ರಾಮಕ್ಕೆ ಸದಾಶಿವ ಗಡ ಎಂಬ ಹೆಸರು ಬಂದಿದೆ ಎಂಬ ಪ್ರತೀತಿ ಇದೆ. ತಮ್ಮೂರಿನ ನಿರ್​ಮಾತೃವಿನ ಕನಸಿನ ಕೂಸಾದ ಸದಾಶಿವಗಡ ಕೊಟೆ ಪ್ರದೇಶದಲ್ಲಿ ಈಗಾಗಲೇ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ಆದರೆ, ಇನ್ನಷ್ಟು ಕೊಠಡಿಗಳ ನಿರ್ಮಾಣಕ್ಕೆ ಮುಂದಾಗಿದ್ದರಿಂದ ಕೊಟೆಗೆ ಹೊಂದಿರುವ ಗುಡ್ಡಕ್ಕೆ ಸಮಸ್ಯೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಾಗಾಗಿ, ಯಾವುದೇ ಕಾರಣಕ್ಕೂ ಕಾಮಗಾರಿ ಪೂರ್ಣಗೊಳಿಸಲು ಬಿಡಬಾರದು. ತಕ್ಷಣ ಕಾಮಗಾರಿ ಕೈಬಿಡಬೇಕೆಂದು ಸ್ಥಳೀಯರು ಜಿಲ್ಲಾಡಳಿತ ಮತ್ತು ಸ್ಥಳಿಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಜಲಪಾತಗಳಿಗೆ ಜೀವ ಕಳೆ ತಂದ ಮುಂಗಾರು: ಪ್ರವಾಸಿಗರನ್ನ ಸೆಳೆಯುತ್ತಿದೆ ಮಾಗೋಡು ಫಾಲ್ಸ್

ಇದನ್ನೂ ಓದಿ
Image
ಅಂಧರು ಬಟನ್ ಪ್ರೆಸ್ ಮಾಡಿದ್ರೆ ಸಾಕು, ಇದ್ದಲ್ಲಿಗೆ ಬರುತ್ತೆ ಬಿಎಂಟಿಸಿ ಬಸ್
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ
Image
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?
Image
ಜಲಪಾತಗಳಿಗೆ ಜೀವ ಕಳೆ: ಪ್ರವಾಸಿಗರನ್ನ ಸೆಳೆಯುತ್ತಿದೆ ಮಾಗೋಡು ಫಾಲ್ಸ್

ಒಟ್ಟಾರೆಯಾಗಿ, ಐತಿಹಾಸಿಕ ಕೋಟೆ ಹೊಂದಿರುವ ಗುಡ್ಡದಲ್ಲಿ ರೆಸಾರ್ಟ್ ನಿರ್ಮಾಣದಿಂದ ಕೊಟೆಯ ಕಟ್ಟಡಕ್ಕೆ ಧಕ್ಕೆ ಬರುವುದಲ್ಲದೆ, ಅದರ ಐತಿಹಾಸಿಕ ಸಂರಚನೆಗೂ ಧಕ್ಕೆಯಾಗುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಆದಷ್ಟು ಬೇಗ ರೆಸಾರ್ಟ್ ನಿರ್ಮಾಣ ಕಾಮಗಾರಿ ಕೈ ಬಿಡದೆ ಇದ್ದರೆ ಹೋರಾಟ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ