AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ನದಿ ಸೇತುವೆ ಕುಸಿತ ಪ್ರಕರಣ; ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು

ಶಿರೂರು ದುರಂತ ಮಾಸುವ ಮುನ್ನವೇ ಉತ್ತರ ಕನ್ನಡದಲ್ಲಿ ಇನ್ನೊಂದು ಅವಘಡ ನಡೆದಿದ್ದು, ಸುಮಾರು 41 ವರ್ಷಗಳಿಂದ ಕಾರವಾರ-ಗೋವಾ ನಡುವೆ ಸಂಚಾರಕ್ಕೆ ಬಳಕೆಯಾಗುತ್ತಿದ್ದ ಸೇತುವೆ ರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಕುಸಿದುಬಿದ್ದಿತ್ತು. ಈ ದುರ್ಘಟನೆಯಿಂದ ಎಚ್ಚೆತ್ತ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೂಡಲೇ ಹಳೆಯ ಸೇತುವೆ ಪಕ್ಕದಲ್ಲಿದ್ದ ಹೊಸ ಸೇತುವೆ ಮೇಲೆ ಸಂಚಾರ ನಿರ್ಭಂದಿಸಿದ್ದು ಸೇತುವೆಯ ಗುಣಮಟ್ಟದ ಕುರಿತು ವರದಿ ನೀಡುವಂತೆ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್‌ಬಿ ಕಂಪೆನಿಗೆ ಸೂಚನೆ ನೀಡಿದ್ದರು. ಇದೀಗ ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು ನೀಡಿದೆ.

ಕಾಳಿ ನದಿ ಸೇತುವೆ ಕುಸಿತ ಪ್ರಕರಣ; ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು
ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Aug 08, 2024 | 4:09 PM

Share

ಉತ್ತರ ಕನ್ನಡ, ಆ.08: ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಅನಾಹುತಗಳ ಮೇಲೆ ಅನಾಹುತ ಸಂಭವಿಸುತ್ತಿದೆ. ಇತ್ತೀಚೆಗಷ್ಟೇ ಶಿರೂರು ಗುಡ್ಡ ಕುಸಿತವಾಗಿ ಹಲವಾರು ಜನರು ಪ್ರಾಣಬಿಟ್ಟಿದ್ದರು. ಇನ್ನೂ ಕೂಡ ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಯುತ್ತಲೇ ಇದೆ. ಹೀಗಿರುವಾಗ ಕಾಳಿ ನದಿ ಅಡ್ಡಲಾಗಿ ಕಟ್ಟಿರುವ ಸೇತುವೆ ಕುಸಿತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅವಕಾಶ ನೀಡಿದೆ.

ಹೊಸ ಸೇತುವೆ ಧಾರಣ ಶಕ್ತಿ ಬಗ್ಗೆ ವರದಿ ಕೇಳಿದ್ದ ಉತ್ತರ ಕನ್ನಡ ಡಿಸಿ

ಹೌದು, ಘಟನೆ ಸಂಭವಿಸುತ್ತಿದ್ದಂತೆ ಎಚ್ಚೆತ್ತ ಉ.ಕನ್ನಡ ಜಿಲ್ಲಾಧಿಕಾರಿ, ‘ಹೊಸ ಸೇತುವೆ ಧಾರಣ ಶಕ್ತಿ ಬಗ್ಗೆ ವರದಿ ಕೇಳಿದ್ದರು. ಅದರಂತೆ ಪರಿಶೀಲನೆ ಬಳಿಕ ವಾಹನ ಸಂಚಾರಕ್ಕೆ NHAI ಅವಕಾಶ ನೀಡಿದ್ದು, 2013ರಲ್ಲಿ ನಿರ್ಮಾಣವಾದ ಹೊಸ ಸೇತುವೆ ಸಂಚಾರಕ್ಕೆ ಸೂಕ್ತವಾಗಿದೆ ಎಂದಿದೆ. ಇದೀಗ NHAI ವರದಿ ಬಳಿಕ 2 ಬದಿಯ ಸಂಚಾರಕ್ಕೆ ಜಿಲ್ಲಾಡಳಿತ ಒಪ್ಪಿಗೆ ಸೂಚಿಸಿದೆ. ಆದರೂ ಭಾರಿ ಗಾತ್ರದ ವಾಹನಗಳನ್ನು ಪೊಲೀಸರ ಕಟ್ಟೆಚ್ಚರದಲ್ಲಿ ಬಿಡಲಾಗುತ್ತಿದೆ.

ಇದನ್ನೂ ಓದಿ:ಕಾರವಾರ ಸೇತುವೆ ಕುಸಿತ: ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ NHAIಗೆ ಸಂಶಯ?

ಸೇತುವೆ ಕುಸಿದ ಸ್ಥಳಕ್ಕೆ ದೆಹಲಿ ಅಧಿಕಾರಿಗಳ ತಂಡ ಭೇಟಿ

ಇನ್ನು ಸೇತುವೆ ಕುಸಿತ ಸ್ಥಳಕ್ಕೆ ದೆಹಲಿಯಿಂದ NHAI, IRB ಇಂಜಿನಿಯರ್ ಸೇರಿ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ, ಸೇತುವೆ ಕುಸಿತ ಸ್ಥಳವನ್ನು ವೀಕ್ಷಿಸಿ ಪರಿಶೀಲಿಸಿದೆ. ಜೊತೆಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ ಅವರ ಜೊತೆ ಸ್ಥಳದಲ್ಲೇ ಮಾಹಿತಿ ಹಂಚಿಕೊಂಡಿದೆ. ಹಳೆಯ ಸೇತುವೆ ಹೇಗೆ ಕುಸಿದಿರಬಹುದು ಎಂದು ವಿಶ್ಲೇಷಿಸಲಾಗಿದೆ. ಇನ್ನು ಹೊಸ ಸೇತುವೆ ಧಾರಣ ಶಕ್ತಿ ಕುರಿತು ಪ್ರಮಾಣಪತ್ರ ನೀಡುವಂತೆ ಜಿಲ್ಲಾಧಿಕಾರಿ ಕೇಳಿದ್ದ ಹಿನ್ನಲೆ ಸದ್ಯ ಸೇತುವೆ ಮೇಲೆ ಕೆಎಸ್ಆರ್‌ಟಿಸಿ ಬಸ್ ಹೊರತುಪಡಿಸಿ ಎಲ್ಲಾ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸರಕು ಸಾಗಾಟದ ವಾಹನಗಳ ಓಡಾಟಕ್ಕೂ ಪೊಲೀಸರು ಅವಕಾಶ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Thu, 8 August 24

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್