ಕಾಳಿ ನದಿ ಸೇತುವೆ ಕುಸಿತ ಪ್ರಕರಣ; ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು

ಶಿರೂರು ದುರಂತ ಮಾಸುವ ಮುನ್ನವೇ ಉತ್ತರ ಕನ್ನಡದಲ್ಲಿ ಇನ್ನೊಂದು ಅವಘಡ ನಡೆದಿದ್ದು, ಸುಮಾರು 41 ವರ್ಷಗಳಿಂದ ಕಾರವಾರ-ಗೋವಾ ನಡುವೆ ಸಂಚಾರಕ್ಕೆ ಬಳಕೆಯಾಗುತ್ತಿದ್ದ ಸೇತುವೆ ರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಕುಸಿದುಬಿದ್ದಿತ್ತು. ಈ ದುರ್ಘಟನೆಯಿಂದ ಎಚ್ಚೆತ್ತ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೂಡಲೇ ಹಳೆಯ ಸೇತುವೆ ಪಕ್ಕದಲ್ಲಿದ್ದ ಹೊಸ ಸೇತುವೆ ಮೇಲೆ ಸಂಚಾರ ನಿರ್ಭಂದಿಸಿದ್ದು ಸೇತುವೆಯ ಗುಣಮಟ್ಟದ ಕುರಿತು ವರದಿ ನೀಡುವಂತೆ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್‌ಬಿ ಕಂಪೆನಿಗೆ ಸೂಚನೆ ನೀಡಿದ್ದರು. ಇದೀಗ ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು ನೀಡಿದೆ.

ಕಾಳಿ ನದಿ ಸೇತುವೆ ಕುಸಿತ ಪ್ರಕರಣ; ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು
ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 08, 2024 | 4:09 PM

ಉತ್ತರ ಕನ್ನಡ, ಆ.08: ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಅನಾಹುತಗಳ ಮೇಲೆ ಅನಾಹುತ ಸಂಭವಿಸುತ್ತಿದೆ. ಇತ್ತೀಚೆಗಷ್ಟೇ ಶಿರೂರು ಗುಡ್ಡ ಕುಸಿತವಾಗಿ ಹಲವಾರು ಜನರು ಪ್ರಾಣಬಿಟ್ಟಿದ್ದರು. ಇನ್ನೂ ಕೂಡ ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಯುತ್ತಲೇ ಇದೆ. ಹೀಗಿರುವಾಗ ಕಾಳಿ ನದಿ ಅಡ್ಡಲಾಗಿ ಕಟ್ಟಿರುವ ಸೇತುವೆ ಕುಸಿತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅವಕಾಶ ನೀಡಿದೆ.

ಹೊಸ ಸೇತುವೆ ಧಾರಣ ಶಕ್ತಿ ಬಗ್ಗೆ ವರದಿ ಕೇಳಿದ್ದ ಉತ್ತರ ಕನ್ನಡ ಡಿಸಿ

ಹೌದು, ಘಟನೆ ಸಂಭವಿಸುತ್ತಿದ್ದಂತೆ ಎಚ್ಚೆತ್ತ ಉ.ಕನ್ನಡ ಜಿಲ್ಲಾಧಿಕಾರಿ, ‘ಹೊಸ ಸೇತುವೆ ಧಾರಣ ಶಕ್ತಿ ಬಗ್ಗೆ ವರದಿ ಕೇಳಿದ್ದರು. ಅದರಂತೆ ಪರಿಶೀಲನೆ ಬಳಿಕ ವಾಹನ ಸಂಚಾರಕ್ಕೆ NHAI ಅವಕಾಶ ನೀಡಿದ್ದು, 2013ರಲ್ಲಿ ನಿರ್ಮಾಣವಾದ ಹೊಸ ಸೇತುವೆ ಸಂಚಾರಕ್ಕೆ ಸೂಕ್ತವಾಗಿದೆ ಎಂದಿದೆ. ಇದೀಗ NHAI ವರದಿ ಬಳಿಕ 2 ಬದಿಯ ಸಂಚಾರಕ್ಕೆ ಜಿಲ್ಲಾಡಳಿತ ಒಪ್ಪಿಗೆ ಸೂಚಿಸಿದೆ. ಆದರೂ ಭಾರಿ ಗಾತ್ರದ ವಾಹನಗಳನ್ನು ಪೊಲೀಸರ ಕಟ್ಟೆಚ್ಚರದಲ್ಲಿ ಬಿಡಲಾಗುತ್ತಿದೆ.

ಇದನ್ನೂ ಓದಿ:ಕಾರವಾರ ಸೇತುವೆ ಕುಸಿತ: ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ NHAIಗೆ ಸಂಶಯ?

ಸೇತುವೆ ಕುಸಿದ ಸ್ಥಳಕ್ಕೆ ದೆಹಲಿ ಅಧಿಕಾರಿಗಳ ತಂಡ ಭೇಟಿ

ಇನ್ನು ಸೇತುವೆ ಕುಸಿತ ಸ್ಥಳಕ್ಕೆ ದೆಹಲಿಯಿಂದ NHAI, IRB ಇಂಜಿನಿಯರ್ ಸೇರಿ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ, ಸೇತುವೆ ಕುಸಿತ ಸ್ಥಳವನ್ನು ವೀಕ್ಷಿಸಿ ಪರಿಶೀಲಿಸಿದೆ. ಜೊತೆಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ ಅವರ ಜೊತೆ ಸ್ಥಳದಲ್ಲೇ ಮಾಹಿತಿ ಹಂಚಿಕೊಂಡಿದೆ. ಹಳೆಯ ಸೇತುವೆ ಹೇಗೆ ಕುಸಿದಿರಬಹುದು ಎಂದು ವಿಶ್ಲೇಷಿಸಲಾಗಿದೆ. ಇನ್ನು ಹೊಸ ಸೇತುವೆ ಧಾರಣ ಶಕ್ತಿ ಕುರಿತು ಪ್ರಮಾಣಪತ್ರ ನೀಡುವಂತೆ ಜಿಲ್ಲಾಧಿಕಾರಿ ಕೇಳಿದ್ದ ಹಿನ್ನಲೆ ಸದ್ಯ ಸೇತುವೆ ಮೇಲೆ ಕೆಎಸ್ಆರ್‌ಟಿಸಿ ಬಸ್ ಹೊರತುಪಡಿಸಿ ಎಲ್ಲಾ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸರಕು ಸಾಗಾಟದ ವಾಹನಗಳ ಓಡಾಟಕ್ಕೂ ಪೊಲೀಸರು ಅವಕಾಶ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Thu, 8 August 24

ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್