AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾವು

ಮಹಿಳೆ ಜೊತೆ ಕಮಲಾಕರ ಭಟ್ ಗುರೂಜಿ ಅಕ್ರಮ ಸಂಬಂಧದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ಪತಿ ದೂರು ನೀಡಿದ ಕಾರಣಕ್ಕೆ ಮಹಿಳೆ, ಗುರೂಜಿ ಹಾಗೂ ಇತರರು ಮೂವರ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪೊಲೀಸರು ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾವು
ಆರೋಪಿಗಳು ಮತ್ತು ಮೃತ ವ್ಯಕ್ತಿImage Credit source: Tv9 Kannada
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Feb 03, 2026 | 3:13 PM

Share

ಕಾರವಾರ, ಫೆಬ್ರವರಿ 03: ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಈ ವೇಳೆ ಓರ್ವ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ

ಸುಚಿತ್ರಾ ಎಂಬ ಮಹಿಳೆ ಶಿವಮೊಗ್ಗ ಮೂಲದ ಕಮಲಾಕರ ಭಟ್ ಗುರೂಜಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು. ಕಮಲಾಕರ್​​ ಮೂಲತಃ ಸಿದ್ದಾಪುರ ಮೂಲದ ಹೆಮ್ಮನಬೈಲ್ ಗ್ರಾಮದವರು. ಸ್ವಾಮೀಜಿ ಜೊತೆ ತಾಯಿಯ ಅಕ್ರಮ ಸಂಬಂಧದ ವಿಚಾರ ಸುಚಿತ್ರಾ ಪುತ್ರಿಗೆ ಗೊತ್ತಾಗಿದ್ದು, ವಿಚಾರವನ್ನು ತಂದೆ ಮಹೇಶ್ ನಾಯ್ಕಗೆ ಆಕೆ ತಿಳಿಸಿದ್ದಳು. ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್​​ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​, ವಸಂತ್ ನಾಯ್ಕ ಮತ್ತು ಕುಮಾರ್​​ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನೂ ಓದಿ: 10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು; ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ

ಇನ್ನು ಘಟನೆ ಸಂಬಂಧ ಕೃತ್ಯವೆಸಗಿ ಪರಾರಿಯಾಗುತ್ತಿದ್ದ ಗುರೂಜಿ ಸೇರಿ 7 ಜನರನ್ನು ಪೊಲೀಸರು ವಶಕ್ಕೆ ವಡೆದಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದಲ್ಲಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಅಪರಿಚಿತರು ಹಾಗೂ ಎ4 ಕಮಲಾಕರ ಭಟ್​​ ಸ್ವಾಮೀಜಿ ಆಗಿದ್ದು, ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:08 pm, Tue, 3 February 26

Follow Us
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ