AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬರ್ ಮುಕಳೆಪ್ಪ ಮದುವೆ ಪ್ರಕರಣ: ವಿವಾಹ ನೋಂದಣಾಧಿಕಾರಿ ಕಚೇರಿಗೇ ಬೀಗ, ಸಿಬ್ಬಂದಿಯೂ ನಾಪತ್ತೆ!

ಯೂಟ್ಯೂಬರ್ ಮುಕಳೆಪ್ಪ ಹಿಂದೂ ಯುವತಿಯೊಂದಿಗೆ ಸುಳ್ಳು ದಾಖಲೆಗಳನ್ನು ಬಳಸಿ ಮದುವೆಯಾಗಿದ್ದಾರೆ ಎಂಬ ಆರೋಪ ಈಗ ಉತ್ತರ ಕನ್ನಡದ ಮುಂಡಗೋಡದಲ್ಲಿ ಸರ್ಕಾರಿ ಅಧಿಕಾರಿಗಳಿಗೂ ಕಂಟಕ ತಂದೊಡ್ಡಿದೆ. ಮುಂಡಗೋಡಿನ ನೋಂದಣಿ ಕಚೇರಿಗೆ ಬೀಗ ಜಡಿಯಲಾಗಿದ್ದು, ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಆದರೆ, ಮುಕಳೆಪ್ಪ ಮತ್ತು ಯುವತಿ ಲವ್ ಜಿಹಾದ್ ಆರೋಪಗಳನ್ನು ನಿರಾಕರಿಸಿದ್ದಾರೆ.

ಯೂಟ್ಯೂಬರ್ ಮುಕಳೆಪ್ಪ ಮದುವೆ ಪ್ರಕರಣ: ವಿವಾಹ ನೋಂದಣಾಧಿಕಾರಿ ಕಚೇರಿಗೇ ಬೀಗ, ಸಿಬ್ಬಂದಿಯೂ ನಾಪತ್ತೆ!
ಮುಂಡಗೋಡದ ನೊಂದಣಾಧಿಕಾರಿ ಕಚೇರಿಗೆ ಬೀಗ, ಬಲ ಚಿತ್ರದಲ್ಲಿ ಮುಕಳೆಪ್ಪ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Sep 25, 2025 | 2:39 PM

Share

ಕಾರವಾರ, ಸೆಪ್ಟೆಂಬರ್ 25: ಯೂಟ್ಯೂಬರ್ ಮುಕಳೆಪ್ಪ (Mukaleppa) ಸುಳ್ಳು ದಾಖಲೆ ಸೃಷ್ಟಸಿ ಹಿಂದೂ ಯುವತಿಯನ್ನು ಮದುವೆ ಆಗಿದ್ದಾರೆ ಎಂಬ ಆರೋಪ ಹಾಗೂ ಪ್ರಕರಣ ಇದೀಗ ಸರ್ಕಾರಿ ಅಧಿಕಾರಿಗಳಿಗೇ ಕುತ್ತು ತಂದಿದೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡದ (Mundagod) ವಿವಾಹ ನೊಂದಣಾಧಿಕಾರಿ ಕಚೇರಿಗೇ ಬೀಗ ಹಾಕುವಂತೆ ಆಗಿದೆ. ಅಷ್ಟೇ ಅಲ್ಲ, ನೋಂದಣಾಧಿಕಾರಿ ಕಚೇರಿ ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ. ಸುಳ್ಳು ದಾಖಲೆ ನೀಡಿ ಮದುವೆಯಾಗಿರುವುದು ಬಯಲಾಗಿದ್ದು, ಮದುವೆ ಮಾಡಿಕೊಂಡಿರುವ ಕಚೇರಿ ಸಿಬ್ಬಂದಿಯ ವಿರುದ್ಧವೂ ದೂರು ದಾಖಲಾದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ.

ಮುಕಳೆಪ್ಪ ಹಾಗೂ ಯುವತಿ ಮನೆಯ ಬಾಡಿಗೆ ನೊಂದಣಿ ದಾಖಲಾದ ದಿನವೇ, ಅಂದರೆ, ಜೂನ್ 3 ರಂದೇ ವಿವಾಹ ಆಗಿದ್ದಾರೆ. ನೊಂದಣಾಧಿಕಾರಿ ಹೇಮಾ ನೊಂದಣಿ ನಿಯಮದ ಪ್ರಕಾರ ಕ್ರಮ ಕೈಗೊಳ್ಳದೇ ವಿವಾಹ ನೊಂದಣಿ ಮಾಡಿಕೊಟ್ಟಿದ್ದರು. ಇನ್ನು ಸೆಪ್ಟಂಬರ್ 22 ರಂದು ಶ್ರೀರಾಮ ಸೇನೆ ಕಾರ್ಯಕರ್ತರ ಜೊತೆ ಬಂದ ಗಾಯಿತ್ರಿ ತಾಯಿ ಶಿವಕ್ಕ, ನೊಂದಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಹೇಮಾರವರನ್ನು ತರಾಟೆ ತೆಗೆದುಕೊಂಡಿದ್ದರು. ಇದಲ್ಲದೇ ಮುಂಡಗೋಡು ಠಾಣೆಯಲ್ಲಿ ವಿವಾಹ ನೊಂದಣಾಧಿಕಾರಿ ಹೇಮಾ ಸೇರಿ ಒಟ್ಟು ಏಳು ಜನರ ವಿರುದ್ಧ ಪ್ರಕರಣ ಸಹ ದಾಖಲಿಸಿದ್ದರು.

ನೋಂದಣಾಧಿಕಾರಿ ಕಚೇರಿಗೆ ಬೀಗ: ಸಾರ್​ವಜನಿಕರ ಪರದಾಟ

ಪ್ರಕರಣ ದಾಖಲಾದ ನಂತರ ಬುಧವಾರ ನೊಂದಣಾಧಿಕಾರಿ ಹಾಗೂ ಸಿಬ್ಬಂದಿ ಕಚೇರಿಗೆ ಆಗಮಿಸದೇ ಕಚೇರಿಗೆ ಬೀಗ ಹಾಕಿದ್ದಾರೆ. ಕಚೇರಿ ಸಮಯದಲ್ಲಿ ಹಲವು ಜನ ತಮ್ಮ ಕೆಲಸಕ್ಕೆ ಬಂದವರು ಬೀಗ ಹಾಕಿದ ಕಚೇರಿ ನೋಡಿ ಮರಳುವಂತಾದರೆ ,ಕಚೇರಿ ಸಮಯದಲ್ಲಿ ಸರ್ಕಾರಿ ಕಚೇರಿಯಲ್ಲಿ ಸಿಬ್ಬಂದಿಯೇ ಇಲ್ಲದೇ ಹೀಗೆ ಬೀಗ ಹಾಕಿರುವ ಕುರಿತು ಜನರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ನೊಂದಣಿ ಕಚೇರಿಯಲ್ಲಿ ಅಧಿಕಾರಿ ಸೇರಿ ಒಟ್ಟು ನಾಲ್ಕು ಜನ ಸಿಬ್ಬಂದಿ ಇದ್ದಾರೆ. ಒಂದುವೇಳೆ, ಬೇರೆ ಕೆಲಸಗಳಿದ್ದರೆ ಉಳಿದ ಸಿಬ್ಬಂದಿ ಆದರೂ ಇರಬೇಕು. ಆದರೇ ಇಡೀ ಕಚೇರಿಗೆ ಬೀಗ ಜಡಿದು ಎಲ್ಲಿಗೆ ಹೋದರು ಎಂಬ ಪ್ರಶ್ನೆ ಎದ್ದಿದೆ. ಜೊತೆಗೆ ಕಚೇರಿ ಬೀಗ ಹಾಕಿರುವುದರ ವಿರುದ್ಧ ಸ್ಥಳೀಯ ಜನರು ತಹಶಿಲ್ದಾರ್​ಗೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ, ನೊಂದಣಾಧಿಕಾರಿ ಹೇಮಾಗೆ ಆರೋಗ್ಯ ಸರಿ ಇಲ್ಲ ಎಂಬ ಸಬೂಬು ಹೇಳಲಾಗಿದೆ. ಆದರೆ ಉಳಿದ ಸಿಬ್ಬಂದಿ ಎಲ್ಲಿ ಹೋಗಿದ್ದಾರೆ ಎಂಬ ಪ್ರಶ್ನೆಗೆ ತಹಶಿಲ್ದಾರ್ ಕೂಡ ಮೌನ ವಹಿಸಿದ್ದಾರೆ.

ಇದೇ ಕಚೇರಿಗೆ ಇಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಹ ಬೇಟಿ ನೀಡಿ ಮುಕಳೆಪ್ಪ ವಿವಾಹ ಸಂಬಂಧ ದಾಖಲೆ ಪರಿಶೀಲನೆ ಮಾಡಲಿದ್ದು, ಪ್ರತಿಭಟನೆ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ವಿವಾಹ ನೊಂದಣಿ ಮಾಡಿದ ಅಧಿಕಾರಿ ಹೇಮಾ ರವರಿಗೆ ಮತ್ತಷ್ಟು ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ? ರಿಜಿಸ್ಟರ್ ಗೆ​ ಹೇಳಿದ ಸುಳ್ಳು ಏನು?

ಏತನ್ಮಧ್ಯೆ, ಯೂಟ್ಯೂಬರ್ ಮುಕಳೆಪ್ಪ ಹಾಗೂ ಗಾಯಿತ್ರಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ, ‘ಲವ್ ಜಿಹಾದ್ ಎಲ್ಲಾ ಸುಳ್ಳು, ನಾವು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದೇವೆ, ನಮ್ಮನ್ನು ಬದುಕಲು ಬಿಡಿ’ ಎಂದು ಮನವಿ ಮಾಡಿದ್ದಾರೆ. ಆದರೆ, ಇತ್ತ ಯುವತಿ ತಾಯಿ ಶಿವಕ್ಕ ಹಾಗೂ ಶ್ರೀರಾಮ ಸೇನೆಯವರು ಪ್ರಕರಣವನ್ನು ಸುಲಭದಲ್ಲಿ ಕೈಬಿಡುವಂತೆ ಕಾಣಿಸುತ್ತಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 am, Thu, 25 September 25

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ