AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ ಸೇತುವೆ ಕುಸಿತ: ಕಾಳಿ ನದಿಗೆ ಬಿದ್ದು ಬದುಕಿ ಬಂದ ರೋಚಕ ಅನುಭವ ವಿವರಿಸಿದ ಲಾರಿ ಚಾಲಕ ಬಾಲ ಮುರುಗನ್

ಕೋಡಿಭಾಗ್ ಸೇತುವೆಯಿಂದ ಲಾರಿ ಸಮೇತ ಕಾಳಿ ನದಿಗೆ ಬಿದ್ದು, ಪವಾಡಸದೃಶ ರೀತಿಯಲ್ಲಿ ಪಾರಾದ ತಮಿಳುನಾಡಿನ ಚಾಲಕ ಬಾಲ ಮುರುಗನ್ ರಾತ್ರಿ ಸಂಭವಿಸಿದ ಭಯಾನಕ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯಿಂದ ಶಾಕ್ ಆಗಿರುವುದಾಗಿಯೂ ಹೇಳಿದ್ದಾರೆ. ಬಾಲ ಮುರುಗನ್ ಹೇಳಿದ್ದೇನೆಂಬ ವಿವರ ಇಲ್ಲಿದೆ.

ಕಾರವಾರ ಸೇತುವೆ ಕುಸಿತ: ಕಾಳಿ ನದಿಗೆ ಬಿದ್ದು ಬದುಕಿ ಬಂದ ರೋಚಕ ಅನುಭವ ವಿವರಿಸಿದ ಲಾರಿ ಚಾಲಕ ಬಾಲ ಮುರುಗನ್
ಕೋಡಿಭಾಗ್ ಸೇತುವೆ ಕುಸಿದು ಕಾಳಿ ನದಿಗೆ ಬಿದ್ದಿರುವುದು
ಸೂರಜ್​, ಮಹಾವೀರ್​ ಉತ್ತರೆ
| Updated By: Ganapathi Sharma|

Updated on:Aug 07, 2024 | 10:41 AM

Share

ಕಾರವಾರ, ಆಗಸ್ಟ್ 7: ‘ಆ ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ. ನನ್ನನ್ನು ರಕ್ಷಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ತಮಿಳುನಾಡು ಮೂಲದ ಲಾರಿ ಚಾಲಕ ಬಾಲ ಮುರುಗನ್ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಕೋಡಿಭಾಗ್ ಸೇತುವೆ ಕುಸಿದು ಕಾಳಿ ನದಿಗೆ ಬಿದ್ದಾಗ ಅದರೊಂದಿಗೆ ನದಿಗೆ ಬಿದ್ದ ಲಾರಿಯ ಚಾಲಕ ಬಾಲ ಮುರುಗನ್ ಸದ್ಯ ಆಸ್ಪತ್ರೆಯಲ್ಲಿ ಆಘಾತದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಸೇತುವೆ ಕುಸಿತದಿಂದ ಇನ್ನಷ್ಟು ವಾಹನಗಳು ನದಿಗೆ ಬಿದ್ದಿವೆಯಾ? ಪ್ರಾಣ ಹಾನಿ ಸಂಭವಿಸಿದೆಯಾ ಎಂಬುದನ್ನು ತಿಳಿಯುವುದಕ್ಕಾಗಿ ಕಾರವಾರ ಪೊಲೀಸರು ಚಾಲಕನಿಂದ ಮಾಹಿತಿ ಪಡೆದರು. ಇದೇ ವೇಳೆ ಅವರು ಸೇತುವೆ ಕುಸಿತ, ಅದರಿಂದ ಪಾರಾದ ರೋಚಕ ಅನುಭವ ತಿಳಿಸಿದ್ದಾರೆ.

ಸೇತುವೆ ಕುಸಿದ ಸಂದರ್ಭದಲ್ಲಿ ಲಾರಿಯ ಹಿಂದೆ ಅಥವಾ ಮುಂದೆ ಬೇರೆ ವಾಹನ ಸಂಚರಿಸುತ್ತಿತ್ತೇ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಚಾಲಕ ಬಾಲ ಮುರುಗನ್ ಹೇಳಿದ್ದೇನು?

ಲಾರಿ ಚಾಲನೆ ಮಾಡುವ ಸಂದರ್ಭದಲ್ಲಿ ಯಾವುದೇ ವಾಹನಗಳು ಸೇತುವೆ ಮೇಲಿರಲಿಲ್ಲ. ನಾನೊಬ್ಬನೇ ಸೇತುವೆ ಮೇಲೆ ಲಾರಿ ಚಲಾಯಿಸುತ್ತಿದೆ. ಸಂಚಾರ ಮಾಡುವಾಗ ಅವಘಡ ಸಂಭವಿಸಿದೆ. ನಾನು ಈಗ ಪ್ರಾಣಾಪಾಯದಿಂದ ಪಾರಾಗಿದ್ದು ಅಚ್ಚರಿಯಾಗಿದೆ. ಜತೆಗೆ ಘಟನೆಯಿಂದ ಮನಸಿಗೆ ಆಘಾತ ಆಗಿದೆ. ರಕ್ಷಣೆ ಮಾಡಿದ ಎಲ್ಲರಿಗೂ ಕೃತಜ್ಞತೆಗಳು ಎಂದು ಚಾಲಕ ಬಾಲ ಮುರುಗನ್ ಹೇಳಿದ್ದಾರೆ.

ಇದನ್ನೂ ಓದಿ: ಕಾರವಾರ: ಕಾಳಿ ನದಿಗೆ ಬಿದ್ದ ಕೋಡಿಭಾಗ್ ಸೇತುವೆ, ಶೋಧಕಾರ್ಯ ಮುಂದುವರಿಕೆ

ಅವಘಡ ಸಂಭವಿಸಿದ್ದಕ್ಕೆ ಐಆರ್​​ಬಿ ವಿರುದ್ಧ ಕಾರವಾರ ಪೊಲೀಸರು ಇನ್ನೊಂದು ಪ್ರಕರಣ ದಾಖಲಿಸಿದ್ದಾರೆ. ಈಗಾಗಲೇ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಕಾರವಾರ ಬಳಿ ಮಧ್ಯ ರಾತ್ರಿ ಏಕಾಏಕಿ ಕುಸಿದ ಸೇತುವೆ, ನದಿಗೆ ಬಿದ್ದ ಲಾರಿ ಚಾಲಕನ ಜೀವ ಉಳಿಸಿದ ಖಾಕಿ

ಏತನ್ಮಧ್ಯೆ, ರಕ್ಷಣಾ ತಂಡದಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ ಯಾರೂ ನಾಪತ್ತೆಯಾಗಿರುವ ಬಗ್ಗೆ ಹಾಗೂ ಪ್ರಾಣಹಾನಿ ಆಗಿರುವುದು ಕಂಡು ಬಂದಿಲ್ಲ. ಜಿಲ್ಲಾಡಳಿತದ ಇದುವರೆಗಿನ ಮಾಹಿತಿ ಪ್ರಕಾರ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 am, Wed, 7 August 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!