AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ ಸೇತುವೆ ಕುಸಿತ: ಕಾಳಿ ನದಿಗೆ ಬಿದ್ದು ಬದುಕಿ ಬಂದ ರೋಚಕ ಅನುಭವ ವಿವರಿಸಿದ ಲಾರಿ ಚಾಲಕ ಬಾಲ ಮುರುಗನ್

ಕೋಡಿಭಾಗ್ ಸೇತುವೆಯಿಂದ ಲಾರಿ ಸಮೇತ ಕಾಳಿ ನದಿಗೆ ಬಿದ್ದು, ಪವಾಡಸದೃಶ ರೀತಿಯಲ್ಲಿ ಪಾರಾದ ತಮಿಳುನಾಡಿನ ಚಾಲಕ ಬಾಲ ಮುರುಗನ್ ರಾತ್ರಿ ಸಂಭವಿಸಿದ ಭಯಾನಕ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯಿಂದ ಶಾಕ್ ಆಗಿರುವುದಾಗಿಯೂ ಹೇಳಿದ್ದಾರೆ. ಬಾಲ ಮುರುಗನ್ ಹೇಳಿದ್ದೇನೆಂಬ ವಿವರ ಇಲ್ಲಿದೆ.

ಕಾರವಾರ ಸೇತುವೆ ಕುಸಿತ: ಕಾಳಿ ನದಿಗೆ ಬಿದ್ದು ಬದುಕಿ ಬಂದ ರೋಚಕ ಅನುಭವ ವಿವರಿಸಿದ ಲಾರಿ ಚಾಲಕ ಬಾಲ ಮುರುಗನ್
ಕೋಡಿಭಾಗ್ ಸೇತುವೆ ಕುಸಿದು ಕಾಳಿ ನದಿಗೆ ಬಿದ್ದಿರುವುದು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Aug 07, 2024 | 10:41 AM

Share

ಕಾರವಾರ, ಆಗಸ್ಟ್ 7: ‘ಆ ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ. ನನ್ನನ್ನು ರಕ್ಷಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ತಮಿಳುನಾಡು ಮೂಲದ ಲಾರಿ ಚಾಲಕ ಬಾಲ ಮುರುಗನ್ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಕೋಡಿಭಾಗ್ ಸೇತುವೆ ಕುಸಿದು ಕಾಳಿ ನದಿಗೆ ಬಿದ್ದಾಗ ಅದರೊಂದಿಗೆ ನದಿಗೆ ಬಿದ್ದ ಲಾರಿಯ ಚಾಲಕ ಬಾಲ ಮುರುಗನ್ ಸದ್ಯ ಆಸ್ಪತ್ರೆಯಲ್ಲಿ ಆಘಾತದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಸೇತುವೆ ಕುಸಿತದಿಂದ ಇನ್ನಷ್ಟು ವಾಹನಗಳು ನದಿಗೆ ಬಿದ್ದಿವೆಯಾ? ಪ್ರಾಣ ಹಾನಿ ಸಂಭವಿಸಿದೆಯಾ ಎಂಬುದನ್ನು ತಿಳಿಯುವುದಕ್ಕಾಗಿ ಕಾರವಾರ ಪೊಲೀಸರು ಚಾಲಕನಿಂದ ಮಾಹಿತಿ ಪಡೆದರು. ಇದೇ ವೇಳೆ ಅವರು ಸೇತುವೆ ಕುಸಿತ, ಅದರಿಂದ ಪಾರಾದ ರೋಚಕ ಅನುಭವ ತಿಳಿಸಿದ್ದಾರೆ.

ಸೇತುವೆ ಕುಸಿದ ಸಂದರ್ಭದಲ್ಲಿ ಲಾರಿಯ ಹಿಂದೆ ಅಥವಾ ಮುಂದೆ ಬೇರೆ ವಾಹನ ಸಂಚರಿಸುತ್ತಿತ್ತೇ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಚಾಲಕ ಬಾಲ ಮುರುಗನ್ ಹೇಳಿದ್ದೇನು?

ಲಾರಿ ಚಾಲನೆ ಮಾಡುವ ಸಂದರ್ಭದಲ್ಲಿ ಯಾವುದೇ ವಾಹನಗಳು ಸೇತುವೆ ಮೇಲಿರಲಿಲ್ಲ. ನಾನೊಬ್ಬನೇ ಸೇತುವೆ ಮೇಲೆ ಲಾರಿ ಚಲಾಯಿಸುತ್ತಿದೆ. ಸಂಚಾರ ಮಾಡುವಾಗ ಅವಘಡ ಸಂಭವಿಸಿದೆ. ನಾನು ಈಗ ಪ್ರಾಣಾಪಾಯದಿಂದ ಪಾರಾಗಿದ್ದು ಅಚ್ಚರಿಯಾಗಿದೆ. ಜತೆಗೆ ಘಟನೆಯಿಂದ ಮನಸಿಗೆ ಆಘಾತ ಆಗಿದೆ. ರಕ್ಷಣೆ ಮಾಡಿದ ಎಲ್ಲರಿಗೂ ಕೃತಜ್ಞತೆಗಳು ಎಂದು ಚಾಲಕ ಬಾಲ ಮುರುಗನ್ ಹೇಳಿದ್ದಾರೆ.

ಇದನ್ನೂ ಓದಿ: ಕಾರವಾರ: ಕಾಳಿ ನದಿಗೆ ಬಿದ್ದ ಕೋಡಿಭಾಗ್ ಸೇತುವೆ, ಶೋಧಕಾರ್ಯ ಮುಂದುವರಿಕೆ

ಅವಘಡ ಸಂಭವಿಸಿದ್ದಕ್ಕೆ ಐಆರ್​​ಬಿ ವಿರುದ್ಧ ಕಾರವಾರ ಪೊಲೀಸರು ಇನ್ನೊಂದು ಪ್ರಕರಣ ದಾಖಲಿಸಿದ್ದಾರೆ. ಈಗಾಗಲೇ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಕಾರವಾರ ಬಳಿ ಮಧ್ಯ ರಾತ್ರಿ ಏಕಾಏಕಿ ಕುಸಿದ ಸೇತುವೆ, ನದಿಗೆ ಬಿದ್ದ ಲಾರಿ ಚಾಲಕನ ಜೀವ ಉಳಿಸಿದ ಖಾಕಿ

ಏತನ್ಮಧ್ಯೆ, ರಕ್ಷಣಾ ತಂಡದಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ ಯಾರೂ ನಾಪತ್ತೆಯಾಗಿರುವ ಬಗ್ಗೆ ಹಾಗೂ ಪ್ರಾಣಹಾನಿ ಆಗಿರುವುದು ಕಂಡು ಬಂದಿಲ್ಲ. ಜಿಲ್ಲಾಡಳಿತದ ಇದುವರೆಗಿನ ಮಾಹಿತಿ ಪ್ರಕಾರ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 am, Wed, 7 August 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!