AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದಲ್ಲಿ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎನ್ನುವುದು ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನದ ಕನಸು. ಸರ್ಕಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವಂತೆ ಜನರು ನಿರಂತರ ಹೋರಾಟ ಮಾಡುತ್ತಿದ್ದರು. ಆದರೆ, ಇನ್ನೂ ಸ್ಪಂಧನೆ ನೀಡಿಲ್ಲ. ಇದೀಗ ಜಿಲ್ಲೆಯ ಪ್ರಸಿದ್ದ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದಲೇ ಜಿಲ್ಲೆಯ ಹೊನ್ನಾವರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಹೊರಟಿದ್ದು, ಈ ಕುರಿತು ಸ್ಟೋರಿ ಇಲ್ಲಿದೆ.

ಉತ್ತರ ಕನ್ನಡದಲ್ಲಿ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
ಉತ್ತರ ಕನ್ನಡದಲ್ಲಿ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: May 10, 2024 | 8:23 PM

Share

ಉತ್ತರ ಕನ್ನಡ, ಮೇ.10: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎನ್ನುವುದು ಉತ್ತರ ಕನ್ನಡ(Uttara Kannada) ಜಿಲ್ಲೆಯ ಜನರ ದೊಡ್ಡ ಕನಸು. ಜಿಲ್ಲೆಯಲ್ಲಿ ಹಲವಾರು ವರ್ಷದಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಹೋರಾಟ ಮಾಡುತ್ತಲೇ ಬರುತ್ತಿದ್ದಾರೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಹಲವು ಸಾವುಗಳಾಗುತ್ತಿದ್ದು ಸರ್ಕಾರ ಕಣ್ಣು ತೆರೆಯುವಂತೆ ಹೋರಾಟ ಮಾಡಲಾಗುತ್ತಲೇ ಇದೆ. ಇನ್ನು ಪ್ರತಿ ಚುನಾವಣೆಯಲ್ಲಿ ಇದೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(Super Speciality Hospital) ಎನ್ನುವುದು ಚುನಾವಣೆಯ ವಿಷಯ ವಸ್ತು ಸಹ. ಚುನಾವಣೆ ಮುಗಿದ ಮೇಲೆ ಯಾರು ಸ್ಪಂದಿಸುತ್ತಿಲ್ಲ. ಇದೀಗ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಬಂಗಾರಮಕ್ಕಿ ಮಹಾಸಂಸ್ಥಾನದ ಮಾರುತಿ ಗೂರೂಜಿ ಅವರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನ ಜಿಲ್ಲೆಯಲ್ಲಿ ಮಾಡಲು ಮುಂದಾಗಿದ್ದಾರೆ. ಜಿಲ್ಲೆಯ ಹೊನ್ನಾವರದ ಅಳ್ಳಂಕಿ ಗ್ರಾಮದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುತ್ತಿದ್ದು ಇಂದು ಸುಮಾರು 5 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲು ಮುಂದಾದ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಒಂದೇ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಲ್ಲ. ಜನರು ಏನಾದರೂ ಅಪಘಾತ, ಇನ್ನಿತರ ಗಂಭೀರ ಪರಿಸ್ಥಿತಿಯಲ್ಲಿ ನೆರೆಯ ಉಡುಪಿ, ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಗೋವಾದಲ್ಲಿನ ಆಸ್ಪತ್ರೆಗೆ ತೆರಳಬೇಕು. ಈ ವೇಳೆ ರಸ್ತೆ ಮಧ್ಯದಲ್ಲಿಯೇ ಹಲವರು ಪ್ರಾಣ ಬಿಟ್ಟಿದ್ದು, ಜನರ ಹೋರಾಟಕ್ಕೆ ಯಾರು ಸ್ಪಂಧಿಸಿರಲಿಲ್ಲ. ಸದ್ಯ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ಬೆಂಗಳೂರಿನ ಪ್ರಸಿದ್ದ ಸುದೀಕ್ಷ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್​ ವತಿಯಿಂದ ಆಸ್ಪತ್ರೆ ನಿರ್ಮಿಸಲು ಮುಂದಾಗಿದೆ. ಮೊದಲ ಹಂತದಲ್ಲಿ ಸುಮಾರು 150 ಬೆಡ್​ನ ಆಸ್ಪತ್ರೆ ನಿರ್ಮಿಸಿ, ನಂತರ ಹಂತ ಹಂತವಾಗಿ ಮೆಡಿಕಲ್ ಕಾಲೇಜು ನಿರ್ಮಿಸುವ ಮೂಲಕ 3 ಸಾವಿರ ಬೆಡ್ ಆಸ್ಪತ್ರೆ, ಏರ್ ಅಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸೇವೆ ಕೊಡಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿದ ಕರ್ನಾಟಕ ಸರ್ಕಾರ

ಸದ್ಯ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿದ್ದು, ಒಂದು ವರ್ಷದಲ್ಲಿ ಕಟ್ಟಡ ನಿರ್ಮಾಣ, ಎರಡು ವರ್ಷದಲ್ಲಿ ಆಸ್ಪತ್ರೆ ಸೇವೆ ಪ್ರಾರಂಭಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಇನ್ನು ಜಿಲ್ಲೆಯ ಜನರು ಬೇರೆ ಜಿಲ್ಲೆ,ರಾಜ್ಯಕ್ಕೆ ಆಸ್ಪತ್ರೆಗಾಗಿ ಅಲೆದಾಡುವ ಬದಲು ಜಿಲ್ಲೆಯಲ್ಲಿಯೇ ಎಲ್ಲಾ ಸೇವೆ ಸಿಗುವ ಮೂಲಕ ಜನರಿಗೆ ಸಹಾಯ ಮಾಡಬೇಕು ಎನ್ನುವುದು ಬಂಗಾರಮಕ್ಕಿ ಮಹಾಸಂಸ್ಥಾನದ ಚಿಂತನೆಯಾಗಿದ್ದು, ಸರ್ಕಾರ ಇನ್ನೂ ಮಾಡಲಾಗದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ನಿರ್ಮಾಣ ಮಾಡಲು ಮುಂದಾಗಿರುವುದು ನಿಜಕ್ಕೂ ಮೆಚ್ಚುವಂತದ್ದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್