AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ, ರಾಮನಗರ ಆಯ್ತು ಇದೀಗ ಉತ್ತರ ಕನ್ನಡದಲ್ಲಿ ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು

ಹಾಸನದಲ್ಲಿ ನಾಲ್ವರು ಮಕ್ಕಳು ಹಾಗೂ ರಾಮನಗರದಲ್ಲಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ(Bhatkal) ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಾಸನ, ರಾಮನಗರ ಆಯ್ತು ಇದೀಗ ಉತ್ತರ ಕನ್ನಡದಲ್ಲಿ ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು
ಭಟ್ಕಳದಲ್ಲಿ ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: May 17, 2024 | 7:57 PM

Share

ಉತ್ತರ ಕನ್ನಡ, ಮೇ.17: ಜಿಲ್ಲೆಯ ಭಟ್ಕಳ(Bhatkal) ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.  ತಾಲೂಕಿನ ಕಂಡೆಕೋಡ್ಲು ನಿವಾಸಿಗಳಾದ ಸೂರಜ್ ನಾಯ್ಕ(15) ಹಾಗೂ ಪಾರ್ವತಿ ಶಂಕರ್ ನಾಯ್ಕ(35) ಮೃತರು. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ಹೋದಾಗ ಈ ದುರಂತ ಸಂಭವಿಸಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಿಡಿಲು ಬಡಿದು ಬಾಲಕಿ ಸಾವು

ಬಾಗಲಕೋಟೆ: ಮುಧೋಳ ತಾಲೂಕಿನ ಜಾಡರ ಅರಳಿಕಟ್ಟಿ ಗ್ರಾಮದ ಬಳಿಯ ಜಮೀನೊಂದರಲ್ಲಿ ಸಿಡಿಲು ಬಡಿದು ಮಲ್ಲಾಪುರ ಪಿ.ಎಲ್.ಗ್ರಾಮದ ನಿವಾಸಿ 16 ವರ್ಷದ ಭಾಗ್ಯಶ್ರೀ ಪಡೆಪ್ಪನವರು ಎಂಬುವವರು ಮೃತರಾಗಿದ್ದಾರೆ. ಪೋಷಕರ ‌ಜೊತೆ ಹೊಲದಲ್ಲಿ‌ ಕೃಷಿ ಕೆಲಸ‌ ಮಾಡುವಾಗ ಸಿಡಿಲು‌ ಬಡಿದು ಕೊನೆಯುಸಿರೆಳೆದಿದ್ದಾರೆ. ಮೃತದೇಹವನ್ನು ಲೋಕಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಹಾಸನ ದುರ್ಘಟನೆ ಮಾಸುವ ಮುನ್ನವೇ ರಾಮನಗರದಲ್ಲೂ ಮೂವರು ಬಾಲಕರು ಜಲಸಮಾಧಿ

ಸಿಡಿಲು ಬಡಿದು ಜಾನುವಾರು ಸಾವು

ತುಮಕೂರು: ಸಿಡಿಲು ಬಡಿದು ಹಸುವೊಂದು ಸಾವನ್ನಪ್ಪಿದ್ದು, ನಾಲ್ಕು ಜಾನುವಾರುಗಳಿಗೆ ಗಾಯವಾದ ಘಟನೆ ಪಾವಗಡ ತಾಲೂಕಿನ ರಂಗಸಮುದ್ರದಲ್ಲಿ ನಡೆದಿದೆ. ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳು ಇದಾಗಿದ್ದು, ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಗೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮ ಗುಡಿಸಲಿಗೆ ಬೆಂಕಿ ತಗುಲಿ ಸುಟ್ಟುಭಸ್ಮವಾಗಿದೆ. ಈ ಘಟನೆ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾರು ಸ್ಕೂಟರ್ ನಡುವೆ ಅಪಘಾತ ಮಹಿಳೆ ಸಾವು

ಮೈಸೂರು: ನಗರದ ಕೆ.ಆರ್.ಎಸ್ ರಸ್ತೆಯಲ್ಲಿ ಕಾರು ಡಿಕ್ಕಿಯಾಗಿ ಸ್ಕೂಟರ್​​​​ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಹೆಬ್ಬಾಳು ಬಡಾವಣೆ ನಿವಾಸಿ ರಾಧಾ(34) ಕೊನೆಯುಸಿರು. ಸ್ಥಳಕ್ಕೆ ವಿ ವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ಹಾಗೂ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ