AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನ್ನಾವರದಲ್ಲಿ ಖಾಸಗಿ ಬಸ್ ಪಲ್ಟಿ; ಇಬ್ಬರು ಸಾವು, 49 ಜನರಿಗೆ ಗಾಯ

ಖಾಸಗಿ ಬಸ್​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಹೊನ್ನಾವರದ(Honnavar ) ಸುಳೆಮುರ್ಕಿ ತಿರುವಿನಲ್ಲಿ ನಡೆದಿದೆ. ತುಮಕೂರಿನ ಲೋಕೇಶ್ (26), ಚಿಕ್ಕಬಳ್ಳಾಪುರದ ರುದ್ರೇಶ್ (38) ಅಫಘಾತದಲ್ಲಿ ಸಾವಿಗೀಡಾದವರು. ಇನ್ನುಳಿದಂತೆ ಗೌರಿಬಿದನೂರಿನ ರಜನಿ (30) ಎಂಬುವವರು ಒಂದು ಕೈ ಕಳೆದುಕೊಂಡಿದ್ದಾರೆ.

ಹೊನ್ನಾವರದಲ್ಲಿ ಖಾಸಗಿ ಬಸ್ ಪಲ್ಟಿ; ಇಬ್ಬರು ಸಾವು, 49 ಜನರಿಗೆ ಗಾಯ
ಹೊನ್ನಾವರದಲ್ಲಿ ಖಾಸಗಿ ಬಸ್ ಪಲ್ಟಿ
ಸೂರಜ್​, ಮಹಾವೀರ್​ ಉತ್ತರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 03, 2024 | 7:20 PM

Share

ಉತ್ತರ ಕನ್ನಡ, ಮೇ.03: ಜಿಲ್ಲೆಯ ಹೊನ್ನಾವರದ(Honnavar ) ಸುಳೆಮುರ್ಕಿ ತಿರುವಿನಲ್ಲಿ ಖಾಸಗಿ ಬಸ್​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರಿನ ಲೋಕೇಶ್ (26), ಚಿಕ್ಕಬಳ್ಳಾಪುರದ ರುದ್ರೇಶ್ (38) ಅಫಘಾತದಲ್ಲಿ ಸಾವಿಗೀಡಾದವರು. ಇನ್ನುಳಿದಂತೆ ಗೌರಿಬಿದನೂರಿನ ರಜನಿ (30) ಎಂಬುವವರು ಒಂದು ಕೈ ಕಳೆದುಕೊಂಡಿದ್ದು, ಉಳಿದ 49 ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಇನ್ನು ಗೌರಿ ಬಿದನೂರಿನಿಂದ ಧರ್ಮಸ್ಥಳಕ್ಕೆ ಬಸ್ ಮೂಲಕ 53 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ಅತೀ ವೇಗದ ಕಾರಣ ಸುಳೆಮುರ್ಕಿ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಇನ್ನು ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹೊಸಕೋಟೆಯಲ್ಲಿ ಸಿಡಿಲು ಬಡಿದು ಮಹಿಳೆ ಸಾವು

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದ ಬಳಿ ಸಿಡಿಲು ಬಡಿದು ರತ್ನಮ್ಮ ಎಂಬ ಮಹಿಳೆ ಸೇರಿದಂತೆ 20ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸದಂತೆ ಜಿಲ್ಲಾಧಿಕಾರಿಯಾಗಿರುವ ಎನ್.ಶಿವಶಂಕರ್, ಇಂದು 4 ಲಕ್ಷ ಹಾಗೂ ಮುಂದೆ 2 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದಾರೆ. ವಿಪತ್ತು ನಿರ್ವಹಣೆ ಕಾಯ್ದೆಯಡಿ ಪರಿಹಾರ ಘೋಷಿಸಿರುವ ಜಿಲ್ಲಾಡಳಿತ, ಮೃತ ಜಾನುವಾರುಗಳಿಗೂ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Fri, 3 May 24

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ