AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನ್ನಾವರದಲ್ಲಿ ಖಾಸಗಿ ಬಸ್ ಪಲ್ಟಿ; ಇಬ್ಬರು ಸಾವು, 49 ಜನರಿಗೆ ಗಾಯ

ಖಾಸಗಿ ಬಸ್​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಹೊನ್ನಾವರದ(Honnavar ) ಸುಳೆಮುರ್ಕಿ ತಿರುವಿನಲ್ಲಿ ನಡೆದಿದೆ. ತುಮಕೂರಿನ ಲೋಕೇಶ್ (26), ಚಿಕ್ಕಬಳ್ಳಾಪುರದ ರುದ್ರೇಶ್ (38) ಅಫಘಾತದಲ್ಲಿ ಸಾವಿಗೀಡಾದವರು. ಇನ್ನುಳಿದಂತೆ ಗೌರಿಬಿದನೂರಿನ ರಜನಿ (30) ಎಂಬುವವರು ಒಂದು ಕೈ ಕಳೆದುಕೊಂಡಿದ್ದಾರೆ.

ಹೊನ್ನಾವರದಲ್ಲಿ ಖಾಸಗಿ ಬಸ್ ಪಲ್ಟಿ; ಇಬ್ಬರು ಸಾವು, 49 ಜನರಿಗೆ ಗಾಯ
ಹೊನ್ನಾವರದಲ್ಲಿ ಖಾಸಗಿ ಬಸ್ ಪಲ್ಟಿ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 03, 2024 | 7:20 PM

Share

ಉತ್ತರ ಕನ್ನಡ, ಮೇ.03: ಜಿಲ್ಲೆಯ ಹೊನ್ನಾವರದ(Honnavar ) ಸುಳೆಮುರ್ಕಿ ತಿರುವಿನಲ್ಲಿ ಖಾಸಗಿ ಬಸ್​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರಿನ ಲೋಕೇಶ್ (26), ಚಿಕ್ಕಬಳ್ಳಾಪುರದ ರುದ್ರೇಶ್ (38) ಅಫಘಾತದಲ್ಲಿ ಸಾವಿಗೀಡಾದವರು. ಇನ್ನುಳಿದಂತೆ ಗೌರಿಬಿದನೂರಿನ ರಜನಿ (30) ಎಂಬುವವರು ಒಂದು ಕೈ ಕಳೆದುಕೊಂಡಿದ್ದು, ಉಳಿದ 49 ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಇನ್ನು ಗೌರಿ ಬಿದನೂರಿನಿಂದ ಧರ್ಮಸ್ಥಳಕ್ಕೆ ಬಸ್ ಮೂಲಕ 53 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ಅತೀ ವೇಗದ ಕಾರಣ ಸುಳೆಮುರ್ಕಿ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಇನ್ನು ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬ್ರೇಕ್ ಫೇಲ್​ ಆಗಿ ರಾಜಹಂಸ ಬಸ್ ಪಲ್ಟಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹೊಸಕೋಟೆಯಲ್ಲಿ ಸಿಡಿಲು ಬಡಿದು ಮಹಿಳೆ ಸಾವು

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದ ಬಳಿ ಸಿಡಿಲು ಬಡಿದು ರತ್ನಮ್ಮ ಎಂಬ ಮಹಿಳೆ ಸೇರಿದಂತೆ 20ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸದಂತೆ ಜಿಲ್ಲಾಧಿಕಾರಿಯಾಗಿರುವ ಎನ್.ಶಿವಶಂಕರ್, ಇಂದು 4 ಲಕ್ಷ ಹಾಗೂ ಮುಂದೆ 2 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದಾರೆ. ವಿಪತ್ತು ನಿರ್ವಹಣೆ ಕಾಯ್ದೆಯಡಿ ಪರಿಹಾರ ಘೋಷಿಸಿರುವ ಜಿಲ್ಲಾಡಳಿತ, ಮೃತ ಜಾನುವಾರುಗಳಿಗೂ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Fri, 3 May 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ