AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದೊಂದು ವಾರದಿಂದ ಹಳಿಯಾಳದಲ್ಲಿ ಸರಣಿ ಕಳ್ಳತನ, ಖದೀಮರನ್ನು ಹಿಡಿಲು ತಂಡ ರಚನೆ

ಕಳೆದ ಫೆ.13 ರಂದು ಬುರ್ಖಾ ಧರಿಸಿಕೊಂಡು ಬಂದ‌ ಮಹಿಳೆಯರ ಗ್ಯಾಂಗ್‌ ಚಿನ್ನವನ್ನ ಕಳ್ಳತನ ಮಾಡಿದ ಘಟನೆ ಹಳಿಯಾಳ (Haliyal)ದ ಶ್ರೀ ಪೇಟೆ ಬಸವೇಶ್ವರ ಅಂಗಡಿ ಸಂಕೀರ್ಣದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಹಳಿಯಾಳ(Haliyala) ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸರಣಿ ಕಳ್ಳತನ ನಡೆಯುತ್ತಿದ್ದು, ವ್ಯಾಪಾರಸ್ಥರು ಆತಂಕದಲ್ಲಿದ್ದಾರೆ.

ಕಳೆದೊಂದು ವಾರದಿಂದ ಹಳಿಯಾಳದಲ್ಲಿ ಸರಣಿ ಕಳ್ಳತನ, ಖದೀಮರನ್ನು ಹಿಡಿಲು ತಂಡ ರಚನೆ
ಹಳಿಯಾಳದಲ್ಲಿ ಕಳ್ಳತನ ಮಾಡುತ್ತಿರುವ ಖದೀಮರು
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 14, 2024 | 10:14 PM

Share

ಉತ್ತರ ಕನ್ನಡ, ಮೇ.14: ಜಿಲ್ಲೆಯ ಹಳಿಯಾಳ(Haliyala) ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸರಣಿ ಕಳ್ಳತನ ನಡೆಯುತ್ತಿದ್ದು, ವ್ಯಾಪಾರಸ್ಥರು ಆತಂಕದಲ್ಲಿದ್ದಾರೆ. ಪಟ್ಟಣದ ಮುರ್ಕವಾಡ, ಮಾರುಕಟ್ಟೆ ರಸ್ತೆ, ಫಿಶ್ ಮಾರ್ಕೆಟ್ , ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಕಳೆದ ಒಂದು ವಾರದಿಂದ 5 ಅಂಗಡಿ ಮತ್ತು 2 ಮನೆ ಕಳ್ಳತನವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಈ ಖತರ್ನಾಕ್ ಖದೀಮರು ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಳ್ಳತನ ನಡೆಸುತ್ತಿದ್ದಾರೆ.

ಎಲ್ಲೆಲ್ಲಿ ಕಳ್ಳತನ

ಬಸ್ ನಿಲ್ದಾಣದ ರಸ್ತೆಯಲ್ಲಿರುವ ಶಾರದಾ ಮೊಬೈಲ್ ಅಂಗಡಿಯ ಶಟರ್ ಮುರಿದು ಒಳಗೆ ನುಗ್ಗಿದ್ದ ಕಳ್ಳರು, ಅಂಗಡಿಯ ಸಿಸಿ ಕ್ಯಾಮೆರಾದ ಡಿವಿಆರ್ ಕದ್ದು ಅಂಗಡಿಯನ್ನು ದೋಚಲು ವಿಫಲ ಯತ್ನ ನಡೆಸಿದ್ದಾರೆ.

ಹಳಿಯಾಳ ಮುಖ್ಯ ರಸ್ತೆಯ ಮಾರ್ಕೆಟ್‌‌ನಲ್ಲಿರೋ ಮೇಘರಾಜ ಶೆಟ್ಟಿ ಮಾಲಿಕತ್ವದ ಅರಿಹಂತ ಎಲೆಕ್ಟ್ರಾನಿಕ್ಸ್ ಅಂಗಡಿಯ ಬಾಗಿಲನ್ನು ಮುರಿದಿದ್ದು, ಅಂಗಡಿಯಲ್ಲಿದ್ದ 15 ಸಾವಿರ ರೂ.ಗೂ ಅಧಿಕ ನಗದು ದೋಚಿ ಪರಾರಿಯಾಗಿದ್ದಾರೆ.

ಫಿಶ್ ಸರ್ಕಲ್‌ನ ಚರ್ಚ್ ಅಂಗಡಿ ಸಂಕೀರ್ಣದಲ್ಲಿರುವ ಸಾವೇರ ಕ್ರಾಸ್ಟಾ ಅವರ ಮಾಲಿಕತ್ವದ ಅಂಗಡಿಯಲ್ಲೂ ಕಳ್ಳತನ ನಡೆದಿದ್ದು, ಮೌಂಟ್ ಮೇರಿ ಬೇಕರಿಯ ಬಾಗಿಲನ್ನು ಚಾಣಾಕ್ಷತನದಿಂದ ಮುರಿದು ಒಳ ನುಗ್ಗಿ, ಅಂಗಡಿಯಲ್ಲಿದ್ದ ಒಂದು ಸಾವಿರ‌ ರೂ.ಗೂ ಅಧಿಕ ನಗದು ಎಗರಿಸಿದ್ದಾರೆ.

ಇದನ್ನೂ ಓದಿ:ಉಡುಪಿ: ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರಿಂದ ಧರ್ಮದೇಟು

ಹಳಿಯಾಳ ಮಾರ್ಕೆಟ್‌ನಲ್ಲಿರುವ ಲಕ್ಷ್ಮೀಕಾಂತ ಪೂಜಾರಿ ಎಂಬವರ ಶ್ರೀ ಲಕ್ಷ್ಮೀ ಪೋಟೋ ಸ್ಟುಡಿಯೋದಲ್ಲೂ ಬಾಗಿಲಿನ ಬೀಗ ಮುರಿದು ಅಂಗಡಿಯಲ್ಲಿದ್ದ 12 ಸಾವಿರ ರೂ. ಹಾಗೂ 30 ಸಾವಿರ ರೂ. ರೂ ಮೌಲ್ಯದ ಡಿಎಸ್‌ಎಲ್‌ಆರ್ ಕ್ಯಾಮೆರಾವನ್ನು ಕದ್ದಿದ್ದು, ನಂತರ ಅದೇ ಸ್ಟುಡಿಯೋಗೆ‌ ಮತ್ತೆ ಆಗಮಿಸಿದ ಕಳ್ಳರು, ಪುನಃ ಕಳ್ಳತನಕ್ಕೆ ಯತ್ನಿಸಿ ವಿಫಲರಾಗಿದ್ದಾರೆ.

ಜೊತೆಗೆ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರೋ ಶ್ರೀ ವೈನ್ಸ್ ಅಂಗಡಿಯ ಶಟರ್ಸ ಮುರಿದು 4 ಸಾವಿರ ರೂ. ದೋಚಿ ಪರಾರಿಯಾಗಿದ್ದಾರೆ.

ಇನ್ನು ಮುರ್ಕವಾಡ ಗ್ರಾಮದಲ್ಲಿ ಶಂಭಾಜೀ ಗುತ್ತೇನ್ನವರ ಮಾಲಿಕತ್ವದ ಮನೆಗೆ ನುಗ್ಗಿಯೂ‌ ಕಳ್ಳತನ ಮಾಡಿದ ಈ ಖದೀಮರು, ಒಂದು ಚಿನ್ನದ ಮಂಗಲಸೂತ್ರ, ಮೂರು ಉಂಗುರ, ಇನ್ನಿತರ ಚಿನ್ನದ ಆಭರಣಗಳು ಸೇರಿದಂತೆ ಬೆಳ್ಳಿಯ ಕೆಲವು ವಸ್ತುಗಳನ್ನು ಎಗರಿಸಿದ್ದು, ಬಳಿಕ ಹನುಮಂತ ಶಿಂಧೆ ಎಂಬವವರ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿ ವಿಫಲರಾಗಿದ್ದಾರೆ.

ಇದರಿಂದ ಇಡೀ ಹಳಿಯಾಳ ಪಟ್ಟಣವೇ ಆತಂಕದಲ್ಲಿದ್ದು, ಯಾವಾಗ ಖದೀಮರು ನಮ್ಮ ಅಂಗಡಿ, ಮನೆಗಳನ್ನು ಕಳ್ಳತನ ಮಾಡುತ್ತಾರೋ ಎಂಬ ಭಯದಲ್ಲಿಯೇ ದಿನಕಳೆಯುವಂತೆ ಮಾಡಿದೆ. ಈ ಹಿನ್ನಲೆ ಸದ್ಯ ಕಳ್ಳರನ್ನು ಹಿಡಿಯಲು ಹಳಿಯಾಳ ಪೊಲೀಸರು ತಂಡವೊಂದನ್ನು ರಚನೆ ಮಾಡಿದ್ದು, ಖದೀಮರ ಹುಡುಕಾಟದಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ