AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಮೀನು ಸಾಕಾಣಿಕೆಗಾಗಿ ಉಪ್ಪು ನೀರು ಸಂಗ್ರಹ; ಸುತ್ತಲಿನ ಬಾವಿಗಳಲ್ಲಿ ಮಾಯವಾದ ಸಿಹಿ ನೀರು‌‌

ಜಮೀನು ಮಾಲೀಕನೋರ್ವ ಮೀನು ಸಾಕಾಣಿಕೆಗಾಗಿ 111 ಎಕರೆ ಜಾಗದಲ್ಲಿ ಉಪ್ಪು ನೀರನ್ನು ಸಂಗ್ರಹ ಮಾಡಿದ್ದನು. ಇದರ ಪರಿಣಾಮವಾಗಿ ಇದೀಗ ಗ್ರಾಮದ ಸುತ್ತಮುತ್ತಲಿನ ಬಾವಿಗಳಲ್ಲಿನ ನೀರು ಸಂಪೂರ್ಣ ಹಾಳಾಗಿದೆ.

ಕಾರವಾರ: ಮೀನು ಸಾಕಾಣಿಕೆಗಾಗಿ ಉಪ್ಪು ನೀರು ಸಂಗ್ರಹ; ಸುತ್ತಲಿನ ಬಾವಿಗಳಲ್ಲಿ ಮಾಯವಾದ ಸಿಹಿ ನೀರು‌‌
ಕಾರವಾರದಲ್ಲಿ ಕಲುಷಿತಗೊಂಡ ಬಾವಿ ನೀರು, ಕುಡಿಯುವ ನೀರಿಗಾಗಿ ಹಾಹಾಕಾರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 24, 2023 | 2:14 PM

Share

ಉತ್ತರ ಕನ್ನಡ: ಜಿಲ್ಲೆಯ ಕಾರವಾರ ತಾಲೂಕಿನ ಕಣಸಗಿರಿಯಲ್ಲಿ ಜಮೀನು ಮಾಲೀಕನೋರ್ವ ಮೀನು ಸಾಕಾಣಿಕೆಗಾಗಿ 111 ಎಕರೆ ಜಾಗದಲ್ಲಿ ಉಪ್ಪು ನೀರನ್ನು ಸಂಗ್ರಹ ಮಾಡಿದ್ದನು. ಅದರ ಪರಿಣಾಮವಾಗಿ ಇದೀಗ ಅಂತರ್ಜಲ ಮಟ್ಟ ಹಾಳಾಗಿ ಬಾವಿಗಳಲ್ಲಿನ ನೀರು ಸಂಪೂರ್ಣ ಸವಳು ಆಗಿದೆ. ಕುಡಿಯಲು ಯೋಗ್ಯ ನೀರಿಲ್ಲದೆ ಇದೀಗ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಗ್ರಾಮದ ಮಹಿಳೆಯರು 3 ಕಿ ಮೀ  ಕಾಲ್ನಡಿಗೆಯಲ್ಲಿ ಬಿಂದಿಗೆ ಹೊತ್ತು ನೀರು ತರುವಂತಾಗಿದೆ.

ಜಮೀನಿನಲ್ಲಿ ಐದರಿಂದ ಆರು ಅಡಿ ಸಂಗ್ರಹವಾದ ಉಪ್ಪು ನೀರಿನಲ್ಲಿ ಪಾಚಿಬೆಳೆದು ದುರ್ವಾಸನೆ ಶುರುವಾಗಿದೆ. ಇನ್ನು 150 ಕ್ಕೂ ಹೆಚ್ಚು ಮನೆಗಳಿರುವ ಗ್ರಾಮದಲ್ಲಿ 1500 ಜನಸಂಖ್ಯೆಯಿದೆ.  25 ಕ್ಕೂ ಹೆಚ್ಚು ಸಿಹಿ ನೀರಿನ ಬಾವಿಗಳಿದ್ದು, ಉಪ್ಪು ನೀರಿನ ಕಂಟಕ ಎದುರಾಗಿದೆ. ಇನ್ನು ಇಲ್ಲಿನ ಜನ 10 ವರ್ಷಗಳಿಂದ ನಿರಂತರವಾಗಿ ಈ ಸಮಸ್ಯೆ ಅನುಭವಿಸುತ್ತಿದ್ದು, ಇತ್ತೀಚಿನ 2 ವರ್ಷಗಳಲ್ಲಿ ಮತ್ತಷ್ಟು ಈ ಸಮಸ್ಯೆ ಉಲ್ಬಣಗೊಂಡಿದೆ.

ಉಪ್ಪು ನೀರು ತಡೆಗಾಗಿ ಸರ್ಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕಾರ್ಲ್ಯಾಂಡ್ ನಿರ್ಮಾಣ ಮಾಡುತ್ತಿದ್ದರು. ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಜಮೀನು ಮಾಲೀಕ ರಾತ್ರಿ ವೇಳೆ ಕಾರ್ಲ್ಯಾಂಡ್​ಗೆ ಹಾಕಿದ ಗೇಟ್ ಓಪನ್ ಮಾಡಿ ಉಪ್ಪು ನೀರು ಬಿಡುತ್ತಿದ್ದಾನೆ ಎಂಬ ಆರೋಪಗಳು ಕೇಳಿಬಂದಿವೆ. ಕೇವಲ ಒಬ್ಬ ಜಮೀನು ಮಾಲೀಕನ ಲಾಭಕ್ಕಾಗಿ ಗ್ರಾಮದ ಎಲ್ಲ ಜನರು ಸಂಕಷ್ಟ ಪಡುತ್ತಿದ್ದಾರೆ.

ಇದನ್ನೂ ಓದಿ:ಕಾರವಾರದಲ್ಲಿ ಒಂದೇ ಕಣ್ಣಿನ ಅಪರೂಪದ ಹಾವು ಪತ್ತೆ, ಹಾವು ಒಕ್ಕಣ್ಣು ಆಗಲು ಕಾರಣವೇನು ಗೊತ್ತಾ?

ಗ್ರಾಮಸ್ಥರು ಇಷ್ಟೆಲ್ಲಾ ಸಮಸ್ಯೆ ಅನುಭವಿಸುತ್ತಿದ್ದರು ಅಧಿಕಾರಿಗಳು ಮಾತ್ರ ಸಂಬಂಧವಿಲ್ಲದ ಹಾಗೇ ಇದ್ದಾರೆ. ಗ್ರಾಮಸ್ಥರು ಕೂಡಲೇ ಈ ಸಮಸ್ಯೆ ಬಗೆಹರಿಸದಿದ್ದರೆ ಮತ ಬಹಿಷ್ಕಾರ, ಊರು ತೊರೆಯುವ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳನ್ನ ಕೇಳಿದ್ರೆ,  ಸಮಸ್ಯೆ ಈಗ ನನ್ನ ಗಮನಕ್ಕೆ ಬಂದಿದೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೆನೆ ಎಂದು ಭರವಸೆ ನೀಡಿದ್ದಾರೆ.

ವರದಿ: ವಿನಾಯಕ ಬಡಿಗೇರ ಟಿವಿ9 ಕಾರವಾರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ