AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ಮಹಿಳೆ ಕೇರಳದಲ್ಲಿ ಪತ್ತೆ: ಆ ಒಂದೇ ಒಂದು ಸುಳಿವಿನಿಂದ ಪತ್ತೆ ಹಚ್ಚಿದ ಪೊಲೀಸರು​

ಫೆ. 7 ರಂದು ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ದೇಶದ ಪ್ರವಾಸಿ ಮಹಿಳೆ ಎಮಿ ಯಮಾಝಕಿ (43) ಕೇರಳ ರಾಜಧಾನಿ ತಿರುವನಂತಪುರದಲ್ಲಿ ಶುಕ್ರವಾರ ಪತ್ತೆ ಆಗಿದ್ದಾರೆ. ಗೋಕರ್ಣದ ಕಾಟೇಜ್​ನಲ್ಲಿ ತಂಗಿದ್ದಾಗ ದಂಪತಿ ನಡುವೆ ಮನಸ್ತಾಪವಾಗಿತ್ತು. ಪತಿ ಮೇಲಿನ ಕೋಪದಿಂದ ರೈಲು ಹತ್ತಿ ಕೇರಳಕ್ಕೆ ತೆರಳಿದ್ದಾಗಿ ಮಹಿಳೆ ಮಾಹಿತಿ ನೀಡಿದ್ದಾರೆ. ಆನ್​ಲೈನ್ ಸಂದೇಶ ಆಧರಿಸಿ ಜಪಾನ್ ಮಹಿಳೆಯನ್ನು ಸದ್ಯ ಗೋಕರ್ಣ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ಮಹಿಳೆ ಕೇರಳದಲ್ಲಿ ಪತ್ತೆ: ಆ ಒಂದೇ ಒಂದು ಸುಳಿವಿನಿಂದ ಪತ್ತೆ ಹಚ್ಚಿದ ಪೊಲೀಸರು​
ಕೇರಳದಲ್ಲಿ ಪತ್ತೆಯಾದ ಜಪಾನ್ ಮಹಿಳೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Feb 09, 2024 | 9:59 PM

Share

ಕಾರವಾರ, ಫೆಬ್ರವರಿ 9: ಗೋಕರ್ಣದಿಂದ ನಾಪತ್ತೆ (missing) ಯಾಗಿದ್ದ ಜಪಾನ್ (Japan) ದೇಶದ ಪ್ರವಾಸಿ ಮಹಿಳೆ ಎಮಿ ಯಮಾಝಕಿ (43) ಕೇರಳ ರಾಜಧಾನಿ ತಿರುವನಂತಪುರದಲ್ಲಿ ಶುಕ್ರವಾರ ಪತ್ತೆ ಆಗಿದ್ದಾರೆ. ವಿಶೇಷ ತಂಡ ರಚಿಸಿದ್ದ ಪಿಎಸ್​ಐ ಖಾದರ್ ಬಾಷಾ, ಸುಧಾ ಅಘನಾಶಿನಿ ನೇತೃತ್ವದಲ್ಲಿ ಪತ್ತೆ ಮಾಡಲಾಗಿದೆ. ಫೆ.4ರಂದು ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣದ ಬಂಗ್ಲೆಗುಡ್ಡದ ನೇಚರ್ ಕಾಟೇಜ್​ನಲ್ಲಿ ಪತಿ ಜತೆ ತಂಗಿದ್ದರು. ಆದರೆ ಪತಿ ಮಲಗಿದ್ದ ವೇಳೆ ಅಂದರೆ ಫೆ.5ರ ಬೆಳಗ್ಗೆ 10.15ರ ಸುಮಾರಿಗೆ ಕಾಟೇಜ್​ನಿಂದ ಹೊರಬಂದಿದ್ದ ಎಮಿ ಯಮಾಝಕಿ ಬಳಿಕ ನಾಪತ್ತೆಯಾಗಿದ್ದರು. ಎಮಿ ಪತಿ ದೈ ಯಮಾಝಕಿ ಗೋಕರ್ಣ ಠಾಣೆಗೆ ದೂರು ನೀಡಿದ್ದರು. ನಾಪತ್ತೆಯಾದ ನಂತರ ಆನ್​ಲೈನ್​ನಲ್ಲಿ ಎಮಿ ಯಮಾಝಕಿ ಸಂಪರ್ಕದಲ್ಲಿದ್ದರು. ಅದನ್ನು ಆಧರಿಸಿ ತಂಡದೊಂದಿಗೆ ಕೇರಳಕ್ಕೆ ತೆರಳಿದ್ದ ಗೋಕರ್ಣ ಪೊಲೀಸರು ಮಹಿಳೆಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಹಿಂದೆ ಪತಿ ಜೊತೆ ಕೇರಳಕ್ಕೆ ಭೇಟಿ ನಂತರ ಗೋಕರ್ಣಕ್ಕೆ ಬಂದಿದ್ದರು. ಗೋಕರ್ಣದ ಕಾಟೇಜ್​ನಲ್ಲಿ ತಂಗಿದ್ದಾಗ ದಂಪತಿ ನಡುವೆ ಮನಸ್ತಾಪವಾಗಿತ್ತು. ಪತಿ ಮೇಲಿನ ಕೋಪದಿಂದ ರೈಲು ಹತ್ತಿ ಕೇರಳಕ್ಕೆ ತೆರಳಿದ್ದಾಗಿ ಮಹಿಳೆ ಮಾಹಿತಿ ನೀಡಿದ್ದಾರೆ. ಮಹಿಳೆ ಪತಿಗೆ ಕಳುಹಿಸಿದ್ದ ಆನ್​ಲೈನ್ ಸಂದೇಶ ಆಧರಿಸಿ ಕಾರ್ಯಾಚರಣೆ ಮಾಡಿ, ಅದರಲ್ಲಿಯೂ ವಿದೇಶಿ ಪ್ರವಾಸಿಗರಾಗಿದ್ದರಿಂದ ಪ್ರಕರಣ ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಲಾಗುತ್ತಿದೆ.

ಹಳ್ಳದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ-ಮಗ ಮುಳುಗಿ ಸಾವು

ಉತ್ತರ ಕನ್ನಡ: ಹಳ್ಳದಲ್ಲಿ ಮುಳುಗಿ ತಂದೆ-ಮಗ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಗ್ರಾಮದಲ್ಲಿ ನಡೆದಿದೆ. ಹಳ್ಳಿಗದ್ದೆ ಗ್ರಾಮದ ಖಲಂದರ್ ಫಕ್ರುಸಾಬ್, ಪುತ್ರ ತನ್ವೀರ್ ಮೃತರು. ನಿನ್ನೆ ಬೇಡ್ತಿ ಹಳ್ಳದಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಘಟನೆ ಸಂಭವಿಸಿದೆ.

ಇದನ್ನೂ ಓದಿ: ಉತ್ತರ ಕನ್ನಡ: ಬಾಚಣಕಿಯಲ್ಲಿ ಅನುಮಾನಸ್ಪದ ವಸ್ತು ಸ್ಫೋಟ, ಕುರಿಗಾಹಿಗೆ ಗಂಭೀರ ಗಾಯ

ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರಿಗೆ ಅನುಮಾನ ಬಂದಿದ್ದು, ಇಂದು ಕುಟುಂಬಸ್ಥರ ಹುಡುಕಾಟ ವೇಳೆ ಹಳ್ಳದಲ್ಲಿ ಮೃತದೇಹಗಳು ಪತ್ತೆ ಆಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಯಲ್ಲಾಪುರ ಠಾಣೆಯ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

3 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕದ್ದ ಕಳ್ಳರು

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್​ ತಾ.ಕಾಚನಾಯಕನಹಳ್ಳಿ ಸರಗಳ್ಳತನ ಮುಂದುವರೆದಿದ್ದು, 3 ಲಕ್ಷ ರೂ. ಮೌಲ್ಯದ 50 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ. ಪೆನ್​ ಖರೀದಿಸುವ ನೆಪದಲ್ಲಿ ಅಂಗಡಿಗೆ ತಡರಾತ್ರಿ ಬೈಕ್​​ನಲ್ಲಿ ಬಂದ ಇಬ್ಬರು ಕಳ್ಳರು ಮಾನಸ ಎಂಬುವರ ಮಾಂಗಲ್ಯ ಸರ ಕದ್ದು ಪರಾರಿ ಆಗಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ: ಪಾರ್ಶ್ವವಾಯು ಪೀಡಿತರಿಗೆ ಚಿಕಿತ್ಸೆ ನೀಡುತ್ತೇವೆಂದು ಹಣ ಪಡೆದು ವಂಚಿಸಿದ ಗ್ಯಾಂಗ್​

ಗುರುತು ಸಿಗದಿರಲು ಹೆಲ್ಮೆಟ್,​ ಮಾಸ್ಕ್​​ ಧರಿಸಿದ್ದರು. ಸರ ಕದ್ದೊಯ್ಯುವ ದೃಶ್ಯ ಸೆರೆ ಆಗಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ