Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಆಗುತ್ತಿದ್ದಂತೆಯೇ ಅಬಕಾರಿ ಡಿಸಿ ರೂಪಾ ನಾಪತ್ತೆ

ಇಂದು(ಮಾ.27) ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸುಖನಿದ್ರೆಯಲ್ಲಿದ್ದ ಅಧಿಕಾರಿಗಳಿಗೆ ಶಾಕ್​ ನೀಡಿದ್ದರು. ಅದರಂತೆ ಕಾರವಾರ ಅಬಕಾರಿ ಡಿಸಿ ಕಚೇರಿ ಹಾಗೂ ಮನೆ ಮೇಲೆ ಲೋಕಾಯುಕ್ತ(Lokayukta) ದಾಳಿ ಆಗುತ್ತಿದ್ದಂತೆ ಅಬಕಾರಿ ಡಿಸಿ ಎಮ್​​.ರೂಪಾ ನಾಪತ್ತೆಯಾಗಿದ್ದಾರೆ.

ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಆಗುತ್ತಿದ್ದಂತೆಯೇ ಅಬಕಾರಿ ಡಿಸಿ ರೂಪಾ ನಾಪತ್ತೆ
ಕಾರವಾರ ಅಬಕಾರಿ ಜಿಲ್ಲಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 27, 2024 | 3:01 PM

ಉತ್ತರ ಕನ್ನಡ, ಮಾ.27: ಕಾರವಾರ ಅಬಕಾರಿ ಡಿಸಿ ಕಚೇರಿ ಹಾಗೂ ಮನೆ ಮೇಲೆ ಲೋಕಾಯುಕ್ತ(Lokayukta) ದಾಳಿ ಆಗುತ್ತಿದ್ದಂತೆ ಅಬಕಾರಿ ಡಿಸಿ ಎಮ್​​.ರೂಪಾ ನಾಪತ್ತೆಯಾಗಿದ್ದಾರೆ. ಬೆಳ್ಳಂ ಬೆಳಿಗ್ಗೆ ಏಕಕಾಲಕ್ಕೆ ಉಡುಪಿ ಮತ್ತು ಕಾರವಾರದ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಆದರೆ, ಈವರೆಗೂ ಅಬಕಾರಿ ಡಿಸಿ M.ರೂಪಾ ಕಚೇರಿ ಹಾಗೂ ಮನೆಗೆ ಬಂದಿಲ್ಲ. ಈ ಹಿನ್ನಲೆ ಕಚೇರಿ ಸಿಬ್ಬಂದಿ ಕರೆದು ಸತತ 6 ಗಂಟೆಯಿಂದ ಅಧಿಕಾರಿಗಳು ದಾಖಲೆ ಕಲೆ ಹಾಕುತ್ತಿದ್ದಾರೆ.

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೀದರ್, ಕಲಬುರಗಿ, ವಿಜಯಪುರ, ಧಾರವಾಡ, ಕೋಲಾರ, ಚಿಕ್ಕೋಡಿ ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ  ಲೋಕಾಯುಕ್ತ ಅಧಿಕಾರಿಗಳು ದಿಢೀರ್​ ದಾಳಿ ನಡೆಸಿದ್ದಾರೆ. ಅದರಂತೆ ಭಾಲ್ಕಿ ಕಾರಂಜಾ ವಿಭಾಗದ ಇಇ ಶಿವಕುಮಾರ್​ ಸ್ವಾಮಿಗೆ ಸೇರಿದ ಮನೆಗಳ ಮೇಲೆ ಲೋಕಾಯುಕ್ತ ಡಿವೈಎಸ್ಪಿ ನೀಲಪ್ಪ ಓಲೆಕಾರ್ ನೇತ್ರತ್ವದ ಸಿಬ್ಬಂದಿಯಿಂದ ದಾಳಿ ನಡೆಸಿದ್ದು, ಜೊತೆಗೆ ಕಲಬುರಗಿ ನಗರದ ಎಂ.ಬಿ.ಕಾಲೋನಿಯ ಮನೆಯಲ್ಲಿಯೂ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಆದಾಯಕ್ಕೆ ಮೀರಿದ ಆಸ್ತಿ ಹೊಂದಿರುವ ಬೀದರ್ ಮತ್ತು ಕಾರವಾರದ ಇಬ್ಬರು ಸರ್ಕಾರೀ ನೌಕರರ ಮನೆಗಳ ಮೇಲೆ ಲೋಕಾಯುಕ್ತ ದಾಳಿ

ಮೈಸೂರು ಮತ್ತು ಚನ್ನಪಟ್ಟಣ ಸೇರಿದಂತೆ 7 ಕಡೆ ರೇಡ್​​

ರಾಮನಗರ: ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಪಿಡಿಒ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್​ ಮಾಡಿದ್ದಾರೆ. ಜೊತೆಗೆ ಪಿಡಿಒ ಯತೀಶ್ ಚಂದ್ರಗೆ ಸಂಬಂಧಪಟ್ಟ ಮೈಸೂರು ಮತ್ತು ಚನ್ನಪಟ್ಟಣ ಸೇರಿದಂತೆ 7 ಕಡೆ ದಾಳಿ ನಡೆಸಲಾಗಿದೆ.​​ ಮೈಸೂರಿನಲ್ಲಿಯೇ ಎರಡು ಮನೆ ಹೊಂದಿರುವ ಯತೀಶ್, ಇದೀಗ ಪತ್ನಿ ಹೆಸರಲ್ಲಿ 5 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಮನೆ ಕಟ್ಟಿಸ್ತಿದ್ದಾರೆ. ಈ ಹಿನ್ನಲೆ ಈಗಲ್ಟನ್ ರೆಸಾರ್ಟ್​​ನಲ್ಲಿ PDO ಯತೀಶ್ ಚಂದ್ರ ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಆರ್‌ಎಫ್‌ಒ ಮನೆ ಮೇಲೆ ಲೋಕಾಯುಕ್ತ ದಾಳಿ

ಧಾರವಾಡದಲ್ಲಿ ಅರಣ್ಯ ಅಧಿಕಾರಿ ಮಹೇಶ್ ಎಂಬುವವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆ ಮೂಕಾಂಬಿಕಾ ನಗರದಲ್ಲಿರುವ ಮಹೇಶ್ ಹಿರೇಮಠ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಶಂಕರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಮನೆಯಲ್ಲಿನ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ