AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sagarmala: ಸಾಗರಮಾಲಾ ಯೋಜನೆಗೆ ಮೀನುಗಾರರಿಂದ ವಿರೋಧ; ಶಾಸಕಿ ರೂಪಾಲಿ ನಾಯ್ಕ್ ಜೊತೆ ಮಾತಿನ ಚಕಮಕಿ

ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರರು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಮಾತಿನ ಚಕಮಕಿ ನಡೆಯಿತು. ಸಾಗರ ಮಾಲಾ ಯೋಜನೆ ಕೈಬಿಡದಿದ್ದರೆ ಸಾಮೂಹಿತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಎಚ್ಚರಿಸಿ, ಮೀನುಗಾರರು ಬೊಬ್ಬೆ ಹಾಕಿದರು.

Sagarmala: ಸಾಗರಮಾಲಾ ಯೋಜನೆಗೆ ಮೀನುಗಾರರಿಂದ ವಿರೋಧ; ಶಾಸಕಿ ರೂಪಾಲಿ ನಾಯ್ಕ್ ಜೊತೆ ಮಾತಿನ ಚಕಮಕಿ
ಸಾಗರಮಾಲಾ ಯೋಜನೆಗೆ ಮೀನುಗಾರರಿಂದ ವಿರೋಧ; ಶಾಸಕಿ ರೂಪಾಲಿ ನಾಯ್ಕ್ ಜೊತೆ ಮಾತಿನ ಚಕಮಕಿ
TV9 Web
| Edited By: |

Updated on:Mar 12, 2022 | 7:32 PM

Share

ಕಾರವಾರ: ಸಾಗರಮಾಲಾ ಯೋಜನೆ (Sagarmala Project) ವಿಚಾರಕ್ಕೆ ಸಂಬಂಧಿಸಿ ಮೀನುಗಾರರು ಮತ್ತು ಶಾಸಕಿ ನಡುವೆ ಮಾತಿನ ಚಕಮಕಿ ನಡೆದಿದೆ. ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ (Roopali Naik Ankola BJP MLA) ಹಾಗೂ ಮೀನುಗಾರರ ನಡುವೆ ಈ ಮಾತಿನ ಚಕಮಕಿ ನಡೆದಿದೆ. ಮೀನುಗಾರಿಕಾ ಸಚಿವ ಎಸ್. ಅಂಗಾರ ಮುಂದೆಯೇ ಸ್ಥಳೀಯ ಮೀನುಗಾರರು (Karwar Fishermen) ಶಾಸಕಿಯ ಜತೆ ವಾಗ್ವಾದಕ್ಕಿಳಿದು, ತಮ್ಮ ಆಕ್ರೋಶ ಹೊರಹಾಕಿದರು. ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರರು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಮಾತಿನ ಚಕಮಕಿ ನಡೆಯಿತು. ಸಾಗರ ಮಾಲಾ ಯೋಜನೆ ಕೈಬಿಡದಿದ್ದರೆ ಸಾಮೂಹಿತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಎಚ್ಚರಿಸಿ, ಮೀನುಗಾರರು ಬೊಬ್ಬೆ ಹಾಕಿದರು.

ಆ ವೇಳೆ, ಮೀನುಗಾರರ ಮಾತು ಕೇಳಿ ಎಂಎಲ್‌ಸಿ ಹಾಗೂ ಮೀನುಗಾರರ ಮುಖಂಡ ಗಣಪತಿ ಉಳ್ವೇಕರ್ ಗರಂ ಆದರು. ಮಾತು ಸ್ಥಿಮಿತದಲ್ಲಿರಲಿ, ಸಚಿವರು ಇದ್ದಾಗಲೇ ಅವಾಜ್ ಎಲ್ಲಾ ಹಾಕೋದು ಸರಿಯಲ್ಲ. ಶಾಸಕರು, ಸಚಿವರು ಮುಂದೆ ಸರಿಯಾಗಿ ಮಾತನಾಡಿ, ಹುಷಾರ್… ಎಂದು ಎಮ್‌ಎಲ್‌ಸಿ ಗಣಪತಿ ಉಳ್ವೇಕರ್ ಗುಡುಗಿದರು.

ನೀವು ಯಾರಿಗೆ ಕೈ ತೋರಿಸಿ ಮಾತನಾಡ್ತೀರಾ..? ಕೈ ತೋರಿಸಿ ನನ್ನ ಮುಂದೆ ಜೋರು ಮಾತನಾಡಬೇಡಿ.. ಕೇಂದ್ರ ಸರ್ಕಾರ ಈ ಯೋಜನೆಗೆ ಅನುದಾನ ನೀಡಿದ್ದು, ಕೋರ್ಟ್ ಕೂಡಾ ಯೋಜನೆಗೆ ಅಸ್ತು ಎಂದಿದೆ. ಈಗೇನೂ ಮಾಡುವುದಕ್ಕೆ ಆಗಲ್ಲ ಎಂದು ಮೀನುಗಾರರಿಗೆ ಹೇಳಿದ ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ನಾಯ್ಕ್ ಕೊನೆಗೂ ಸರಿಯಾದ ನಿರ್ಣಯವಾಗದೆ ಸಭೆ ಮುಕ್ತಾಯಗೊಂಡಿತು.

ಹಳ್ಳಿ ರಸ್ತೆಗಾಗಿ ಎಷ್ಟೇ ಮನವಿ ಮಾಡಿದರೂ ಡೋಂಟ್ ಕೇರ್, ಬಿಜೆಪಿ ಶಾಸಕ ರಾಮಣ್ಣ ಲಮಾಣಿಗೆ ಗ್ರಾಮಸ್ಥರಿಂದ ತರಾಟೆ ಗದಗ: ಮುಂಡರಗಿ ತಾಲೂಕಿನ ಶಿರೋಳ ಗ್ರಾಮದಲ್ಲಿ (Shirol village) ಶಾಸಕ ರಾಮಣ್ಣ ಲಮಾಣಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮದ ರಸ್ತೆ ಮಾಡಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬಂದಿದ್ದದರೂ ಸ್ಪಂದಿಸದ ಶಾಸಕ ರಾಮಣ್ಣ ಲಮಾಣಿಗೆ ಗ್ರಾಮಸ್ಥರು ಛೀಮಾರಿ ಹಾಕಿದ್ದಾರೆ.

ನಡುರಸ್ತೆಯಲ್ಲೇ ಶಾಸಕರ ಕಾರು ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ ಗ್ರಾಮಸ್ಥರು. ರಾಮಣ್ಣ ಲಮಾಣಿ, ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ. ಗ್ರಾಮಕ್ಕೆ ಆಗಮಿಸಿದ್ದ ಶಾಸಕ ರಾಮಣ್ಣ ಲಮಾಣಿಗೆ (Shirahatti BJP MLA Ramanna Lamani) ದಿಗ್ಭಂಧನ ಹಾಕಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಆ ವೇಳೆ ರೈತರ ಆಕ್ರೋಶಕ್ಕೆ ಶಾಸಕ ರಾಮಣ್ಣ ತಡಬಡಾಯಿಸಿದ್ದಾರೆ. ಕೆಲಸ ಮಾಡ್ತಿರೋ, ಇಲ್ವೋ ಅಂತ ಶಾಸಕ ರಾಮಣ್ಣಗೆ ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದಿಂದ ನಿರಂತರ ತಾರತಮ್ಯ ನಡೆಯುತ್ತಿದೆ: ರಾಮಲಿಂಗಾ ರೆಡ್ಡಿ ಗರಂ

ಇದನ್ನೂ ಓದಿ: ಕೇಂದ್ರದಲ್ಲಿ ಬಿಜೆಪಿಯನ್ನು ಹಿಂದಿಕ್ಕಲು ಆಗಿಲ್ಲವೆಂಬುದು ವಾಸ್ತವ, ಬೊಮ್ಮಾಯಿ ಸರ್ಕಾರ ಚೆನ್ನಾಗಿಯೇ ನಡೆಯುತ್ತಿದೆ -ದೇವೇಗೌಡ

Published On - 7:28 pm, Sat, 12 March 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್