AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ರಾಷ್ಟ್ರೀಯ ಪಕ್ಷ ಸೇರಲು ಮಾಜಿ‌‌ ಸಚಿವ ಆನಂದ್ ಅಸ್ನೋಟಿಕರ್ ನಿರ್ಧಾರ

ವಿಧಾನಸಭೆ ಚುನಾವಣೆ ಇನ್ನು ಕೆಲವೇ ತಿಂಗಳು ಬಾಕಿ ಇರುವಂತೆ ಚುನಾವಣಾ ಕಣ ರಂಗೇರುತ್ತಿದೆ. ಅದರ ಬೆನ್ನಲ್ಲೇ ಇದೀಗ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಜೆಡಿಎಸ್ ಪಕ್ಷ ತೊರೆದು ರಾಷ್ಟ್ರೀಯ ಪಕ್ಷ ಸೇರಲು ಮುಂದಾಗಿದ್ದಾರೆ.

ಕಾರವಾರ: ರಾಷ್ಟ್ರೀಯ ಪಕ್ಷ ಸೇರಲು ಮಾಜಿ‌‌ ಸಚಿವ ಆನಂದ್ ಅಸ್ನೋಟಿಕರ್ ನಿರ್ಧಾರ
ರಾಷ್ಟ್ರೀಯ ಪಕ್ಷ ಸೇರಲು ಮಾಜಿ‌‌ ಸಚಿವ ಆನಂದ್ ಅಸ್ನೋಟಿಕರ್ ನಿರ್ಧಾರ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Feb 21, 2023 | 6:19 PM

Share

ಉತ್ತರ ಕನ್ನಡ: ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಂತೆಯೇ ಪಕ್ಷ ತೊರೆದು ಪಕ್ಷ ಸೇರುವುದು ಜೋರಾಗಿದೆ. ಅದರಂತೆ ಇದೀಗ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಜೆಡಿಎಸ್ ಪಕ್ಷ ತೊರೆದು ರಾಷ್ಟ್ರೀಯ ಪಕ್ಷ ಸೇರಲು ಮುಂದಾಗಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಕಾರವಾರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ಇದೀಗ ಜೆಡಿಎಸ್​ ಪಕ್ಷ ತೊರೆದು ರಾಷ್ಟ್ರೀಯ ಪಕ್ಷ ಸೇರಲು ಮುಂದಾಗಿದ್ದು, ನಾನು ಸೇರ್ಪಡೆಗೊಳ್ಳುವ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಕಾರವಾರದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ.

ನಾನು ಕಠಿಣ‌ ಪರಿಸ್ಥಿತಿಯಲ್ಲಿ ಇದ್ದೇನೆ, ಚುನಾವಣೆಯಲ್ಲಿ ನಿಂತು ನಾನು ಸೋಲನ್ನ ಕಂಡರೆ ನನ್ನ ಬೆಂಬಲಿಗರು ತೊಂದರೆಯಲ್ಲಿ ಸಿಲುಕುತ್ತಾರೆ. ಮುಂದೆ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ ಆ ಪಕ್ಷಕ್ಕೆ ಸೇರುತ್ತೇನೆ, ಈ ಹಿಂದೆ ಸಹ ಜೆಡಿಎಸ್​ಗೆ ಹೋದಾಗ ಸಮ್ಮಿಶ್ರ ಸರ್ಕಾರ ಬರುತ್ತದೆ ಎಂದು ಹೇಳಿಯೇ ಪಕ್ಷಕ್ಕೆ ಸೇರಿಕೊಂಡಿದ್ದೆ. ಎಂಎಲ್ಎ ಆಗುವುದು ನನಗೆ ಮುಖ್ಯವಲ್ಲ, ನನಗೆ ಸದ್ಯ ರಾಜಕೀಯಕ್ಕೆ ವೇದಿಕೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಕ್ಕೆ ಸೇರುತ್ತೇನೆ ಎಂದಿದ್ದಾರೆ. ಇನ್ನು ನನ್ನ ತಾಯಿಯ ಆರೋಗ್ಯ ಸರಿಯಿಲ್ಲ. ಹೀಗಾಗಿ ನಾನು ರಾಜಕೀಯದಲ್ಲಿ ಸಕ್ರಿಯನಾಗಲು ಆಗುತ್ತಿಲ್ಲ. ಇದರ ಜೊತೆಗೆ ಹಿಂದೆ ನಡೆದ ಚುನಾವಣೆಯಲ್ಲಿ ಸಾಕಷ್ಟು ಹಣ ಖರ್ಚು ಮಾಡಿದ್ದೇನೆ ಎಂದಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್