AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರದಲ್ಲಿ ಮುಂದುವರಿದ ಮಳೆ ಅವಾಂತರ: ಕಾರಿನ ಮೇಲೆ ಮರ ಬಿದ್ದು ಅತ್ತೆ ಸಾವು, ಸೊಸೆ ಪಾರು

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾರೀ ಮಳೆಯಿಂದಾಗಿ ಒಂದು ದೊಡ್ಡ ಮರ ಕಾರಿನ ಮೇಲೆ ಬಿದ್ದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿರುವಂತಹ ಘಟನೆ ಪಿಕಳೆ ಆಸ್ಪತ್ರೆಯ ಬಳಿ ನಡೆದಿದೆ. ಮತ್ತೋರ್ವ ಗರ್ಭಿಣಿ ಮಹಿಳೆ ಮತ್ತು ಕಾರು ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಕಾರವಾರದಲ್ಲಿ ಮುಂದುವರಿದ ಮಳೆ ಅವಾಂತರ: ಕಾರಿನ ಮೇಲೆ ಮರ ಬಿದ್ದು ಅತ್ತೆ ಸಾವು, ಸೊಸೆ ಪಾರು
ಕಾರಿನ ಮೇಲೆ ಬಿದ್ದ ಮರ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jul 20, 2025 | 4:33 PM

Share

ಕಾರವಾರ, ಜುಲೈ 20: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ (rain) ಸಾಕಷ್ಟು ಅವಾಂತರಗಳನ್ನು ಸೃಷ್ಟಿಸುತ್ತಿದೆ. ಇದೀಗ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದು ಅತ್ತೆ ಸಾವನ್ನಪ್ಪಿದ್ದು (death), 8 ತಿಂಗಳ ಗರ್ಭಿಣಿ ಮತ್ತು ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿರುವಂತಹ ಘಟನೆ ಕಾರವಾರದ ಪಿಕಳೆ ಆಸ್ಪತ್ರೆ ಬಳಿ ನಡೆದಿದೆ. ಲಕ್ಷ್ಮೀ ಪಾಗಿ ಮೃತ ಮಹಿಳೆ. ಸ್ಥಳಕ್ಕೆ ಹೆಚ್ಚುವರಿ ಡಿಸಿ ಮತ್ತು ನಗರಸಭೆ ಆಯುಕ್ತರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದದ್ದೇನು? 

ಗರ್ಭಿಣಿ ಸೊಸೆ ಸುನಿತಾಗೆ ಜ್ವರ ಹಿನ್ನೆಲೆ ಅತ್ತೆ ಲಕ್ಷ್ಮೀ ಆಸ್ಪತ್ರೆಗೆ ಕರೆತಂದಿದ್ದಾರೆ. ಪಿಕಳೆ ಆಸ್ಪತ್ರೆ ಎದುರು ಮರದ ಕೆಳಗೆ ಚಾಲಕ ಕಾರು ನಿಲ್ಲಿಸಿದ್ದ. ಭಾರೀ ಮಳೆ ಹಿನ್ನಲೆ ಮರವೊಂದು ಧರೆಗುರುಳಿದೆ. ಮರ ಬೀಳುವುದನ್ನು ಗಮನಿಸಿದ ಸುನಿತಾ ಮತ್ತು ಚಾಲಕ ತಕ್ಷಣ ಕೆಳಗಿಳಿದಿದ್ದಾರೆ. ಆದರೆ ಡೋರ್ ತೆಗೆಯುವುದು ತಡವಾದರಿಂದ ಲಕ್ಷ್ಮೀ ಕಾರಿ ಒಳಗಡೆ ಸಿಲುಕಿದ್ದಾರೆ.

ಇದನ್ನೂ ಓದಿ: ಮುಗಿಯದ ಬೆಂಗಳೂರು-ಮಂಗಳೂರು ಹೆದ್ದಾರಿ ಕಾಮಗಾರಿ: ಗುಡ್ಡ ಕುಸಿಯುವ ಭೀತಿ

ಇದನ್ನೂ ಓದಿ
Image
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
Image
ಗುಡ್ಡಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ, ಅಧಿಕಾರಿಗಳ ವಿರುದ್ಧ ದೂರು
Image
ಭೂಕುಸಿತ ಭೀತಿ: ಉತ್ತರ ಕನ್ನಡದಲ್ಲಿ ಹೆದ್ದಾರಿಯ 19 ಕಡೆ ವಾಹನ ನಿಲುಗಡೆ ಬಂದ್
Image
ಬೆಂಗಳೂರು ಮಂಗಳೂರು ವಾಹನ ಸವಾರರೇ ಗಮನಿಸಿ: ಶಿರಾಡಿ ಘಾಟ್​ನ ಹಲವೆಡೆ ಭೂಕುಸಿತ

ಲಕ್ಷ್ಮೀ ರಕ್ಷಣೆಗಾಗಿ ಕೂಡಲೇ ಸ್ಥಳೀಯರು ಮತ್ತು ನಗರಸಭೆ ಸಿಬ್ಬಂದಿ ಮುಂದಾಗಿ, ಹರಸಾಹಸ ಪಟ್ಟು ಲಕ್ಷ್ಮೀ ಅವರನ್ನು ರಕ್ಷಿಸಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಘಟನೆಯಿಂದ ಆಘಾತಕ್ಕೀಡಾಗಿರುವ 8 ತಿಂಗಳ ಗರ್ಭಿಣಿ ಸುನಿತಾ ಪಾಗಿಯನ್ನು ಪಿಕಳೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಏಕಾಏಕಿ ರೌದ್ರಾವತಾರ ತಾಳಿದ ಅರೆಬೈಲ್ ಫಾಲ್ಸ್ ಮಧ್ಯದಲ್ಲಿ ಸಿಲುಕಿದ ಪ್ರವಾಸಿಗರು: ರಕ್ಷಣೆಗೆ ರೋಚಕ ಕಾರ್ಯಾಚರಣೆ

ಇನ್ನು ಇತ್ತೀಚೆಗೆ ಸುರಿದ ಮಳೆಗೆ ತಗ್ಗು ಪ್ರದೇಶಗಳಲ್ಲಿ ನಿರಂತರ ನೀರು ತುಂಬುತ್ತಿದ್ದು, ನಗರದ ಕೆ.ಹೆಚ್.ಬಿ ಕಾಲೂನಿ, ಗುನಗಿವಾಡ, ಸುಂಕ್ರಿವಾಡ, ರಾಘವೇಂದ್ರಸ್ವಾಮಿ ಮಠ ರಸ್ತೆ ಸೇರಿದಂತೆ ಹಲವು ಭಾಗದಲ್ಲಿ ನಿಂತ ನೀರು ಮನೆಗಳಿಗೆ ನುಗ್ಗಿದರೆ, ರಸ್ತೆಗಳು ಜಲಾವೃತವಾಗಿ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಇನ್ನು ಮಳೆಯಿಂದ ಈವರೆಗೆ ಆರು ಮನೆಗಳು ಸಂಪೂರ್ಣ ಹಾನಿಯಾದರೆ 158 ಮನೆಗಳು ಭಾಗಶಃ ಹಾನಿಯಾಗಿವೆ. ಜೂನ್ ತಿಂಗಳಿಂದ ಈವರೆಗೆ ಒಟ್ಟು 5 ಜೀವಗಳು ಬಲಿಯಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:31 pm, Sun, 20 July 25

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?