AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಿ ಭಾಷಾ ವಿವಾದಕ್ಕೆ ಕಿಡಿ ಇಟ್ಟ ಕಾರವಾರ ನಗರಸಭೆ; ಮರಾಠಿ ಭಾಷೆ ನಾಮಫಲಕ ಅಳವಡಿಕೆ

ನಗರಸಭೆ ಹಿಂದಿ ಲಿಪಿಯಲ್ಲಿ ಮರಾಠಿ ಭಾಷೆ ಬರೆದು ನಾಮಫಲಕ ಹಾಕಿದೆ. ಮುರಳಿಧರ್ ಮಠ ರಸ್ತೆ, ಗ್ರೀನ್ ಸ್ಟ್ರೀಟ್ ರಸ್ತೆ ಇತರೆ ಕಡೆಗಳಲ್ಲಿ ನಾಮಫಲಕಗಳನ್ನ ಹಾಕಲಾಗಿದೆ.

ಮರಾಠಿ ಭಾಷಾ ವಿವಾದಕ್ಕೆ ಕಿಡಿ ಇಟ್ಟ ಕಾರವಾರ ನಗರಸಭೆ; ಮರಾಠಿ ಭಾಷೆ ನಾಮಫಲಕ ಅಳವಡಿಕೆ
ಮರಾಠಿ ಭಾಷೆಯಲ್ಲಿ ನಾಮಫಲಕ ಅಳವಡಿಸಲಾಗಿದೆ
TV9 Web
| Edited By: |

Updated on:Jun 12, 2022 | 12:45 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆ (Karwar Municipality) ಎಡವಟ್ಟೊಂದು ಮಾಡಿದ್ದು, ಮರಾಠಿ ಭಾಷಾ ವಿವಾದಕ್ಕೆ ಕಿಡಿ ಇಟ್ಟಿದೆ. ಕನ್ನಡದ ನೆಲದಲ್ಲಿ ಮರಾಠಿ ಭಾಷೆಯ ನಾಮಫಲಕವನ್ನು (Nameplate) ಅಳವಡಿಸುವ ಮೂಲಕ ಬೆಳಗಾವಿಗೆ ಸೀಮಿತವಾಗಿದ್ದ ಮರಾಠಿ ಭಾಷಾ ವಿವಾದ ಉತ್ತರ ಕನ್ನಡದಲ್ಲೂ ಸೃಷ್ಇಯಾಗುತ್ತಾ ಎಂಬ ಆತಂಕ ಶುರುವಾಗಿದೆ. ನಗರದ ಹಲವು ನಾಮಫಲಕಗಳಲ್ಲಿ ಮರಾಠಿ ಭಾಷೆ ಬಳಕೆ ಮಾಡಿದ್ದಾರೆ. ಕಾರವಾರ ನಗರಸಭೆ ಎಡವಟ್ಟಿಗೆ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಜೊತೆಗೆ ಅನ್ಯಭಾಷೆಯ ನಾಮಫಲಕವನ್ನು ತೆಗೆಯುವಂತೆ ಕರವೇ ಆಗ್ರಹಿಸಿದೆ.

ನಗರಸಭೆ ಹಿಂದಿ ಲಿಪಿಯಲ್ಲಿ ಮರಾಠಿ ಭಾಷೆ ಬರೆದು ನಾಮಫಲಕ ಹಾಕಿದೆ. ಮುರಳಿಧರ್ ಮಠ ರಸ್ತೆ, ಗ್ರೀನ್ ಸ್ಟ್ರೀಟ್ ರಸ್ತೆ ಇತರೆ ಕಡೆಗಳಲ್ಲಿ ನಾಮಫಲಕಗಳನ್ನ ಹಾಕಲಾಗಿದೆ.

ಈ ಹಿಂದೆ ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದ್ದಾಗ ಎಂಇಎಸ್​ ಪುಂಡರು ಕಿರಿಕ್ ಮಾಡಿದ್ದರು. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದರು. ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ಪ್ರತಿಭಟನೆಗೆ ಮುಂದಾಗಿತ್ತು. ಸಂಭಾಜಿ ವೃತ್ತದಲ್ಲಿ ಎಂಇಎಸ್ ಕಾರ್ಯಕರ್ತರು ಧರಣಿ ನಡೆಸಿದ್ದರು. ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೆಟ್ ತಳ್ಳಿ ಎಂಇಎಸ್ ಪುಂಡರು ಪುಂಡಾಟ ನಡೆಸಿ, ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ್ದರು.

ಇದನ್ನೂ ಓದಿ
Image
Jai Jagadeesh: ವ್ಯಕ್ತಿ ಮೇಲೆ ಹಲ್ಲೆ ಆರೋಪ: ಪೊಲೀಸ್​ ಠಾಣೆಗೆ ಬಂದ ನಟ ಜೈ ಜಗದೀಶ್​; ಇಲ್ಲಿದೆ ಘಟನೆಯ ವಿವರ
Image
ಪೊಲೀಸ್ ಪಾಠ: ಎಸ್​ಎಸ್​ಎಲ್​ಸಿ ಫೇಲಾದ ವಿದ್ಯಾರ್ಥಿಗಳ ಕೈ ಹಿಡಿದ ಇನ್​ಸ್ಪೆಕ್ಟರ್, ಓದು ಮುಂದುವರೆಸಲು ನೆರವು
Image
Funny Video: ವಿಮಲ್ ಪಾನ್ ಮಸಾಲ ಬೆರೆಸಿ ಮ್ಯಾಗಿ ಸವಿದ ಯುವಕ, ವಿಲಕ್ಷಣ ವಿಡಿಯೋ ವೈರಲ್
Image
ಕರ್ನಾಟಕದಲ್ಲಿ 3 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ; ಉಗ್ರ ತಾಲಿಬ್ ಹುಸೇನ್ ಬಂಧನದ ಬೆನ್ನಲ್ಲೇ ಐಎಸ್​ಡಿ ಅಲರ್ಟ್

ಇದನ್ನೂ ಓದಿ: Jai Jagadeesh: ವ್ಯಕ್ತಿ ಮೇಲೆ ಹಲ್ಲೆ ಆರೋಪ: ಪೊಲೀಸ್​ ಠಾಣೆಗೆ ಬಂದ ನಟ ಜೈ ಜಗದೀಶ್​; ಇಲ್ಲಿದೆ ಘಟನೆಯ ವಿವರ

ಮರಾಠಿ ಭಾಷಿಕರ ಮೇಲೆ ಅನ್ಯಾಯವಾಗುತ್ತಿದೆ. ಗಡಿ ಭಾಗ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿ ಕರ್ನಾಟಕ ಸರ್ಕಾರದ ವಿರುದ್ಧ ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಮನವಿ ಸ್ವೀಕರಿಸಲು ಬಂದ ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ ಎದುರೇ ನಾಡದ್ರೋಹಿಗಳು ಘೋಷಣೆ ಕೂಗಿದ್ದರು. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದಿದ್ದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Sun, 12 June 22

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?