AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ವಹಣೆ ಇಲ್ಲದೆ ಹದಗೆಟ್ಟ ಕಾರವಾರ ಪಾರ್ಕಗಳು, ತುಕ್ಕು ಹಿಡಿದ ವಾರ್‌ಶೀಪ್ ಮ್ಯೂಸಿಯಂ: ಪ್ರವಾಸಿಗರು ಬೇಸರ!

ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತಿ ಪಡೆದ ಕಾರವಾರದಲ್ಲಿ ಪಾಕ್೯ಗಳು ಸರಿಯಾದ ನಿರ್ವಹಣೆ ಇಲ್ಲದೆ ಹದಗೆಟ್ಟಿವೆ. ಜಿಲ್ಲೆಯಲ್ಲಿ ಪ್ರಮುಖ ವಾರ್ ಶಿಪ್ ಮ್ಯೂಸಿಯಂ ಸರಿಯಾದ ನಿರ್ವಹಣೆ ಇಲ್ಲದೆ ತುಕ್ಕು ಹಿಡಿದು ಹೋಗಿದೆ.

ನಿರ್ವಹಣೆ ಇಲ್ಲದೆ ಹದಗೆಟ್ಟ ಕಾರವಾರ ಪಾರ್ಕಗಳು, ತುಕ್ಕು ಹಿಡಿದ ವಾರ್‌ಶೀಪ್ ಮ್ಯೂಸಿಯಂ: ಪ್ರವಾಸಿಗರು ಬೇಸರ!
ವಾರ್‌ಶೀಪ್ ಮ್ಯೂಸಿಯಂ
TV9 Web
| Edited By: |

Updated on: Oct 27, 2022 | 9:39 PM

Share

ಕಾರವಾರ: ಪ್ರವಾಸಿಗರ (tourists) ಸ್ವರ್ಗ ಎಂದೇ ಖ್ಯಾತಿ ಪಡೆದ ಉತ್ತರ ಕನ್ನಡ ಜಿಲ್ಲೆಯಲ್ಲಿ ಪಾರ್ಕ್, ಮ್ಯೂಸಿಯಂಗಳು ನಿರ್ವಣೆ ಇಲ್ಲದೆ ಹದೆಗೆಟ್ಟಿವೆ. ಜೊತೆಗೆ ಮ್ಯೂಸಿಯಂಗಳು ತುಕ್ಕು ಹಿಡಿದು ಹಾಳಾಗುತ್ತಿವೆ. ಕಳೆದ ಮೂರು ವರ್ಷಗಳಲ್ಲಿ ಕೋವಿಡ್ ಹಾವಳಿ ಮತ್ತು ನಿರಂತರ ಮಳೆಯಿಂದ ಪ್ರವಾಸಿಗರಿಲ್ಲದೆ ಪ್ರವಾಸೋದ್ಯಮ ನೆಲಕಚ್ಚಿತ್ತು. ಈಗ ಕೋವಿಡ್ ಕಡಿಮೆಯಾಗಿದ್ದು, ಮಳೆಯು ಕೊಂಚ ಬಿಡುವು ನೀಡಿದೆ. ಈ ಹಿನ್ನಲೆ ಪ್ರವಾಸಿಗರು ಜಿಲ್ಲೆಯತ್ತ ಬರುತ್ತಿದ್ದಾರೆ. ಹೀಗಾಗಿ ಕೊಂಚ ಮಟ್ಟಿಗೆ ಪ್ರವಾಸೋದ್ಯಮ ಚೇತರಿಕೆ ಕಂಡಿದೆ. ಆದರೆ ಜಿಲ್ಲೆಯ ಪ್ರಮುಖ ಪಾಕ್೯, ಮ್ಯೂಸಿಯಂಗಳ ಸ್ಥಿತಿ ನೋಡಿ ಪ್ರವಾಸಿಗರಿಗೆ ನಿರಾಶೆ ಮೂಡಿದೆ.

ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತಿ ಪಡೆದ ಕಾರವಾರದಲ್ಲಿ ಪಾಕ್೯ಗಳು ಸರಿಯಾದ ನಿರ್ವಹಣೆ ಇಲ್ಲದೆ ಹದಗೆಟ್ಟು ಹೋಗಿವೆ. ಜಿಲ್ಲೆಯಲ್ಲಿ ಪ್ರಮುಖ ವಾರ್ ಶಿಪ್ ಮ್ಯೂಸಿಯಂ ಸರಿಯಾದ ನಿರ್ವಹಣೆ ಇಲ್ಲದೆ ತುಕ್ಕು ಹಿಡಿದು ಹೋಗಿದೆ. ಕಾರವಾರ ನಗರದ ರವೀಂದ್ರನಾಥ ಟಾಗೋರ್ ಬೀಚ್ ಹತ್ತಿರದಲ್ಲಿರುವ ವಾರ್ ಶಿಪ್ ಮ್ಯೂಸಿಯಂ 1934ರಲ್ಲಿ ನಡೆದ ಮಹಾಯುದ್ಧದಲ್ಲಿ ಬಳಕೆ ಯಾದ ಪ್ರಮುಖ ಶಸ್ತ್ರಾಸ್ತ್ರಗಳನ್ನು ಹೋಲುವ ಮತ್ತು ಯುದ್ಧದಲ್ಲಿ ಬಳಕೆಯಾದ ಯುದ್ದ ನೌಕೆಯನ್ನ ಹೀಗೆ ಹಲವು ಈ ಮ್ಯೂಸಿಯಂನಲ್ಲಿ ಇರಿಸಲಾಗಿದೆ‌‌. ಆದರೆ ಎಲ್ಲವೂ ತುಕ್ಕು ಹಿಡಿದು, ಬಣ್ಣ ಮಾಸಿ ಕಳೆಗುಂದಿದೆ. ಈ ಹಿನ್ನೆಲೆ ಪ್ರವಾಸಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಹದಗೆಟ್ಟ ವಾರ್ ಶೀಪ್ ಮ್ಯೂಸಿಯಂ:

ಇನ್ನು ಎರಡನೇ ಮಹಾಯುದ್ಧದಲ್ಲಿ ಬಳಕೆಯಾದ ಯುದ್ಧ ನೌಕೆಯನ್ನು ಈ ಮ್ಯೂಸಿಯಂನಲ್ಲಿ ಇರಿಸಿ ಅದಕ್ಕೆ ಮರು ಜೀವ ತುಂಬಿ, ಯುದ್ಧದಲ್ಲಿ ಯಾವ ರೀತಿ ಇದನ್ನ ಬಳಕೆ ಮಾಡಲಾಯಿತು. ಇದರ ಮಹತ್ವ ಏನು, ಹೇಗೆ ಬಳಕೆ ಮಾಡುತ್ತಿದ್ದರು ಎಂಬುವುದರ ಬಗ್ಗೆ ಸಂಪೂರ್ಣ ವಿವರ ನೀಡುವುದರೊಂದಿಗೆ ಪ್ರತ್ಯಕ್ಷ ಅನುಭವವನ್ನು ನೀಡಲಾಗುತ್ತದೆ. ಹೀಗಾಗಿ ಕಾರವಾರಕ್ಕೆ ಬಂದ ಬಹುತೇಕ ಪ್ರವಾಸಿಗರು ಈ ವಾರ್ ಶೀಪ್ ಮ್ಯೂಸಿಯಂಗೆ ಭೇಟಿ ಕೊಟ್ಟು ಅದರ ಅನುಭವವನ್ನು ಪಡೆದುಕೊಂಡು ಹೋಗುತ್ತಾರೆ. ಆದರೆ ಈಗ ಆ ಮ್ಯೂಸಿಯಂ ಸಂಪೂರ್ಣ ಹದಗೆಟ್ಟು ಹೋಗಿದೆ. ನೌಕೆಯ ಒಳಬಾಗ ತುಕ್ಕು ಹಿಡಿದು ಹಾಳಾಗಿದ್ದರೆ ಹೊರ ಭಾಗದ ಬಣ್ಣವೆಲ್ಲ ಮಾಸಿ ಕಳೆಗುಂದಿದೆ.

ಜೊತೆಗೆ ನಿರ್ವಹಣೆ ಇಲ್ಲದೆ ಈ ಮ್ಯೂಸಿಯಂ ಸೋರಗಿದೆ. ನೂರಾರು ರೂಪಾಯಿ ಹಣಕೊಟ್ಟು ಮ್ಯೂಸಿಯಂ ನೋಡಲು ಹೋದ ಪ್ರವಾಸಿಗರು ಅಲ್ಲಿಯ ವಾಸ್ತವತೆ ನೋಡಿ ಬೇಸರಗೊಂಡಿದ್ದಾರೆ. ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ದೀಪಾವಳಿ ಹಬ್ಬದ ನಿಮಿತ್ತ ಸಾಲು ಸಾಲು ರಜೆ ಹಿನ್ನಲೆ, ಜಿಲ್ಲೆಯ ಮುರಡೇಶ್ವರ, ಗೋಕರ್ಣ, ಕಡಲತೀರಗಳು ಪ್ರವಾಸಿಗರಿಂದ ತುಂಬಿ ತುಳಕುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?