AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ನಿರ್ಮಾಣಕ್ಕೆ ಎಷ್ಟೇ ಬೇಡಿಕೆ ಇಟ್ಟರೂ ಸರ್ಕಾರದಿಂದ ಸಿಗಲಿಲ್ಲ ಸ್ಪಂದನೆ: ಕೋಲು ಕಟ್ಟಿ ಸೇತುವೆ ನಿರ್ಮಾಣ, ಮಳೆ ಬಂದ್ರೆ ಏನು ಗತಿ ಎಂಬ ಆತಂಕ

ಅಲ್ಲಿನ ಜನಕ್ಕೆ ಮಳೆಗಾಲ ಅಂದ್ರೆ ಸಾಕು ಭಯ ಶುರುವಾಗುತ್ತೆ. ಯಾವಾಗಪ್ಪಾ ಮಳೆಗಾಲ ಮುಗಿಯೋದು ಅಂತಾ ಜನ ಚಾತಕ ಪಕ್ಷಿಗಳಂತೆ ಕಾಯ್ತಾ ಇರ್ತಾರೆ. ಏಕೆಂದರೆ ಕೋಲು ಕಟ್ಟಿ ನಿರ್ಮಿಸಿರುವ ಸೇತುವೆ ಯಾವ ಕ್ಷಣದಲ್ಲಿ ಬೇಕಾದರು ಜೀವಕ್ಕೆ ಅಪಾಯ ತರಬಹುದು ಎಂಬ ಭಯ. ಇಲ್ಲಿನ ಜನ ಅಪಾಯಕಾರಿ ಸೇತುವೆಯ ಮೇಲೆ ಓಡಾಡಬೇಕಾದ ಅನಿವಾರ್ಯತೆ ಉಂಟಾಗಿದೆ.

ಸೇತುವೆ ನಿರ್ಮಾಣಕ್ಕೆ ಎಷ್ಟೇ ಬೇಡಿಕೆ ಇಟ್ಟರೂ ಸರ್ಕಾರದಿಂದ ಸಿಗಲಿಲ್ಲ ಸ್ಪಂದನೆ: ಕೋಲು ಕಟ್ಟಿ ಸೇತುವೆ ನಿರ್ಮಾಣ, ಮಳೆ ಬಂದ್ರೆ ಏನು ಗತಿ ಎಂಬ ಆತಂಕ
ಸೇತುವೆ ನಿರ್ಮಾಣಕ್ಕೆ ಎಷ್ಟೇ ಬೇಡಿಕೆ ಇಟ್ಟರೂ ಸರ್ಕಾರದಿಂದ ಸಿಗಲಿಲ್ಲ ಸ್ಪಂದನೆ: ಕೋಲು ಕಟ್ಟಿ ಸೇತುವೆ ನಿರ್ಮಾಣ, ಮಳೆ ಬಂದ್ರೆ ಏನು ಗತಿ ಎಂಬ ಆತಂಕ
TV9 Web
| Edited By: |

Updated on: Nov 09, 2021 | 11:12 AM

Share

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಜನರಿಗೆ ಮಳೆಗಾಲ ಅಂದ್ರೆ ಸಾಕು ಭಯ ಶುರುವಾಗಿಬಿಡುತ್ತೆ. ಯಾಕಂದ್ರೆ ಗ್ರಾಮಕ್ಕೆ ಅಡ್ಡಲಾಗಿ ಕಾಮನಗದ್ದೆ ಹೊಳೆ ಹರಿದಿದ್ದು, ಹೊಳೆಗೆ ಅಡ್ಡಲಾಗಿ ಸೂಕ್ತ ಸೇತುವೆ ನಿರ್ಮಿಸಿಲ್ಲ. ಕೆಲ ವರ್ಷಗಳ ಹಿಂದೆ ಜನರೇ ಸಂಕವೊಂದನ್ನು ಮಾಡಿಕೊಂಡಿದ್ದಾರೆ. ಆದ್ರೆ ಅದು ಸಹ ಈಗಲೋ ಆಗಲೋ ಬೀಳುವಂತಿದೆ. ಗ್ರಾಮದಲ್ಲಿ 500ಕ್ಕೂ ಹೆಚ್ಚು ಜನರಿದ್ದು ಪ್ರತಿನಿತ್ಯ ಅಪಾಯಕಾರಿ ಸಂಕದಲ್ಲಿಯೇ ಹೊಳೆ ದಾಟಬೇಕಿದೆ. ಮಳೆಗಾಲದಲ್ಲಿ ಹೊಳೆಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತದೆ. ಪ್ರತಿವರ್ಷ ಮಳೆಗಾಲದಲ್ಲಿ ಹೆದರುತ್ತಲೇ ಹೊಳೆ ದಾಟಬೇಕಿದೆ. ಸೇತುವೆ ನಿರ್ಮಿಸಿ ಕೊಡಿ ಅಂತಾ ಅದೆಷ್ಟೇ ಬಾರಿ ಮನವಿ ಮಾಡಿದ್ರೂ ಅಧಿಕಾರಿಗಳು, ಜನಪ್ರತಿನಿಧಿಗಳು ಮನವಿಗೆ ಸ್ಪಂದಿಸಿಲ್ಲವಂತೆ.

ನಿತ್ಯ ವಿಧ್ಯಾರ್ಥಿಗಳು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಜನ ಹೊಳೆ ದಾಟುತ್ತಾರೆ. ಕೆಲವೊಮ್ಮೆ ಆಯಾ ತಪ್ಪಿ ಸಂಕದಿಂದ ಬಿದ್ದು ಗಾಯಗಳಾದ ಘಟನೆಗಳು ನಡೆದಿವೆ. ಮಳೆಗಾಲದಲ್ಲಿ ತುಂಬಿ ಹರಿಯುವ ಹೊಳೆಗೆ ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಇನ್ನೊಂದೆಡೆ ಕ್ಷೇತ್ರ ಶಾಸಕರಾಗಿರುವ ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ಈ ಬಗ್ಗೆ ಮನವಿ ಮಾಡಿ, ಸೇತುವೆ ನಿರ್ಮಾಣಕ್ಕೆ ಕೇಳಿಕೊಂಡಿದ್ರೂ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯ ಆರೋಪಿಸ್ತಿದ್ದಾರೆ.

ಒಟ್ನಲ್ಲಿ ಕಲ್ಲೂರು ಗ್ರಾಮದ ಜನ ಜೀವ ಕೈಯಲ್ಲಿಡಿದು ಹೊಳೆ ದಾಟುವ ಪರಿಸ್ಥಿತಿ ಇದೆ. ಈಗಲಾದ್ರೂ ಈ ಬಗ್ಗೆ ಗಮನಹರಿಸಿ ಜನರ ಸಮಸ್ಯೆ ಬಗೆಹರಿಸಬೇಕಿದೆ. ಮುಂದಿನ ಮಳೆಗಾಲದ ಒಳಗೆ ಸೂಕ್ತ ಸೇತುವೆ ವ್ಯವಸ್ಥೆ ಕಲ್ಪಿಸಬೇಕಿದೆ ಅನ್ನೋದು ಸ್ಥಳೀಯರ ಒತ್ತಾಯ.

kwr bridge issue

ಸೇತುವೆ ನಿರ್ಮಾಣಕ್ಕೆ ಎಷ್ಟೇ ಬೇಡಿಕೆ ಇಟ್ಟರೂ ಸರ್ಕಾರದಿಂದ ಸಿಗಲಿಲ್ಲ ಸ್ಪಂದನೆ: ಕೋಲು ಕಟ್ಟಿ ಸೇತುವೆ ನಿರ್ಮಾಣ, ಮಳೆ ಬಂದ್ರೆ ಏನು ಗತಿ ಎಂಬ ಆತಂಕ

ವರದಿ: ಮಂಜುನಾಥ್ ಪಟಗಾರ್, ಟಿವಿ9 ಕಾರವಾರ

ಇದನ್ನೂ ಓದಿ: ಮೈಸೂರಿನಲ್ಲಿ ಸೇತುವೆಯಿಂದ ನದಿಗೆ ಹಾರಿದ ಯುವತಿಯ ರಕ್ಷಣೆ! ವಿಡಿಯೋ ವೈರಲ್

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು