AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಜನರಿಂದಲೇ ಸುರಂಗ ಮಾರ್ಗದಲ್ಲಿ ಸಂಚಾರ ಆರಂಭ

ಇತ್ತೀಚೆಗಷ್ಟೇ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ನೇತೃತ್ವದಲ್ಲಿ ನೂರಾರು ಜನರು ಸುರಿಯುವ ಮಳೆಯನ್ನು ಲೆಕ್ಕಿಸದೇ ಟನಲ್ ಎದುರು ಪ್ರತಿಭಟನೆ ನಡೆಸಿದ್ದರು. ಆದರೆ ಇಂದು ಜನರೇ ಟನಲ್ ಮಾರ್ಗದ ಬ್ಯಾರಿಕೇಡ್ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕಾರವಾರ: ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಜನರಿಂದಲೇ ಸುರಂಗ ಮಾರ್ಗದಲ್ಲಿ ಸಂಚಾರ ಆರಂಭ
ಕಾರವಾರ ಟನಲ್
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಆಯೇಷಾ ಬಾನು

Updated on: Oct 02, 2023 | 2:49 PM

ಕಾರವಾರ, ಅ.02: ಕಳೆದ ಎರಡು-ಮೂರು ತಿಂಗಳಿಂದ ಬಂದ್ ಮಾಡಲಾಗಿರುವ ಕಾರವಾರದ ಸುರಂಗ ಮಾರ್ಗವನ್ನು (Karwar Tunnel) ತೆರವುಗೊಳಿಸಬೇಕೆಂದು ಹೋರಾಟಗಳು ನಡೆಯುತ್ತಿದ್ದವು. ಸದ್ಯ ಈಗ ಟನಲ್ ಮಾರ್ಗದ ಬ್ಯಾರಿಕೇಡ್ ಸರಿಸಿ ಸಂಚಾರಕ್ಕೆ ಅನುವು ಮಾಡಲಾಗಿದೆ. ಕಾರವಾರದ ಟನಲ್ ರಾಜಕೀಯಕ್ಕೆ ಜನರೇ ತಾರ್ಕಿಕ ಫುಲ್‌ಸ್ಟಾಪ್ ಇಟ್ಟಿದ್ದಾರೆ. ಜನರೇ ಟನಲ್ ಮಾರ್ಗದ ಬ್ಯಾರಿಕೇಡ್ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲಾಡಳಿತ ಸಂಚಾರಕ್ಕೆ ಅನುಮತಿ ನೀಡದಿದ್ದರೂ ಜನರೇ ಟನಲ್ ಮಾರ್ಗದಲ್ಲಿ ಸಂಚಾರ ಪ್ರಾರಂಭಿಸಿದ್ದಾರೆ. ಹೀಗಾಗಿ ಜಿಲ್ಲಾಡಳಿತ ನಾಳೆಯಿಂದ ಟನಲ್ ಸಂಚಾರಕ್ಕೆ ಅನುವು ಮಾಡಿಕೊಡುವ ಸಾಧ್ಯತೆ ಇದೆ.

ಇತ್ತೀಚೆಗಷ್ಟೇ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ನೇತೃತ್ವದಲ್ಲಿ ನೂರಾರು ಜನರು ಸುರಿಯುವ ಮಳೆಯನ್ನು ಲೆಕ್ಕಿಸದೇ ಟನಲ್ ಎದುರು ಪ್ರತಿಭಟನೆ ನಡೆಸಿದ್ದರು. ಆದರೆ ಇಂದು ಜನರೇ ಟನಲ್ ಮಾರ್ಗದ ಬ್ಯಾರಿಕೇಡ್ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸದ್ಯಕ್ಕೆ ದ್ವಿಚಕ್ರ ವಾಹನಗಳು ಮಾತ್ರ ಟನಲ್ ಮಾರ್ಗದಲ್ಲಿ ಸಂಚಾರ  ನಡೆಸುತ್ತಿವೆ.  ದ್ವಿಚಕ್ರ ವಾಹನಗಳ ಜೊತೆ ರಿಕ್ಷಾಗಳು ಕೂಡಾ ಟನಲ್‌ ಮಾರ್ಗದಿಂದಲೇ ಸಂಚಾರ ಮಾಡುತ್ತಿವೆ.

ಇದನ್ನೂ ಓದಿ: ಶಿವಮೊಗ್ಗ ಗಲಾಟೆ; ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್, ಗೃಹ ಸಚಿವ

ಕಳೆದ ಶನಿವಾರ ಎಂಎಲ್‌ಸಿ ಗಣಪತಿ ಉಳ್ವೇಕರ್ ಉಳ್ವೇಕರ್ ನೇತೃತ್ವದಲ್ಲಿ ಜನಸಾಮಾನ್ಯರು ಭಾರೀ ಪ್ರತಿಭಟನೆ ನಡೆಸಿದ್ದರು. ರಾತ್ರಿ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸೋಮವಾರ ಟನಲ್ ತೆರೆಯುವುದಾಗಿ ಹೇಳಿಕೆ ನೀಡಿದ್ದರು. ಜಿಲ್ಲಾಡಳಿತ ಟನಲ್ ತೆರೆಯದಿದ್ರೂ ಟನಲ್‌ ಮಾರ್ಗದಲ್ಲಿ ಪ್ರಯಾಣ ಬೆಳೆಸಲು ಜನರು ಪ್ರಾರಂಭಿಸಿದ್ದಾರೆ. ಈ ಹಿಂದೆ ಒಂದು ಬದಿಯ ಸುರಂಗವನ್ನು ಜ. 6ರಂದು, ಇನ್ನೊಂದು ಬದಿಯ ಸುರಂಗ ಮಾರ್ಗವನ್ನು ಜೂ. 5 ರಂದು ಲೋಕಾರ್ಪಣೆಗೊಳಿಸಲಾಗಿತ್ತು. ಮಳೆಗಾಲದಲ್ಲಿ ಸುರಂಗ ಮಾರ್ಗ ಸೋರುತ್ತಿದ್ದ ಕಾರಣ ಫಿಟ್ನೆಸ್ ಸರ್ಟಿಫಿಕೇಟ್ ಕೇಳಿ ಮಾರ್ಗ ಬಂದ್ ಮಾಡಲಾಗಿತ್ತು. ಕಳೆದ ಎರಡು ತಿಂಗಳಿಂದ ಸುರಂಗ‌ ಮಾರ್ಗ ಮುಚ್ಚಿದ್ದರಿಂದ ಬಿಜೆಪಿ ಜನಸಾಮಾನ್ಯರ ಜೊತೆ ಪ್ರತಿಭಟನೆಗಿಳಿದಿತ್ತು. ಇಂದು ಜನಸಾಮಾನ್ಯರಿಂದಲೇ ಟನಲ್ ಮಾರ್ಗ ಓಪನ್ ಮಾಡಲಾಗಿದೆ.

ಇನ್ನು ಈ ಹಿಂದೆ ಸಾರ್ವಜನಿಕರು ಟನಲ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದರು. ಬಲವಂತವಾಗಿ ಬ್ಯಾರಿಕೆಡ್ ತೆರವುಗೊಳಿಸಲು ಪ್ರತಿಭಟನಾಕಾರರು ಮುನ್ನುಗ್ಗಿದ್ದರು. ಆ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಆಗ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಕೊನೆಗೆ ಪೊಲೀಸರು ಪ್ರತಿಭಟನಾಕಾರರನ್ನು ಎಳೆದೊಯ್ದು ಪೊಲೀಸ್ ವಾಹನದಲ್ಲಿ ಬಂಧಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು