ಚಕ್ರವರ್ತಿ ಸೂಲೆಬೆಲೆ ವಿರುದ್ಧ ಮತ್ತೊಂದು ದೂರು ದಾಖಲು: ಏನಿದು ಪ್ರಕರಣ?

Chakravarti Sulibele Derogatory Remarks Against Siddaramaiah: ಯುವ ಬ್ರೀಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲೆಬೆಲೆ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕಾರವಾರ ಗ್ರಾಮೀಣ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ಯಾಕೆ? ಏನಿದು ಪ್ರಕರ?

ಚಕ್ರವರ್ತಿ ಸೂಲೆಬೆಲೆ ವಿರುದ್ಧ ಮತ್ತೊಂದು ದೂರು ದಾಖಲು: ಏನಿದು ಪ್ರಕರಣ?
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 13, 2023 | 3:24 PM

ಕಾರವಾರ, (ಅಕ್ಟೋಬರ್ 13): ಯುವ ಬ್ರೀಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲೆಬೆಲೆ (Chakravarti Sulibele) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಅವಹೇಳನಾಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕಾರವಾರ (Karwar) ಗ್ರಾಮೀಣ ಪೊಲೀಸರು ಸುಮೊಟೋ ಕೇಸ್ (sumoto case) ದಾಖಲಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲೆಬೆಲೆ ಇತ್ತೀಚಿಗೆ ಜಣಗಣಮನ ಅಭಿಯಾನ ಹಿನ್ನೆಲೆ ಕಾರವಾರದ ಕಡವಾಡಕ್ಕೆ ಬಂದಿದ್ದರು. ಈ ವೇಳೆ ಕಾರವಾರ ತಾಲೂಕಿನ ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೂಲೆಬೆಲೆ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.

ಕಾರವಾರ ತಾಲೂಕಿನ ಕಡವಾಡದ ಬೋವಿವಾಡದಲ್ಲಿರುವ ಶ್ರೀ ಆದಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಚಕ್ರವರ್ತಿ ಸೂಲೆಬೆಲೆ , ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ಬದುಕುವುದು ಕಷ್ಟ. ಮುಸ್ಲಿಮರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಯ ಹಸ್ತವಿದೆ ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪ್ರಕರಣ ಸಂಬಂಧಿಸಿ ಹಿಂದು-ಮುಸ್ಲಿಂ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಹೇಳಿಕೆ ನೀಡಿದ್ದಾರೆಂಬ ಆರೋಪ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು

ಇತ್ತೀಚೆಗಷ್ಟೇ ಕೆಪಿಸಿಸಿ (KPCC) ಸಾಮಾಜಿಕ ಜಾಲತಾಣ (Social Media) ವಿಭಾಗದ ಉಪಾಧ್ಯಕ್ಷೆ ವಿರುದ್ಧ ಫೇಸ್​ಬುಕ್​ನಲ್ಲಿ (Fecbook) ​ಅವಹೇಳನಕಾರಿಯಾಗಿ ಕಾಮೆಂಟ್​​ ಮಾಡಿದ ಆರೋಪದಡಿ ಚಕ್ರವರ್ತಿ ಸೂಲಿಬೆಲೆ  ಅವರ ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಫೇಸ್​​ಬುಕ್​ನಲ್ಲಿ ಅವಾಚ್ಯ ಶಬ್ದದಿಂದ ನಿಂಧಿಸಿರುವ ಆರೋಪ ಮೇಲೆ ಸೌಂಗಧಿಕಾ ಅವರು ವಿನೋಬನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ಐಪಿಸಿ ಸೆಕ್ಷನ್ 504, 509ರ ಅಡಿ ಎಫ್​ಐಆರ್​ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ