ಕಾರವಾರ: ಕಾಂಗ್ರೆಸ್ ನಾಯಕರ ಪ್ರತಿಷ್ಠೆಗೆ ಖಾಲಿ ಉಳಿದ ಅಪರ ಜಿಲ್ಲಾಧಿಕಾರಿ ಕುರ್ಚಿ

ಕಾಂಗ್ರೆಸ್ ನಾಯಕರಾದ ಮಾಂಕಾಳು ವೈದ್ಯ ಹಾಗೂ ಆರ್​​ವಿ ದೇಶಪಾಂಡೆ ಪ್ರತಿಷ್ಠೆಯ ಕದನದಿಂದಾಗಿ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಕುರ್ಚಿ ಖಾಲಿಯೇ ಉಳಿಯುವಂತಾಗಿದೆ. ತಮ್ಮ ಗಮನಕ್ಕೆ ತಾರದೆ ವರ್ಗಾವಣೆ ಮಾಡಿದ್ದಾರೆ ಎಂಬ ಅಸಮಾಧಾನದಿಂದ ಅಪರ ಜಿಲ್ಲಾಧಿಕಾರಿಗೆ ಅಧಿಕಾರ ಸ್ವೀಕರಿಸಲು ಉಸ್ತುವಾರಿ ಸಚಿವರು ಅನುಮತಿ ಕೊಟ್ಟಿಲ್ಲ.

ಕಾರವಾರ: ಕಾಂಗ್ರೆಸ್ ನಾಯಕರ ಪ್ರತಿಷ್ಠೆಗೆ ಖಾಲಿ ಉಳಿದ ಅಪರ ಜಿಲ್ಲಾಧಿಕಾರಿ ಕುರ್ಚಿ
ಮಾಂಕಾಳು ವೈದ್ಯ ಹಾಗೂ ಆರ್​​ವಿ ದೇಶಪಾಂಡೆ
Edited By:

Updated on: Oct 16, 2024 | 9:01 AM

ಕಾರವಾರ, ಅಕ್ಟೋಬರ್ 16: ಕಾಂಗ್ರೆಸ್ ನಾಯಕರ ಪ್ರತಿಷ್ಠೆಯ ಕಾರಣಕ್ಕೆ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಕುರ್ಚಿ ಖಾಲಿಯೇ ಉಳಿಯುವಂತಾಗಿದೆ. ಸರ್ಕಾರದಿಂದ ಆದೇಶ ಪ್ರಕಟವಾಗಿ 15 ದಿನಗಳು ಕಳೆದರೂ ಅಪರ ಡಿಸಿ ಕುರ್ಚಿ ಖಾಲಿಯಾಗಿಯೇ ಇದೆ. ಸಚಿವ ಮಾಂಕಾಳು ವೈದ್ಯ ಅವರ ಹಸ್ತಕ್ಷೇಪವೇ ಇದಕ್ಕೆಲ್ಲ ಕಾರಣ ಎನ್ನಲಾಗುತ್ತಿದೆ.

ಕೆಎಎಸ್ ಅಧಿಕಾರಿಗೆ ಹಾಜರಾಗಲು ಸಚಿವ ಮಂಕಾಳು ವೈದ್ಯ ಬಿಡುತ್ತಿಲ್ಲ. ದೇಶಪಾಂಡೆ ಇಚ್ಛೆಯಂತೆ ಅಪರ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿದ್ದಕ್ಕೆ ಮಂಕಾಳು ವೈದ್ಯ ಗರಂ ಆಗಿದ್ದಾರೆ. ತಮ್ಮ ಗಮನಕ್ಕೆ ಬಾರದೆ ಡಿಸಿ & ಅಪರ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿದ್ದಕ್ಕೆ ಅವರು ಸಿಟ್ಟು ಮಾಡಿಕೊಂಡಿದ್ದು, ಕರ್ತವ್ಯಕ್ಕೆ ಹಾಜರಾಗಲು ಅಧಿಕಾರಿಗೆ ಅನುವು ಮಾಡಿಕೊಡುತ್ತಿಲ್ಲ ಎನ್ನಲಾಗಿದೆ.

2 ತಿಂಗಳ ಹಿಂದೆ ಅಂದಿನ ಡಿಸಿ ಗಂಗೂಬಾಯಿ ವರ್ಗಾವಣೆ ಮಾಡಲಾಗಿತ್ತು. ಕಳೆದ 15 ದಿನಗಳ ಹಿಂದೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ವರ್ಗಾವಣೆಯಾಗಿತ್ತು. ಪ್ರಕಾಶ್ ರಜಪೂತ್​ರನ್ನು ಬಾಗಲಕೊಟೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಪ್ರಕಾಶ್ ರಜಪೂತ್ ಸ್ಥಾನಕ್ಕೆ ಕೆಎಎಸ್​ ಅಧಿಕಾರಿ ಸಾಜಿದ್ ಮುಲ್ಲಾ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಯಿಂದ ಹಣ ಕೊರತೆ? ಮುರ್ಡೇಶ್ವರ, ಗೋಕರ್ಣದ ಲೈಫ್ ಗಾರ್ಡ್ಸ್​ಗಳಿಗೆ ಕೊಟ್ಟಿಲ್ಲ ಮೂಲ ಸಲಕರಣೆ

ಅಧಿಕಾರ ಸ್ವೀಕರಿಸುವ ಬಗ್ಗೆ ಸಚಿವರ ಭೇಟಿಗೆ ಹೋಗಿದ್ದ ಸಾಜಿದ್ ಮುಲ್ಲಾಗೆ ಕೆಲಸಕ್ಕೆ ಹಾಜರಾಗದಂತೆ ಮಂಕಾಳು ವೈದ್ಯ ಸೂಚಿಸಿದ್ದಾರೆ. ಮಂಕಾಳು ಮಾತಿನಿಂದ ಕಂಗೆಟ್ಟು ಅಧಿಕಾರ ಸ್ವೀಕರಿಸದ ಸಾಜಿದ್​ ಮುಲ್ಲಾ, ಸದ್ಯ ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದಾರೆ. ಆರ್​​ವಿ ದೇಶಪಾಂಡೆ, ಮಂಕಾಳು ಕಚ್ಚಾಟದಿಂದ ಅಧಿಕಾರಿಯ ಪರಿಸ್ಥಿತಿ ಅತಂತ್ರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us