AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ರಸ್ತೆಯಿಲ್ಲದೇ 8 ಕಿ.ಮೀ ಮೃತದೇಹವನ್ನ ಹೊತ್ತು ಸಾಗಿದ ಗ್ರಾಮಸ್ಥರು

ಜಿಲ್ಲೆಯ ಅಂಕೋಲ ತಾಲೂಕಿನ ಬೆರಡಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನ ತೆಗೆದುಕೊಂಡು ಹೋಗಲು ರಸ್ತೆಯೇ ಇಲ್ಲದೇ ಶವವನ್ನು ಬಿದಿರಿಗೆ ಕಟ್ಟಿಕೊಂಡು ಸಾಗಿದ ಧಾರುಣ ಘಟನೆ ನಡೆದಿದೆ.

ಕಾರವಾರ: ರಸ್ತೆಯಿಲ್ಲದೇ 8 ಕಿ.ಮೀ ಮೃತದೇಹವನ್ನ ಹೊತ್ತು ಸಾಗಿದ ಗ್ರಾಮಸ್ಥರು
ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jan 11, 2023 | 11:52 AM

Share

ಉತ್ತರ ಕನ್ನಡ: ಜಿಲ್ಲೆಯ ಅಂಕೋಲ ತಾಲೂಕಿನ ಬೆರಡಿ ಗ್ರಾಮದ ದಾಮೋದರ ನೇಮು ನಾಯ್ಕ (68) ಎಂಬ ವ್ಯಕ್ತಿಯು ಆಕಸ್ಮಿಕವಾಗಿ ಸಾವನ್ನಪ್ಪಿದ್ದು, ಗ್ರಾಮಕ್ಕೆ ರಸ್ತೆ ಸಂಪರ್ಕ ವಿಲ್ಲದ ಹಿನ್ನೆಲೆ, ಊರಿನ ಗ್ರಾಮಸ್ಥರು ಮೃತ ದೇಹವನ್ನ ಬಿದರಿನ ಬೊಂಬಿಗೆ ಕಟ್ಟಿಕೊಂಡು ಸುಮಾರು 8 km ವರೆಗೆ ಮೃತ ದೇಹವನ್ನ ಹೊತ್ತುಕೊಂಡು ಹೋಗಿದ್ದಾರೆ.

ಇನ್ನು ಮೃತ ವ್ಯಕ್ತಿಯು ಬೆರಡಿ ಗ್ರಾಮದ ಹೊರವಲಯದಲ್ಲಿ ಮರಗಳಿಗೆ ಬೆಂಕಿ ತಗುಲಿದ್ದಾಗ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಅಂಕೋಲ ತಾಲೂಕ ಆಸ್ಪತ್ರೆಗೆ ಶವ ಪರೀಕ್ಷೆಗೆಂದು ಕೊಂಡೊಯ್ದು ನಂತರ ಪುನಃ ಮೃತ ದೇಹವನ್ನ ಹೊತ್ತುಕೊಂಡು ಗ್ರಾಮಕ್ಕೆ ತಂದು ಶವ ಸಂಸ್ಕಾರ ಮಾಡಿದ್ದಾರೆ. ಜಿಲ್ಲೆಯು ಪಶ್ಚಿಮ ಘಟ್ಟಗಳಿಂದ ಕೂಡಿದ್ದು, ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಇಲ್ಲಿ ಓಡಾಡಲು ಸರಿಯಾದ ರಸ್ತೆಯ ವ್ಯವಸ್ಥೆಯಿಲ್ಲದೇ ಇಂದು ಶವವನ್ನ ಹೊತ್ತು ಸಾಗಿದ ಧಾರುಣ ಘಟನೆ ನಡೆದಿದೆ. ಇನ್ನಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ನೋಡಬೇಕಾಗಿದೆ.

ಇದನ್ನೂ ಓದಿ:Delhi Accident: ಕಾರಿಗೆ ಸಿಲುಕಿಕೊಂಡಿದ್ದ ಯುವತಿ ಮೃತದೇಹ ಬೇರ್ಪಡಿಸಲು ಅಂದು ಯುವಕರು ಮಾಡಿದ್ದೇನು?

ಕೊವಿಡ್ ರಿಪೋರ್ಟ್​​ನಲ್ಲಿ ಹೆಸರು ತಪ್ಪಾಗಿ ಬರೆದಿದ್ದಕ್ಕೆ ಜಿಲ್ಲಾಸ್ಪತ್ರೆಯ ಲ್ಯಾಬ್​​ ಸಿಬ್ಬಂದಿ ಮೇಲೆ ಹಲ್ಲೆ

ಬಾಗಲಕೋಟೆ: ಕೊವಿಡ್ ರಿಪೋರ್ಟ್ ಕಾರ್ಡ್​ನಲ್ಲಿ ಹೆಸರು ತಪ್ಪಾಗಿದ್ದಕ್ಕೆ ಜಿಲ್ಲಾಸ್ಪತ್ರೆಯ ಡೇಟಾ ಎಂಟ್ರಿ ಆಪರೇಟರ್ ಪ್ರವೀಣ್​​, ಡಿ ಗ್ರೂಪ್ ನೌಕರ ಈರಣ್ಣ, ಆ್ಯಂಬುಲೆನ್ಸ್​​ ಚಾಲಕ ಪ್ರಶಾಂತ್​ ಬುರ್ಲಿ ಮೇಲೆ ವಿಜಯ, ಮಹಾಂತೇಶ್ ಕಲಕುಟಗೇರಿ, ಚೇತನ್ ದೊಡ್ಡಮನಿ, ಸಚಿನ್ ಚೌಹಾಣ್ ಹಾಗೂ ಶಿವು ಪತ್ತಾರ ಎಂಬುವವರು ಸೇರಿ ಹಲ್ಲೆ ನಡೆಸಿದ್ದಾರೆ. ಜ.8 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಷ್ಟೇ ಅಲ್ಲದೇ ಮೇಲಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪುಂಡರು. ಕೇವಲ ಸ್ಪೆಲಿಂಗ್ ಮಿಸ್ಟೇಕ್ ಆಗಿದ್ದಕ್ಕೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಪುಂಡರ ಹಾವಳಿಯ ವೀಡಿಯೊ ಸಧ್ಯ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದ್ದು ಆಸ್ಪತ್ರೆ ಸಿಬ್ಬಂದಿಗಳಿಂದ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:52 am, Wed, 11 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ