AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಪ್ರವಾಸಿಗರು ಹೆಚ್ಚಳದ ಮಧ್ಯೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ನಡುವೆ ಬಿಗ್ ಫೈಟ್

ಸಾಲು ಸಾಲು ರಜೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಜಲಸಾಹಸ ಕ್ರೀಡೆಗಳಿಗಾಗಿ ಪ್ರವಾಸಿಗರ ದಂಡು ಹರಿದುಬರುತ್ತಿದೆ. ಆದರೆ, ಟ್ರಾವೆಲ್ ಏಜೆಂಟರು ಮತ್ತು ಜಲಸಾಹಸ ಕಂಪನಿಗಳ ನಡುವೆ ದರ ನಿಗದಿ ವಿಚಾರವಾಗಿ ಜಟಾಪಟಿ ಶುರುವಾಗಿದೆ. ಜಲಸಾಹಸ ಕಂಪನಿಗಳು ಜಾರಿಗೆ ತಂದ 'ಸಿಂಗಲ್ ವಿಂಡೋ ಸಿಸ್ಟಮ್' ನಿಂದ ಏಜೆಂಟರು ಪಡೆಯುತ್ತಿದ್ದ ದೊಡ್ಡ ಕಮಿಷನ್‌ಗೆ ಬ್ರೇಕ್ ಬಿದ್ದಿದ್ದು, ಭಾರೀ ನಷ್ಟ ಎದುರಿಸುತ್ತಿದ್ದಾರೆ.

ಕಾರವಾರ: ಪ್ರವಾಸಿಗರು ಹೆಚ್ಚಳದ ಮಧ್ಯೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ನಡುವೆ ಬಿಗ್ ಫೈಟ್
ವಾಟರ್ ಸ್ಪೋರ್ಟ್ಸ್Image Credit source: tv9 kannada
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Mar 21, 2026 | 8:57 PM

Share

ಕಾರವಾರ, ಮಾರ್ಚ್​ 21: ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಉತ್ತರ ಕನ್ನಡ ಜಿಲ್ಲೆಗೆ ಬರುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಟ್ರಾವೆಲ್ ಏಜೆಂಟ್ಸ್​ ಮತ್ತು ಜಲಸಾಹಸ ಕ್ರಿಡಾ ಕಂಪನಿಗಳ ನಡುವೆ ದರ ನಗದಿ ವಿಚಾರವಾಗಿ ಭಾರೀ ಜಟಾಪಟಿ ನಡೆದಿದ್ದು, ಪ್ರವಾಸಿಗರು (Tourists) ಜಾಸ್ತಿ ಬಂದರೂ ನಿರೀಕ್ಷಿಸಿದಷ್ಟು ಲಾಭ ಸಿಗದೆ ಎಜೆಂಟರು ಒದ್ದಾಡುತ್ತಿದ್ದಾರೆ.

ಸದ್ಯ ಒಂದು ಕಡೆ ಸಾಲು ಸಾಲು ಹಬ್ಬ ಹಿನ್ನೆಲೆ ರಜೆ. ಮತ್ತೊಂದು ಕಡೆ ಮಕ್ಕಳ ಪರೀಕ್ಷೆ ಮುಗಿದಿದ್ದು, ಜಾಲಿ ಮಾಡುವ ಸಂದರ್ಭ. ಹೀಗಾಗಿ ಪ್ರವಾಸಿಗರು ವಾಟರ್ ಸ್ಪೋರ್ಟ್ಸ್​ಗಾಗಿ ಉತ್ತರ ಕನ್ನಡ ಜಿಲ್ಲೆಯತ್ತ ಮುಖ ಮಾಡುತ್ತಿದ್ದಾರೆ. ಆದರೆ ಇದೆ ಸಂದರ್ಭದಲ್ಲಿ ಜಲಸಾಹಸ ಕ್ರೀಡಾ ಕಂಪನಿಗಳು ಮತ್ತು ಟ್ರಾವೆಲ್ ಏಜೆಂಟ್ಸ್​​​ಗಳ ನಡುವಿನ ಜಟಾಪಟಿ ಕೂಡ ಉಂಟಾಗಿದೆ. ಪರಿಣಾಮ ನಿರೀಕ್ಷಿಸಿದ ಪ್ರಮಾಣದಲ್ಲಿ ಹಣ ಮಾಡುವುದಕ್ಕೆ ಆಗದ ಪರಿಸ್ಥಿತಿ ಉಂಟಾಗಿದೆ.

ಇದನ್ನೂ ಓದಿ: ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಜಲಸಾಹಸ ನಡೆಸುವವ ನಡುವಿನ ವ್ಯಾಪಾರವನ್ನು ಏಜೆಂಟ್​ಗಳು  ಬಂಡಾವಳ ಮಾಡಿಕೊಂಡಿದ್ದಾರೆ. ಅತ್ಯಂತ ಕಡಿಮೆ ದರದಲ್ಲಿ ಜಲಸಾಹಸ ಕ್ರೀಡೆ ಮಾಡಿಸಿ ಪ್ರವಾಸಿಗರಿಂದ ಹೆಚ್ಚಿನ ಹಣ ಪಿಕುತ್ತಿದ್ದಾರೆ. ಆದರೆ ಈಗ ಜಲಸಾಹಸ ಕಂಪನಿಗಳು ಒಂದಾಗಿ ಸಿಂಗಲ್ ವಿಂಡೊ ಸಿಸ್ಟಮ್ ಜಾರಿಗೆ ತಂದಿದ್ದು, ಏಜೆಂಟ್​ಗಳು ಪಡೆಯುತ್ತಿದ್ದ ದೊಡ್ಡ ಮಟ್ಟದ ಕಮಿಷನ್​ಗೆ ಬ್ರೇಕ್ ಬಿದ್ದಂತಾಗಿದೆ.

ವಿಷಯ ಏನೆಂದರೆ ಜೋಯಿಡಾ ತಾಲೂಕಿನ ಗಣೇಶ ಗುಡಿಯ ಅತ್ಯಾಕರ್ಷಣೀಯ ನಿಸರ್ಗತಾಣದಲ್ಲಿ ಹರಿಯುವ ಕಾಳಿ ನದಿಯಲ್ಲಿ ಸುಮಾರು 5 ಕ್ಕೂ ಹೆಚ್ಚು ಬಗೆಯ ಜಲಸಾಹಸ ಕ್ರೀಡೆಗಳನ್ನ ನಡೆಸುತ್ತಾರೆ. ಇದಕ್ಕಾಗಿ ರಾಜ್ಯ ಹೊರರಾಜ್ಯಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಇತ್ತೀಚೆಗೆ ಜಲಸಾಹಸ ಕ್ರೀಡೆ ನಡೆಸುವ ಜೆಟ್ಟಿಗಳು ಹೆಚ್ಚಾಗಿದ್ದಾರೆ.

ಈ ಟ್ರಾವೆಲ್ ಏಜೆಂಟ್ಸ್​​ ಮಾತ್ರ ಪ್ರವಾಸಿಗರಿಂದ ತಲಾ 1500 ರೂ ಪಡೆದು ದೊಡ್ಡ ಮಟ್ಟದ ಲಾಭ ಗಳಿಸುತ್ತಿದ್ದರು. ಇತ್ತೀಚೆಗೆ ಜೆಟ್ಟಿ ಮಾಲಿಕರಿಗೆ ಆಗುತ್ತಿರುವ ನಷ್ಟವನ್ನ ಮನಗಂಡು ತಮ್ಮಲ್ಲಿನ ವೈಮನಸ್ಸು ಬದಿಗಿಟ್ಟು, ಕಳೆದ ಒಂದು ತಿಂಗಳಿನಿಂದ ಸಿಂಗಲ್ ವಿಂಡೋ ಸಿಸ್ಟಮ್ ಜಾರಿಗೆ ತಂದಿದ್ದಾರೆ. ಯಾರೇ ಪ್ರವಾಸಿಗರು ಬಂದರು ಒಂದೇ ಕಡೆ ಬುಕ್ಕಿಂಗ ಮಾಡಬೇಕಾಗಿದ್ದು, ತಲಾ 750 ರೂ ದರ ನಿಗದಿ ಮಾಡಿದ್ದಾರೆ. ಇದು ಏಜೆಂಟ್​ಗಳಿಗೆ ನುಂಗಲಾರದ ತುತ್ತಾಗಿದ್ದು, ದೊಡ್ಡ ಮಟ್ಟದಲ್ಲಿ ನಷ್ಟ ಅನುಭವಿಸುವಂತಾಗಿದೆ.

ಇದನ್ನೂ ಓದಿ: ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ

ಇನ್ನು ತಮಗಾಗುತ್ತಿರುವ ನಷ್ಟವನ್ನ ಸಹಿಸಲಾರದ ಏಜೆಂಟ್​ಗಳು ದೊಡ್ಡ ಮಟ್ಟದಲ್ಲಿ ಗಲಾಟೆ ಮಾಡಿಕೊಂಡಿದ್ದು, ಸದ್ಯ ಈ ವಿಚಾರ ಜೋಯಿಡಾ ತಹಶೀಲ್ದಾರ್ ಅಂಗಳಕ್ಕೆ ಬಂದು ತಲುಪಿದೆ. ನಿನ್ನೆ ಈ ಬಗ್ಗೆ ಮೂರು ಗಂಟೆಗಳ ಕಾಲ ಸಭೆ ಮಾಡಿದರು ಸಹಿತ, ಇದುವರೆಗೂ ಇಬ್ಬರ ನಡುವಿನ ಜಟಾಪಟಿ ಅಂತ್ಯ ಆಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!