AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ; ನಾಲ್ವರು ಪೊಲೀಸ್ ವಶಕ್ಕೆ

ರಾಷ್ಟ್ರೀಯ ಹೆದ್ದಾರಿ 66ರ ಹೊಳೆಗದ್ದೆ ಟೋಲ್‌ಗೇಟ್ ಬಳಿ 13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ; ನಾಲ್ವರು ಪೊಲೀಸ್ ವಶಕ್ಕೆ
13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ
TV9 Web
| Updated By: preethi shettigar|

Updated on:Nov 03, 2021 | 10:52 AM

Share

ಉತ್ತರ ಕನ್ನಡ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಳೆಗದ್ದೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೊಳೆಗದ್ದೆ ಟೋಲ್‌ಗೇಟ್ ಬಳಿ 13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪೊಲೀಸರ ತಪಾಸಣೆ ವೇಳೆ ಜಾನುವಾರುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವುದು ಬೆಳಕಿಗೆ ಬಂದಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

ಕೊಪ್ಪಳ: ದೀಪಾವಳಿ ಹಬ್ಬದ ವೇಳೆ ಇಸ್ಪೀಟ್ ಆಡಿದ್ರೆ ಕಾನೂನು ಕ್ರಮ ದೀಪಾವಳಿ ಹಬ್ಬದ ಹಿನ್ನಲೆ ಯಾರು ಜೂಜಾಡುವಂತಿಲ್ಲ ಎಂದು ಕೊಪ್ಪಳ ಜಿಲ್ಲೆಯ ಹಳ್ಳಿಗಳಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದರ ಹೊರತಾಗಿಯೂ ಜೂಜಾಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಗ್ರಾಮಗಳಲ್ಲಿ ಮೈಕ್ ಮೂಲಕ ಪೊಲೀಸರು ಈ ವಿಚಾರವನ್ನು ಪ್ರಚಾರ ಮಾಡಿದ್ದಾರೆ. ದೀಪಾವಳಿಯಲ್ಲಿ ಇಸ್ಪೇಟ್ ಆಟವಾಡುವುದು ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿದೆ. ಹೀಗಾಗಿ ಹಬ್ಬದ ನೆಪದಲ್ಲಿ ಜೂಜಾಟ ಆಡುವವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಇಸ್ಪೀಟ್ ಆಟಕ್ಕೆ ನಿರ್ಬಂಧ ಹೇರಿದ್ದಾರೆ.

ನೆಲಮಂಗಲ: ಮಾದನಾಯಕನಹಳ್ಳಿ ಪೊಲೀಸರಿಂದ ನಕಲಿ ಪೊಲೀಸ್ ಬಂಧನ ನಾನು ಪೊಲೀಸ್ ನನಗೆ ಮಾಮೂಲು ಕೊಡಬೇಕು ಎಂದು ಹೇಳಿ ಸಾವಿರಾರು ರೂಪಾಯಿ ದೋಚಿದ್ದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸರು ಲಕ್ಷ್ಮೀನಾರಾಯಣ(60)ನನ್ನು ಬಂಧಿಸಿದ್ದಾರೆ. ಬೈಲಕೋನೆನಾಹಳ್ಳಿ ಗ್ರಾಮದ ನಿಖಿಲ್ ಹಾಗೂ ಇತರೆ ಅಂಗಡಿಯವರಿಂದ ವೃದ್ಧ ಹಣ ಪಡೆದಿದ್ದ, ಅನುಮಾನಗೊಂಡು ಸ್ಥಳೀಯರು ಪೊಲೀಸ್​ ಠಾಣೆಗೆ ಮಾಹಿತಿ ಕೊಟ್ಟಿದ್ದರು. ಮಾಹಿತಿ ಆಧಾರದ ಮೇಲೆ ಸದ್ಯ ಲಕ್ಷ್ಮೀನಾರಾಯಣನನ್ನು ಬಂಧಿಸಲಾಗಿದೆ. ಬಂಧಿತನಿಂದ 5 ಸಾವಿರ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.

ಮೈಸೂರು: ಆರೋಗ್ಯ ಸಿಬ್ಬಂದಿಯ ಜೊತೆ ವಾಹನ ಚಾಲಕ ಗಲಾಟೆ ಮೈಸೂರಿನಲ್ಲಿ ಲಸಿಕೆ ನೀಡಲು ಪರದಾಟ ಮುಂದುವರಿದೆ. ಈ ವೇಳೆ ಆರೋಗ್ಯ ಸಿಬ್ಬಂದಿಯ ಜೊತೆ ವಾಹನ ಚಾಲಕ ಗಲಾಟೆ ಮಾಡಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಮಾತಿನ ಸಮರ ಹೋಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೆಪುರ ಹಾಡಿಯಲ್ಲಿ ಈ ಘಟನೆ ನಡೆದಿದೆ. ಲಸಿಕೆ ಹಾಕಲು ಆರೋಗ್ಯ ಸಿಬ್ಬಂದಿ ಹಾಡಿಗೆ ತೆರಳಿದ್ದರು. ಈ ವೇಳೆ ಕೃಷಿ ಕೆಲಸಕ್ಕೆ ಜನರನ್ನು ವ್ಯಕ್ತಿ ಕರೆದೊಯ್ತಿದ್ದರು. ಜನರನ್ನು ಕರೆದೊಯ್ಯುತ್ತಿದ್ದಾಗ ವಾಹನ ನಿಲ್ಲಿಸಿದ ಹಿನ್ನೆಲೆ, ಆರೋಗ್ಯ ಸಿಬ್ಬಂದಿಯ ಜೊತೆ ಚಾಲಕ ವಾಗ್ವಾದಕ್ಕಿಳಿದಿದ್ದಾರೆ.

 

ಇದನ್ನೂ ಓದಿ: ನಾಲ್ಕು ವ್ಯಕ್ತಿಗಳು, 20 ಜಾನುವಾರುಗಳನ್ನು ಕೊಂದ ನರಭಕ್ಷಕ ಹುಲಿಯ ಬೇಟೆಗೆ ಅರಣ್ಯ ಇಲಾಖೆ ಆದೇಶ

ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ

Published On - 10:34 am, Wed, 3 November 21

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ