AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ; ನಾಲ್ವರು ಪೊಲೀಸ್ ವಶಕ್ಕೆ

ರಾಷ್ಟ್ರೀಯ ಹೆದ್ದಾರಿ 66ರ ಹೊಳೆಗದ್ದೆ ಟೋಲ್‌ಗೇಟ್ ಬಳಿ 13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ; ನಾಲ್ವರು ಪೊಲೀಸ್ ವಶಕ್ಕೆ
13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ
Follow us
TV9 Web
| Updated By: preethi shettigar

Updated on:Nov 03, 2021 | 10:52 AM

ಉತ್ತರ ಕನ್ನಡ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಳೆಗದ್ದೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೊಳೆಗದ್ದೆ ಟೋಲ್‌ಗೇಟ್ ಬಳಿ 13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪೊಲೀಸರ ತಪಾಸಣೆ ವೇಳೆ ಜಾನುವಾರುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವುದು ಬೆಳಕಿಗೆ ಬಂದಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

ಕೊಪ್ಪಳ: ದೀಪಾವಳಿ ಹಬ್ಬದ ವೇಳೆ ಇಸ್ಪೀಟ್ ಆಡಿದ್ರೆ ಕಾನೂನು ಕ್ರಮ ದೀಪಾವಳಿ ಹಬ್ಬದ ಹಿನ್ನಲೆ ಯಾರು ಜೂಜಾಡುವಂತಿಲ್ಲ ಎಂದು ಕೊಪ್ಪಳ ಜಿಲ್ಲೆಯ ಹಳ್ಳಿಗಳಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದರ ಹೊರತಾಗಿಯೂ ಜೂಜಾಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಗ್ರಾಮಗಳಲ್ಲಿ ಮೈಕ್ ಮೂಲಕ ಪೊಲೀಸರು ಈ ವಿಚಾರವನ್ನು ಪ್ರಚಾರ ಮಾಡಿದ್ದಾರೆ. ದೀಪಾವಳಿಯಲ್ಲಿ ಇಸ್ಪೇಟ್ ಆಟವಾಡುವುದು ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿದೆ. ಹೀಗಾಗಿ ಹಬ್ಬದ ನೆಪದಲ್ಲಿ ಜೂಜಾಟ ಆಡುವವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ಇಸ್ಪೀಟ್ ಆಟಕ್ಕೆ ನಿರ್ಬಂಧ ಹೇರಿದ್ದಾರೆ.

ನೆಲಮಂಗಲ: ಮಾದನಾಯಕನಹಳ್ಳಿ ಪೊಲೀಸರಿಂದ ನಕಲಿ ಪೊಲೀಸ್ ಬಂಧನ ನಾನು ಪೊಲೀಸ್ ನನಗೆ ಮಾಮೂಲು ಕೊಡಬೇಕು ಎಂದು ಹೇಳಿ ಸಾವಿರಾರು ರೂಪಾಯಿ ದೋಚಿದ್ದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸರು ಲಕ್ಷ್ಮೀನಾರಾಯಣ(60)ನನ್ನು ಬಂಧಿಸಿದ್ದಾರೆ. ಬೈಲಕೋನೆನಾಹಳ್ಳಿ ಗ್ರಾಮದ ನಿಖಿಲ್ ಹಾಗೂ ಇತರೆ ಅಂಗಡಿಯವರಿಂದ ವೃದ್ಧ ಹಣ ಪಡೆದಿದ್ದ, ಅನುಮಾನಗೊಂಡು ಸ್ಥಳೀಯರು ಪೊಲೀಸ್​ ಠಾಣೆಗೆ ಮಾಹಿತಿ ಕೊಟ್ಟಿದ್ದರು. ಮಾಹಿತಿ ಆಧಾರದ ಮೇಲೆ ಸದ್ಯ ಲಕ್ಷ್ಮೀನಾರಾಯಣನನ್ನು ಬಂಧಿಸಲಾಗಿದೆ. ಬಂಧಿತನಿಂದ 5 ಸಾವಿರ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.

ಮೈಸೂರು: ಆರೋಗ್ಯ ಸಿಬ್ಬಂದಿಯ ಜೊತೆ ವಾಹನ ಚಾಲಕ ಗಲಾಟೆ ಮೈಸೂರಿನಲ್ಲಿ ಲಸಿಕೆ ನೀಡಲು ಪರದಾಟ ಮುಂದುವರಿದೆ. ಈ ವೇಳೆ ಆರೋಗ್ಯ ಸಿಬ್ಬಂದಿಯ ಜೊತೆ ವಾಹನ ಚಾಲಕ ಗಲಾಟೆ ಮಾಡಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಮಾತಿನ ಸಮರ ಹೋಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೆಪುರ ಹಾಡಿಯಲ್ಲಿ ಈ ಘಟನೆ ನಡೆದಿದೆ. ಲಸಿಕೆ ಹಾಕಲು ಆರೋಗ್ಯ ಸಿಬ್ಬಂದಿ ಹಾಡಿಗೆ ತೆರಳಿದ್ದರು. ಈ ವೇಳೆ ಕೃಷಿ ಕೆಲಸಕ್ಕೆ ಜನರನ್ನು ವ್ಯಕ್ತಿ ಕರೆದೊಯ್ತಿದ್ದರು. ಜನರನ್ನು ಕರೆದೊಯ್ಯುತ್ತಿದ್ದಾಗ ವಾಹನ ನಿಲ್ಲಿಸಿದ ಹಿನ್ನೆಲೆ, ಆರೋಗ್ಯ ಸಿಬ್ಬಂದಿಯ ಜೊತೆ ಚಾಲಕ ವಾಗ್ವಾದಕ್ಕಿಳಿದಿದ್ದಾರೆ.

 

ಇದನ್ನೂ ಓದಿ: ನಾಲ್ಕು ವ್ಯಕ್ತಿಗಳು, 20 ಜಾನುವಾರುಗಳನ್ನು ಕೊಂದ ನರಭಕ್ಷಕ ಹುಲಿಯ ಬೇಟೆಗೆ ಅರಣ್ಯ ಇಲಾಖೆ ಆದೇಶ

ಕಾರಲ್ಲಿ ಜಾನುವಾರುಗಳ ಅಕ್ರಮ ಸಾಗಾಟ.. ಸಿನಿಮೀಯ ಶೈಲಿಯಲ್ಲಿ ಖಾಕಿಯಿಂದ ರಕ್ಷಣಾ ಕಾರ್ಯಾಚರಣೆ

Published On - 10:34 am, Wed, 3 November 21

ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ