AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

ಬಿಜೆಪಿ ಶಾಸಕ ಹಾಗೂ ಮುಖ್ಯಾಧಿಕಾರಿ ಕಿರುಕುಳಕ್ಕೆ ಬೇಸತ್ತು ಕುಮಟಾ ಪುರಸಭೆ ಕಂದಾಯ ನಿರೀಕ್ಷಕ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕುಮಟಾ ಪುರಸಭಾ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ ಹಾಗೂ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಹೆಸರು ಬರೆದಿಟ್ಟು ರಾತ್ರಿ ಕಣ್ಮರೆಯಾಗಿದ್ದಾರೆ. ಇದರಿಂದ ಕುಟುಂಬದಲ್ಲಿ ಆತಂಕ ಮನೆ ಮಾಡಿದ್ದು, ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!
Venkatesh R
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Oct 08, 2025 | 6:05 PM

Share

ಕಾರವಾರ, (ಅಕ್ಟೋಬರ್ 08): ಬಿಜೆಪಿ ಶಾಸಕ ಹಾಗೂ ಮುಖ್ಯಾಧಿಕಾರಿ ಕಿರುಕುಳಕ್ಕೆ ಬೇಸತ್ತು ಕುಮಟಾ ಪುರಸಭೆ ಕಂದಾಯ ನಿರೀಕ್ಷಕ ನಾಪತ್ತೆಯಾಗಿದ್ದಾರೆ. ಕುಮಟಾ ಪುರಸಭಾ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ ಹಾಗೂ ಶಾಸಕ ದಿನಕರ್ ಶೆಟ್ಟಿ (BJP MLA Dinakar Shetty) ಹೆಸರು ಬರೆದಿಟ್ಟು ನಿನ್ನೆ(ಅಕ್ಟೋಬರ್ 07) ರಾತ್ರಿ ಕಣ್ಮರೆಯಾಗಿದ್ದಾರೆ. ಕುಮಟಾ ಪುರಸಭೆಯಲ್ಲಿ ಆರ್.ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ ಆರ್ ಎನ್ನುವರು ನಾಪತ್ತೆಯಾಗಿದ್ದು ಕುಟುಂಬದಲ್ಲಿ ಆತಂಕ ಮನೆ ಮಾಡಿದೆ. ಈ ಸಂಬಂಧ ಭಟ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಭಟ್ಕಳದ ನಿವಾಸಿಯಾಗಿದ್ದ ವೆಂಕಟೇಶ ಆರ್ ಮನೆಯಲ್ಲೇ ಲೆಟರ್ ಬರೆದಿಟ್ಟಿದ್ದಾರೆ. ಅಲ್ಲದೇ ತಡರಾತ್ರಿ 2 ಗಂಟೆಗೆ ಪುರಸಭಾ ಸಿಬ್ಬಂದಿ ವಾಟ್ಸಪ್ ಗ್ರೂಪ್‌ನಲ್ಲಿ ಪತ್ರವನ್ನು ಹರಿಬಿಟ್ಟಿದ್ದಾರೆ. ‘ಬಿ’ ಖಾತಾ ಇರುವುದನ್ನು ‘ಎ’ ಖಾತಾಗೆ ಬದಲಿಸುವಂತೆ ಒತ್ತಡ ಹಾಗೂ 4 ಲಕ್ಷ ರೂ. ಹಣಕ್ಕಾಗಿ ವೆಂಕಟೇಶನನ್ನು ಮುಖ್ಯಾಧಿಕಾರಿ ಪೀಡಿಸುತ್ತಿದ್ದರು. ಅಶ್ಲೀಲ ಪದ ಬಳಸಿ, ಮಾನಸಿಕ ಹಿಂಸೆ, ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕುವೈತ್​ನಲ್ಲಿ ಉದ್ಯೋಗದ ಆಮಿಷ: 30 ಯುವಕರಿಗೆ ಒಟ್ಟು 52 ಲಕ್ಷ ರೂ. ಪಂಗನಾಮ

ಕಾನೂನು ಮೀರಿ ಖಾತಾ ಬದಲಿಸಲು ವೆಂಕಟೇಶ್ ನಿರಾಕರಿಸಿದ್ದಾರೆ. ಆಗ ಶಾಸಕ ದಿನಕರ ಶೆಟ್ಟಿ ಒತ್ತಡ ಇದೆ ಎಂದು ಕುಡಿದ ಮತ್ತಿನಲ್ಲೇ ಮುಖ್ಯಾಧಿಕಾರಿ ಬೈದಿದ್ದಾರೆ. 4 ಲಕ್ಷಕ್ಕಾಗಿ ಶಾಸಕ ದಿನಕರ ಶೆಟ್ಟಿಯಿಂದ ಮುಖ್ಯಾಧಿಕಾರಿಗೆ ಒತ್ತಡ ಹಾಕಿದ್ದಾರೆ ಎಂದು ವೆಂಕಟೇಶ ಬರೆದಿಟ್ಟ ಪತ್ರದಲ್ಲಿದೆ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದಾರೆ.

ಸದ್ಯ ಭಟ್ಕಳ ಪೊಲೀಸರು ವೆಂಕಟೇಶ ಹುಡುಕಾಟ ನಡೆಸಿದ್ದಾರೆ. ಮತ್ತೊಂದೆಡೆ ಮುಖ್ಯಾಧಿಕಾರಿಯನ್ನ ಅಮಾನತ್ತು ಮಾಡುವಂತೆ ಪುರಸಭೆ ಸಿಬ್ಬಂದಿ ಆಗ್ರಹಿಸಿದ್ದಾರೆ. ಇನ್ನು ಕುಮಟಾ ಪುರಸಭೆ ಮುಂಭಾಗ ದಲಿತ ಸಂಘಟನೆ ಮುಖಂಡರು ಜಮಾಯಿಸಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Wed, 8 October 25

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ